ವಿಜಯಪುರ | ನಿಗದಿತ ಅವಧಿಯೊಳಗೆ ಒಳಮೀಸಲಾತಿ ಸಮೀಕ್ಷೆ ಅಸಾಧ್ಯ; ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಡಿಎಸ್‌ಎಸ್ ಮುಖಂಡರ ಆಗ್ರಹ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮೇ 5ರಿಂದ ಆರಂಭಗೊಂಡಿರುವ ಒಳಮೀಸಲಾತಿ ಸಮೀಕ್ಷೆಯನ್ನು, ನಿಗದಿಯಾಗಿರುವ ಮೇ 17ರ ಅವಧಿಗೆ ಮುಗಿಸಲು ಸಮೀಕ್ಷೆದಾರರು ತಿಣುಕಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಡಿಎಸ್‌ಎಸ್ ಮುಖಂಡರಾದ ಗುಂಡಪ್ಪ ಛಲವಾದಿ, ಸಿದ್ದಣ್ಣ ಕಟ್ಟಿಮನಿ ಸಮಾಜ ಕಲ್ಯಾಣ ಅಧಿಕಾರಿ ಬಸಂತಿ ಮಠ ಅವರನ್ನು ಒತ್ತಾಯಿಸಿದರು.

ನಾಲತವಾಡದಲ್ಲಿ ಆರಂಭಗೊಂಡ ಒಳಮೀಸಲಾತಿ ಸಮೀಕ್ಷೆ ಪರಿಶೀಲನೆಗೆ ಆಗಮಿಸಿದ ವೇಳೆ ಅಧಿಕಾರಿ ಬಸಂತಿ ಅವರಿಗೆ ಮನವಿ ಮಾಡಿದ ಮುಖಂಡರು, “ನೀವು ನೀಡಿದ ಕಾಲಮಿತಿಯಲ್ಲಿ ಸಮೀಕ್ಷೆ ಮುಕ್ತಾಯಗೊಳಿಸುವುದು ಬಹುತೇಕ ಅನುಮಾನವಾಗಿದೆ. ಆದ್ದರಿಂದ ಹೆಚ್ಚಿನ ಸಿಬ್ಬಂದಿ ನೇಮಿಸಿ, ಇಲ್ಲ ಸಮೀಕ್ಷೆ ಅವಧಿ ವಿಸ್ತರಿಸಬೇಕು” ಎಂದರು.

“ಪ್ರತಿ ಕುಟುಂಬಕ್ಕೆ ದತ್ತಾಂಶ ಸಂಗ್ರಹಕ್ಕೆ ಕನಿಷ್ಠ ಅರ್ಧ ಗಂಟೆ ತೆಗೆದುಕೊಳ್ಳುತ್ತಿದೆ. ಪಟ್ಟಣದಲ್ಲಿ ಸಾವಿರಾರು ಕುಟುಂಬಗಳಿವೆ. ಹೀಗಾದ್ರೆ ಅವಧಿಯೊಳಗೆ ಸಮೀಕ್ಷೆ ಅಸಾಧ್ಯವಾಗುತ್ತದೆ. 101 ಉಪ ಜಾತಿಗಳು ಪರಿಶೀಲನೆ ಜತಗೆ ಕುಟುಂಬಸ್ಥರ ದತ್ತಾಂಶ ಸೇರ್ಪಡೆ ಸೂಕ್ತ ದಾಖಲೆ ಪಡೆಯಲು ಹಾಗೂ ಅವರ ಜಾತಿ ನಮೂದಿಸಲು ಸಿಬ್ಬಂದಿಗೆ ಸಮಯ ಬೇಕು. ಜತಗೆ ಸರ್ವರ್ ಸಮಸ್ಯೆಯೂ ಇದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮರ ಕಡಿತ ಕಾರ್ಯಕ್ಕೆ ವಿರೋಧ; ನೆಲದಡಿ ವಿದ್ಯುತ್ ತಂತಿ ಅಳವಡಿಕೆಗೆ ಆಗ್ರಹ

ಹೋರಾಟಗಾರರು ನಾಲತವಾಡ ಭಾಗದಲ್ಲಿ “ಬೇಡ ಜಂಗಮ ಜಾತಿಗೆ ಸೇರಿದ ಯಾವುದೇ ಕುಟುಂಬಗಳಿಲ್ಲ. ಒಂದು ವೇಳೆ ತಾವು ಅವರ ಮಾತು ಕೇಳಿ ಕಾಲಂಗಳಲ್ಲಿ ಬೇಡ ಜಾತಿ ಜಂಗಮ ಎಂದು ಸೇರ್ಪಡೆ ಮಾಡಿದರೆ ನಿಮ್ಮ ಹಾಗೂ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಡಿಎಸ್‌ಎಸ್‌ ಮುಖಂಡರು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

“ಪಟ್ಟಣದಲ್ಲಿ ಹೆಚ್ಚಿನ ಸಂಬಂಧಿ ನೇಮಿಸಲು ಸ್ಥಳದಲ್ಲಿ ಆದೇಶ ಮಾಡಿದ್ದೇನೆ. ದತ್ತಾಂಶಗಳ ಸಂಗ್ರಹಕ್ಕೆ ತಾವು ಸಹಕರಿಸಬೇಕು. ಅವಧಿ ವಿಸ್ತರಣೆ ಕುರಿತು ಮೇಲಧಿಕಾರಿಗಳ ಮಟ್ಟದಲ್ಲಿದೆ. ಸಾಧ್ಯವಾದಷ್ಟು ಅವಧಿಯೊಳಗೇ ಮುಗಿಸುವ ಲಕ್ಷಣಗಳಿವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...