ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಕುರಿತು ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದ ವಿಜೇತರಿಗೆ ಪ್ರಥಮ ₹3 ಸಾವಿರ, ದ್ವಿತೀಯ ₹2 ಸಾವಿರ ಮತ್ತು ತೃತೀಯ ಸ್ಥಾನಕ್ಕೆ ₹1 ಸಾವಿರ ರೂಗಳ ನಗದು ಬಹುಮಾನ ನೀಡಲಾಗುವುದು.
ಪ್ರೌಢ ಶಾಲಾ ವಿಭಾಗದಲ್ಲಿ ಸ್ವಚ್ಛತೆ ಕುರಿತು ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಹಾಗೂ ಗಾಂಧೀಜಿಯವ ಸ್ವಾತಂತ್ರ್ಯದ ಕನಸು… ಈ ಮೂರು ವಿಷಯಗಳ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ: ಅಸ್ಪೃಶ್ಯತ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, ಇಂದಿನ ಸಮಾಜದಲ್ಲಿ ಸರ್ವೋದಯ ಮತ ಅಂತ್ಯೋದಯದ ಪ್ರಾಸಂಗಿಕತ ಹಾಗೂ ಬದಲಾವಣೆ ನನ್ನಿಂದಲೆ ಆರಂಭ – ಗಾಂಧೀಜಿಯವರ ಪಾಠ ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಆಯಾ ವಿಭಾಗದ ಪ್ರಥಮ ಬಹುಮಾನ ಪಡೆಯುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆಗಾಗಿ ಕಳಿಸಲಾಗುವುದು.
ಇದನ್ನೂ ಓದಿ: ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ
ಜಿಲ್ಲೆಯ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ, ಎಲ್ಲ ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ಪದವಿ ವಿದ್ಯಾರ್ಥಿ-ಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾ-ಲಯದ ಕುಲಸಚಿವರು ಪ್ರಬಂಧ ಸ್ವ-ರ್ಧೆಗಳನ್ನು ಆಯೋಜಿಸಿ, ಅತ್ಯುತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಿ ಸೆ.12 ರೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ವಿಜಯಪುರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.





