ವಿಜಯಪುರ | ವೈದ್ಯಕೀಯ ಕಾಲೇಜು ಸ್ಥಾಪನೆ ಚರ್ಚೆ: ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಎಂ ಬಿ ಪಾಟೀಲರ ತಿರುಗೇಟು

Date:

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂಬುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಅನೇಕ ಬಾರಿ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಸಚಿವ ಶಿವಾನಂದ ಪಾಟೀಲ ಅವರೂ ಕೂಡ ವೈದ್ಯಕೀಯ ಸಚಿವರನ್ನು ಭೇಟಿ ಮಾಡಲಿ, ಬೇಕಾದರೆ ನಾನೂ ಅವರೊಂದಿಗೆ ಬರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಪ್ರಸ್ತಾಪ ವಿಚಾರವಾಗಿ ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ಸಚಿವರಿಗೆ ಮಾತನಾಡಲು ಸಚಿವ ಸಂಪುಟ ಹಾಗೂ ಫೋರಂ ಇದೆ. ಅಲ್ಲದೇ, ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರಿದ್ದು, ಅವರೊಂದಿಗೆ ಕುಳಿತುಕೊಂಡು ಚರ್ಚೆ ಮಾಡಬೇಕು. ಇಲ್ಲಿ ಬಂದು ಹೇಳಿಕೆ ನೀಡುವಂತಹದ್ದು ಮತ್ತು ಅಸಹಕಾರ ಮಾಡಿದರು ಎಂಬುವುದಾಗಿ ನನ್ನ ಹೆಸರನ್ನೂ ಬಳಸಿಕೊಂಡಿದ್ದಾರೆ” ಎಂದು ಶಿವಾನಂದ ಪಾಟೀಲರ ಹೇಳಿಕೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.

“ನನಗಂತೂ ಈಗಾಗಲೇ ವೈದ್ಯಕೀಯ ಕಾಲೇಜು, ಡೀಮ್ ವಿಶ್ವವಿದ್ಯಾಲಯ ಇದೆ. ಬೇಕಾದರೆ ಇನ್ನೂ ಹತ್ತು ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ನಾವು ಮಾಡಬಹುದು. ಬೆಂಗಳೂರಿನಲ್ಲೂ ಮಾಡುವ ಅವಕಾಶ ಇದೆ. ಇದರಲ್ಲಿ ಯಾವುದೇ ಸ್ವಾರ್ಥ ಇಲ್ಲ. ಆದರೆ, ಅವರು ಈ ರೀತಿ ಹೆಸರು ಬಳಕೆ ಮಾಡುವುದು ಹಾಗೂ ಪದೇ ಪದೆ ಮುಜುಗರದ ಹೇಳಿಕೆ ನೀಡುವುದು ಸರಿಯಲ್ಲ. ಅಲ್ಲದೇ, ಸಹಕಾರ ನೀಡದಂತಹ ಯಾವುದೇ ಪ್ರಸಂಗ ಬಂದಿಲ್ಲ. ನಾನು ಐದು ವರ್ಷ ಸಚಿವನಾಗಿದ್ದಾಗ ಯಾರೆಲ್ಲ ಎಷ್ಟು ಸಹಕಾರ ಮಾಡಿದ್ದರು ಎಂಬುದನ್ನು ಹೇಳಿದರೆ ದೊಡ್ಡ ಪುಸ್ತಕವೇ ಆಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಭಿವೃದ್ಧಿ ಪತ್ರಿಕೋದ್ಯಮದ ಜನಕ, ಶ್ರೇಷ್ಠ ಪತ್ರಕರ್ತ ಅಂಬೇಡ್ಕರ್: ಟೆಲೆಕ್ಸ್ ರವಿಕುಮಾರ್

ಇದೇ ವೇಳೆ, ಅಲ್ ಅಮೀನ್ ವೈದ್ಯಕೀಯ ಕಾಲೇಜನ್ನು ಬಿಎಲ್‌ಡಿಇ ಸಂಸ್ಥೆಗೆ ಪುಕ್ಕಟ್ಟಿಯಾಗಿ ಅವರು ಕೊಟ್ಟರೂ, ನಮಗೆ ಬೇಡ. ನಾವು ತೆಗೆದುಕೊಳ್ಳುವುದೂ ಇಲ್ಲ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...