ವಿಜಯಪುರ | ಶಿಕ್ಷಣ, ಸಂಘಟನೆ, ಹೋರಾಟವೇ ಶೋಷಿತರ ಮುಕ್ತಿಯ ಮಾರ್ಗ: ಬಸು ಮಾದರ

Date:

ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಆಯುಧಗಳಿಂದ ಶೋಷಿತರ ಸಮಸ್ಯೆ ಪರಿಹರಿಸಿಲು ಸಾಧ್ಯ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮನಗಂಡಿದ್ದರು ಎಂದು ಅಂಬೇಡ್ಕ‌ರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸು ಮಾದರ ಕಟ್ಟಿಮನಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಅಂಬೇಡ್ಕರ್ ಸೇನೆ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಡಾ. ಬಿ ಆರ್ ಅಂಬೇಡ್ಕರ್ ಅವರ ಮೌಲ್ಯಗಳನ್ನು ಅಳವಡಿಸಿಕೊಂಡು ವೈಚಾರಿಕವಾಗಿ ಸದೃಢರಾದಾಗ ಮಾತ್ರ ನಮ್ಮಲ್ಲಿ ಬದಲಾವಣೆ ಸಾಧ್ಯ” ಎಂದರು.

ತಾಲೂಕು ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ ಮಾತನಾಡಿ, “ಸಂಘಟೆನೆಯಲ್ಲಿ ಶಿಸ್ತನ್ನು ಕಡ್ಡಾಯವಾಗಿ ಪಾಲಿಸಬೇಕು. ಪದಾಧಿಕಾರಿಗಳು ಸಂಘಟನೆ ನಿಯಮ ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಸಂಘಟನೆ ತನ್ನ ಉದ್ದೇಶದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ನಾಯಕರಾದವರು ಇತರರಿಗೆ ಆದರ್ಶವಾಗಿರಬೇಕು. ಸಮುದಾಯದ ಸಮಸ್ಯೆಗಳಿಗೆ ಧ್ವನಿಯಾಗಿ ಸಂಘಟನೆ ಕಟ್ಟುವ ಅವಶ್ಯಕತೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಶಿವಪುರ ಗ್ರಾಮದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮೆಹಬೂಬ್ ಆರ್. ಅವಟಿ ಹಾಗೂ ಉಪಾಧ್ಯಕ್ಷರಾಗಿ ಮೌಲಾಲಿ ಪಿಂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಆದೇಶ ಪತ್ರ ವಿತರಿಸಲಾಯಿತು.

ಇದನ್ನೂ ಓದಿ: ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ

ಕಾರ್ಯದರ್ಶಿ ಮಹಾದೇವ ಅಸ್ಕಿ, ಅಂಬೇಡ್ಕರ್ ಸೇನೆ ತಾಲೂಕು ಘಟಕದ ಉಪಾಧ್ಯಕ್ಷ ಸೋಮು ಚಕ್ರವರ್ತಿ, ಪದಾಧಿಕಾರಿಗಳಾದ ಮರಿಯಪ್ಪ ಚಲವಾದಿ, ಚಾಂದ್ ಬಾಷಾ ವಜ್ಜಲ್, ಪರುಶುರಾಮ ನಾಲತವಾಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...