ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

Date:

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಇಂಡಿ ತಾಲೂಕಿನ ಅಗರಖೇಡ ಹಾಗೂ ಹಿರೇಬೇನೂರಲ್ಲಿ ಗುರುವಾರ ನಡೆದ ಜಿ.ಪಂ ವ್ಯಾಪ್ತಿಯ ಲೋಕಸಭೆ ಚುನಾವಣೆ ಸಭೆಯಲ್ಲಿ ಮಾತನಾಡಿ, “ಭೀಮೆಯ ದಡದ ಗ್ರಾಮಗಳಿಗೆ ಹಲವು ಅನುಕೂಲ ಮಾಡಿಕೊಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನೀರಾವರಿ, ಪ್ರವಾಸೋದ್ಯಮ, ಲಿಂಬೆ ಬೆಳೆಗಳಿಗೆ ಪ್ರಾತಿನಿಧ್ಯ ಸೇರಿದಂತೆ ನೂರಾರು ಕೆಲಸಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲಸ ಮಾಡುವವರಿಗೆ ಮತ ನೀಡಿದರೆ ಅವರಿಗೆ ಉತ್ತೇಜನ ಸಿಗುತ್ತದೆ. ಆಧ್ಯಾತ್ಮಿಕ ಸ್ವರೂಪದ ನೆಲ ಇದಾಗಿದೆ. ಈ ಕ್ಷೇತ್ರವನ್ನು ಹಿಂದೆಂದೂ ಕಾಣದಂತಹ ಅಭಿವೃದ್ಧಿ ಮಾಡಿದ್ದೇವೆ. ಸಾವಿರಾರು ಕೋಟಿ ರೂ. ಅನುದಾನ ನೀಡಿದ್ದೇವೆ. ಇಂಡಿ ನಗರಕ್ಕೆ ನಿರಂತರ ನೀರು, ರಸ್ತೆ, ಭೀಮಾಶಂಕರ ಸಕ್ಕರೆ ಕಾರಖಾನೆ ನಮ್ಮ ಸಾಧನೆಗಳು” ಎಂದು ಹೇಳಿದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, “ಮೋದಿಯವರು ಉದ್ಯಮಪತಿಗಳ ಬಗ್ಗೆ ತೋರಿದ ಕಾಳಜಿ ರೈತರಿಗೆ ತೋರಿಸಿದ್ದರೆ ಈ ದೇಶ ಉದ್ಧಾರವಾಗುತ್ತಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಮಿಗಳ ಹದಿನಾಲ್ಕು ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿರುವ ಮೋದಿಯವರ ಕಣ್ಣಿಗೆ ರೈತರ ಕೇವಲ ಒಂದೂವರೆ ಲಕ್ಷ ಕೋಟಿ ಸಾಲ ಕಾಣಲಿಲ್ಲ. ಇಲ್ಲಿನ ಸಂಸದ ಏನೊಂದು ಕೆಲಸ ಮಾಡಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತ ನೀಡಿದರೆ ನಿಮ್ಮ ಸೇವಕನಾಗಿ ದುಡಿಯುವೆ” ಎಂದು ಕೋರಿದರು.

ಇಲಿಯಾಸ್ ಬೋರಾಮಣಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಕಾರವಾಗಿದ್ದನ್ನು  ವಿವರಿಸಿ, ತಾಲೂಕಿಗೆ ಪ್ರತಿ ತಿಂಗಳು ಹದಿಮೂರು ಕೋಟಿಯಷ್ಟು ಹಣ ಈ ಯೋಜನೆಯಿಂದ ಬರುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ

ಮುಖಂಡರಾದ ಅಣ್ಣಾರಾಯ ಬಿದರಕೋಟಿ, ಜಟ್ಟೆಪ್ಪ ರವಳಿ, ಎಂ.ಆರ್.ಪಾಟೀಲ, ಕಲ್ಯಾಣಗೌಡ ಪಾಟೀಲ, ಭೀಮಣ್ಣ ಕವಲಗಿ, ಶೈಲಶ್ರೀ ಜಾದ್ವ, ಸಿದ್ಧರಾಯ ಐರೋಡಗಿ, ಕಲ್ಲನಗೌಡ, ಬ್ಲಾಕ್ ಅಧ್ಯಕ್ಷರಾದ ಜಾವೇದ್ ಮೋಮಿನ್, ಕಲ್ಲನಗೌಡ ಬಿರಾದಾರ, ಶ್ರೀಶೈಲ, ಪೈಗಂಬರ್ ದೇಸಾಯಿ, ಭೋಜಪ್ಪಗೌಡ ಸಾಹುಕಾರ, ದಸ್ತಗೀರ್, ಗಿರೀಶಗೌಡ ಪಾಟೀಲ, ಭೀಮಣ್ಣ ಕವಲಗಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...