ವಿಜಯಪುರ | ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

Date:

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ. ಆದರೆ, ಇದೀಗ ಮತ್ತೆ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದ್ದು ಜನರ ನಿದ್ದಗೇಡಿಸಿದೆ.

ಜಿಲ್ಲೆಯ ಉಕುಮನಾಳ ಗ್ರಾಮದಲ್ಲಿ ಡಿ.8ರಂದು ಬೆಳಗ್ಗೆ 6.52ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.  ರಿಕ್ಟರ್ ಮಾಪಕದಲ್ಲಿ 3.1 ರಷ್ಟು ತೀವ್ರತೆ ದಾಖಲಾಗಿದೆ ಎಂದು ಕೆಎಸ್ಎನ್‌ಡಿಎಂಸಿ ಅಧಿಕಾರಿಗಳು ದೃಢೀಕರಿಸಿದ್ದಾರೆ.

ಇನ್ನು ಕಳೆದೆರಡು ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪವಾಗುತ್ತಲೆ ಇದ್ದು ಜನರು ಆತಂಕದಲ್ಲಿ ಜೀವನ ಕಳೆಯುವಂತಾಗಿದೆ. ಜಿಲ್ಲೆಯಲ್ಲಿ ಭೂಕಂಪನದ ಸದ್ದು ಆಗಾಗ ಆಗುತ್ತಿದ್ದು ಇದರಿಂದ ಜನರಲ್ಲಿ ಆತಂಕ ಎದುರಾಗಿದೆ. ರಾತ್ರಿ, ಮಧ್ಯರಾತ್ರಿ ಸಮಯದಲ್ಲಿ ಏಕಾಏಕಿ ಶಬ್ದದೊಂದಿಗೆ ಭೂಮಿ ನಡುಗುತ್ತಿರುವುದು ಜನತೆ ನಿದ್ದೆಗೆಡುವಂತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಭಾಗದಲ್ಲಿ 2010ರಲ್ಲಿ 24 ಬಾರಿ ಭೂಮಿ ಕಂಪಿಸಿತ್ತು. ನಂತರ 2011ರಲ್ಲಿ ಒಂದು ಬಾರಿ ಕಂಪಿಸಿತ್ತು. ಇದಾದನಂತರ 2011ರಿಂದ 2021ರವರೆಗೆ ಭೂಕಂಪನದ ಸದ್ದೇ ಇರಲಿಲ್ಲ. 2021ರಿಂದ ಮತ್ತೆ ಭೂಕಂಪನ ಸಂಭವಿಸುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.

2010ರಲ್ಲಿ ತಳೆವಾಡ, ಕಲಗುರ್ಕಿ, ಮಲಘಾಣ, ಹುಣಶ್ಯಾಳ ಭಾಗದಲ್ಲಿ ಪದೆ ಪದೇ ಭೂಕಂಪನಗಳು ಸಂಭವಿಸಿದ ಕಾರಣ ಅಲ್ಲಿ ಭೂಕಂಪ ನಿರೀಕ್ಷಣಾ ಯಂತ್ರಗಳನ್ನು ಅಳವಡಿಸಲಾಗಿತ್ತು. ಅಲ್ಲಿ ದಾಖಲಾದ ಭೂಕಂಪನಗಳನ್ನು ಅವಲೋಕಿಸಿದಾಗ ಸಾಮಾನ್ಯವಾಗಿ 1.2 ಕಡಿಮೆ ತೀವ್ರತೆಯ ಭೂಕಂಪ ದಾಖಲಾಗಿದ್ದರೆ, ಒಂದು ಬಾರಿ ಮಾತ್ರ (29-01-2010)ರಲ್ಲಿ 3.1 ತೀವ್ರತೆ ದಾಖಲಾಗಿತ್ತು. ಇದನ್ನು ಹೊರತು ಪಡಿಸಿ ಉಳಿದೆಲ್ಲವೂ ಕಡಿಮೆ ತೀವ್ರತೆಯ ಭೂಕಂಪನಗಳು ಸಂಭವಿಸಿದ್ದವು. ಕಲಗುರ್ಕಿ ಗ್ರಾಮದಲ್ಲಿ ಅತೀ ಹೆಚ್ಚು ಬಾರಿ ಭೂಮಿ ಕಂಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...