ವಿಜಯಪುರ | ಮಹಿಳಾ ವಿವಿ ಆವರಣದಲ್ಲಿರುವ ಅಕ್ಕಮಹಾದೇವಿ ಮೂರ್ತಿ ತೆರವಿಗೆ ಆಗ್ರಹ

Date:

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿನ ಅಕ್ಕಮಹಾದೇವಿಯವರ ಅರಬೆತ್ತಲೆ ಮೂರ್ತಿ ತೆರವುಗೊಳಿಸಿ, ಶುಭ್ರ ವಸ್ತ್ರದ ಸೀರೆಯುಟ್ಟ ಅಕ್ಕನ ಮೂರ್ತಿ ಸ್ಥಾಪಿಸಿ ಎಂದು ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಶಶಿಕಾಂತ ಆರ್ ಪಟ್ಟಣ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ ಅವರು, “ವಿರಾಗಿಣಿ ಅಕ್ಕಮಹಾದೇವಿ ಎಂದೂ ಅರೆಬೆತ್ತಲೆ ಆಗಿರಲಿಲ್ಲ. ಶರಣ ಸಂಕುಲದ ಶ್ರೇಷ್ಠ ಅನುಭವಿಯಾಗಿದ್ದ ಅವರು ಅರೆಬತ್ತಲೆಯಾಗಿ ಬಂದಿಲ್ಲ ಎನ್ನುವುದಕ್ಕೆ ಹಲವು ಉಲ್ಲೇಖ ಮತ್ತು ಪುರಾವೆಗಳಿವೆ. ಅರೆಬೆತ್ತಲೆ ಮೂರ್ತಿಯು ಶರಣರಿಗೆ ಹಾಗೂ ವಿರಾಗಿಣಿ ಅಕ್ಕಮಹಾದೇವಿಗೆ ಮಾಡಿದ ದ್ರೋಹ ಮತ್ತು ಅಪಮಾನವಾಗಿದೆ” ಎಂದರು.

“ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬಸವ ಅಧ್ಯಯನ ಪೀಠ ಆರಂಭಿಸಬೇಕು ಮತ್ತು ಸರ್ಕಾರ ಅನುದಾನ ಒದಗಿಸಬೇಕು. ಬಸವೇಶ್ವರರ ಜನ್ಮಸ್ಥಳವಾದ ವಿಜಯಪುರ ಜಿಲ್ಲೆಯ ಹೆಸರನ್ನು ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣ ಮಾಡಬೇಕು. ವಚನಗಳ ಸಂರಕ್ಷಣೆಗೆ ಶ್ರಮಿಸಿದ ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ‘ಪಂಪ ಪ್ರಶಸ್ತಿ’ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ದಲಿತರ ಭೂಮಿ, ವಸತಿ ಹಕ್ಕಿಗಾಗಿ ನಾಳೆ ಧರಣಿ

“ಪಂಚಾಚಾರ್ಯರಿಗೂ ಬಸವತತ್ವಕ್ಕೂ ಯಾವುದೇ ಸಂಬಂಧವಿಲ್ಲ. ಎರಡರ ನಡುವೆ ಸಾಕಷ್ಟು ಭಿನ್ನತೆ ಇದೆ. ಬಸವಣ್ಣ ಎಲ್ಲಿಯೂ ವೀರಶೈವ ಪದ ಬಳಸಿಲ್ಲ. ವೀರಶೈವ ಪದ ಬಳಕೆ 1386ರಲ್ಲಿ ಬಂದಿದೆ. ಅದಕ್ಕೂ ಮೊದಲು ಇರಲಿಲ್ಲ. ಬಸವಣ್ಣ ಹಿಂದೂ ಅಥವಾ ವೀರಶೈವ ವಿರೋಧಿಯಲ್ಲ. ಹಾಗೆಯೇ ಬಸವಣ್ಣ ವೀರಶೈವನು ಅಲ್ಲ. ಹಿಂದೂ ಅಲ್ಲ” ಎಂದು ಹೇಳಿದರು.

ಈ ವೇಳೆ ಬಸವನುಯಾಯಿಗಳು ಹಾಗೂ ಮುಖಂಡರು ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...