ವಿಜಯಪುರ | ಪಾರದರ್ಶಕತೆಯಿಂದ ಪರೀಕ್ಷೆಗಳನ್ನು ನಡೆಯುವಂತೆ ಜಿಲ್ಲಾ ಸಿಇಓ ರಿಷಿ ಆನಂದ ಸೂಚನೆ

Date:

2024-2025ನೇ ಸಾಲಿನ ಎಸ್ಎಸ್ಎಲ್‌ಸಿ-2ರ ಪರೀಕ್ಷೆ ನಡೆದಿರುವ ನಿಮಿತ್ಯ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಿಲ್ಲಾ ಪಂಚಾಯಿತ್ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರೀಕ್ಷೆಗಳಲ್ಲಿ ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕ ಯಂತ್ರಗಳು, ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿ, ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಮಾಡಬೇಕು. ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೆ ಈಡಾಗದಂತೆ ಸುಸೂತ್ರವಾಗಿ ನಡೆಸಬೇಕು.

ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಮತ್ತು ಶಿಸ್ತಿನಿಂದ ನಡೆಸುವುದು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಯುವಪೀಳಿಗೆ ಮೊಬೈಲ್ ಪ್ರಪಂಚದಲ್ಲಿ ಸಾಮಾಜಿಕ ಜವಾಬ್ದಾರಿ ಮರೆಯುತ್ತಿದೆ: ಶಿವಪ್ರಸಾದ್

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯ ಅಧಿಕಾರಿ ಎಮ್. ಎ. ಗಳೆದಗುಡ್ಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ರೇಣುಕಾ ಕಲಬುರ್ಗಿ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಎಮ್. ಎಸ್. ಬ್ಯಾಹಟ್ಟಿ, ಎಪಿಸಿ ಆರ್. ಬಿ. ಪಾಟೀಲ, ಉಪನ್ಯಾಸಕ ನಾರಾಯಣ ಬಾಬಾನಗರ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...