ವಿಜಯಪುರ | ಈ ಬಾರಿ ಡೆಂಘೀ ಜ್ವರ ಹೆಚ್ಚಳ; ಮುಚ್ಚಿರುವ ಆರೋಗ್ಯ ಕೇಂದ್ರಗಳನ್ನು ತೆರೆಯುವಂತೆ ಮನವಿ

Date:

ಈ ಬಾರಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಜನತೆಯನ್ನು ಅತಿಹೆಚ್ಚು ಬಾಧಿಸುತ್ತಿದೆ. ಇದನ್ನು ತಡೆಗಟ್ಟಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ಅವರು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿ, “ತಾಲೂಕಿನಲ್ಲಿ ವ್ಯಾಪಿಸುತ್ತಿರುವ ಡೆಂಘೀ ಜ್ವರದಿಂದ ಗ್ರಾಮೀಣ ಭಾಗದ ಜನತೆಯ ಆರೋಗ್ಯಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಬೇಕು. ಹಲವೆಡೆ ಹಳ್ಳಿಗಳಲ್ಲಿ ವೈದ್ಯರ ಕೊರತೆಯಿಂದ ಮುಚ್ಚಿರುವ ಆರೋಗ್ಯ ಹಿರಿಯ, ಪ್ರಾಥಮಿಕ ಹಾಗೂ ಉಪಕೇಂದ್ರಗಳನ್ನು ಪುರಾರಂಭಿಸಬೇಕು. ಅಗತ್ಯ ವೈದ್ಯಾಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಿ, ಆರೋಗ್ಯ ಸೇವೆಗಳನ್ನು ಒದಗಿಸಲು ಅಗತ್ಯಗತ್ಯವಾದ ಕ್ರಮ ಕೈಗೊಳ್ಳಬೇಕು” ಎಂದರು.

“ವಿಪರೀತ ಜ್ವರ, ಮೈಕೈ, ಕಣ್ಣು, ತಲೆ ಹಾಗೂ ತೀವ್ರ ಕೀಲುನೋವು ರೋಗದ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಡೆಂಘೀ ಇರುವುದು ದೃಢಪಟ್ಟಲ್ಲಿ, ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತದೆ. ಹಾಗಾಗಿ ಸಾರ್ವಜನಿಕರು ಡೆಂಘೀಗೆ ಹೆದರುವ ಅಗತ್ಯವಿಲ್ಲ. ಡೆಂಘೀ ಜ್ವರದಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬೇಕಾದರೆ ಮುಖ್ಯವಾಗಿ ಸೊಳ್ಳೆಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೋಗ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ನೀರು ಶೇಖರಣೆಯಾಗದಂತೆ ನೀರಿನ ತೊಟ್ಟಿ, ಬ್ಯಾರಲ್‌ಗಳನ್ನು ವಾರಕೊಮ್ಮೆ ಸ್ವಚ್ಛಗೊಳಿಸಬೇಕು. ಈಗ ಮಳೆಗಾಲ ಪ್ರಾರಂಭವಾಗಿದ್ದು, ತ್ಯಾಜ್ಯ ವಸ್ತುಗಳಾದ ಟೈಯರ್, ಎಳನೀರು ಚಿಪ್ಪು, ಇತರೆ ಪ್ಲಾಸ್ಟಿಕ್ ವಸ್ತುಗಳಲ್ಲಿ ನೀರು ಸಂಗ್ರಗಗೊಂಡು ಸೊಳ್ಳೆಗಳ ಉತ್ಪತ್ತಿಗಳಾಗುತ್ತವೆ. ಆದುದರಿಂದ ನೀರು ಸಂಗ್ರಹವಾಗದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಗ್ರಾಮಗಳಲ್ಲಿ ಮನವರಿಕೆ ಕಾರ್ಯಕ್ರಮ ನಡೆಸಬೇಕು” ಎಂದು ಮನವಿ ಮಾಡಿದರು.

“ಡೆಂಘೀ ದೃಢಪಟ್ಟರೆ ಅಗತ್ಯ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಚಿಕಿತ್ಸೆ ವಿಳಂಬವಾದಲ್ಲಿ ಸಾವುಗಳು ಸಂಭವಿಸಬಹುದು. ಇಂತಹ ಅವಗಡಗಳಿಗೆ ಕಾರಣವಾಗದಂತೆ ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು.‌ ಮನೆ ಮನೆಗೆ ಆರೋಗ್ಯ ಕಾರ್ಯಕರ್ತೆಯರು ಭೇಟಿ ನೀಡಿ, ಅರಿವು ಮೂಡಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಸ್ತೆಬದಿ ನಿಲ್ಲಿಸುವ ಲಾರಿ ತೆರವುಗೊಳಿಸುವಂತೆ ದಲಿತ ಸೇನೆ ಆಗ್ರಹ

ಈ ಸಂದರ್ಭದಲ್ಲಿ ಮಲ್ಲಮ್ಮ ಕೊಂಡಗುಳ, ಶರಣಮ್ಮ, ರಮೇಶ್ ಚಲುವಾದಿ, ಆಕಾಶ ಬಿರಾದಾರ, ಪ್ರಜ್ವಲ್ ಮಲ್ಲಾರಿ, ಶಿವಾನಂದ ಖಾಚಾಪುರ ಸೇರಿದಂತೆ ಇತರ ಗ್ರಾಮಗಳ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...