ವಿಜಯಪುರ | ವೈದ್ಯಕೀಯ ಕಾಲೇಜು ಸ್ಥಾಪನೆ: ಖಾಸಗಿ ಸಹಭಾಗಿತ್ವಕ್ಕೆ ಎಐಡಿಎಸ್‌ಒ ಖಂಡನೆ

Date:

ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸ್ವಾಗತಾರ್ಹ. ಆದರೆ ಖಾಸಗಿ ಸಹಭಾಗಿತ್ವವನ್ನು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯು ಇದನ್ನು ಖಂಡಿಸುತ್ತದೆ ಎಂದು ಕಾವೇರಿ ರಜಪೂತ್‌ ಹೇಳಿದರು.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, “ಕಳೆದ 15 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ಬೆಳೆಸಿದೆ, ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ ಇದರಲ್ಲಿ ಖಾಸಗಿ ಸಹಭಾಗಿತ್ವವನ್ನು AIDSO ಸಂಘಟನೆಯು ಒಪ್ಪುವುದಿಲ್ಲ” ಎಂದರು.

“ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು, ಇದಕ್ಕೆ ಲಕ್ಷಾಂತರ ಶುಲ್ಕ ಕಟ್ಟಲು ಸಾಧ್ಯವಾಗದೇ, ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನಸನ್ನು ತೊರೆದಿದ್ದಾರೆ. ಶಿಕ್ಷಣ ಎನ್ನುವುದು ಕೆಲವೇ ಜನರ ಸ್ವತ್ತಾಗದೆ, ಎಲ್ಲರ ಸ್ವತ್ತಾಗಬೇಕು. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗಬೇಕಾದರೆ, ಸರ್ಕಾರವೇ ಸಂಪೂರ್ಣ ಆರ್ಥಿಕ ಜವಾಬ್ದಾರಿ ತೆಗೆದುಕೊಳ್ಳಬೇಕು. ಆಗ ಮಾತ್ರ ಬಡವರು, ಕಾರ್ಮಿಕರು ಮತ್ತು ರೈತರ ಮಕ್ಕಳಿಗೆ ಶಿಕ್ಷಣ ಸಿಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಪಿಒಪಿ ವಿಗ್ರಹಗಳನ್ನು ಬಳಸದಿರಿ: ಜಿಲ್ಲಾಧಿಕಾರಿ ದಿವ್ಯಾಪ್ರಭು

“ವಿಜಯಪುರ ಜಿಲ್ಲೆಯು ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತ ಬಂದಿದ್ದು, ಬಹುತೇಕ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಮುಂದೆ ಬರಬೇಕೆಂದರೆ ಉನ್ನತ ಶಿಕ್ಷಣ ಪಡೆಯಲು ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲ. ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಕೊಟ್ಟು ಕಲಿಯುವುದಂತೂ ನಮ್ಮ ಜಿಲ್ಲೆಯ ಬಡ ಜನಗಳಿಗೆ, ರೈತ ಮತ್ತು ಕೂಲಿಕಾರ್ಮಿಕರ ಮಕ್ಕಳಿಗೆ ಖಂಡಿತ ಸಾಧ್ಯವಿಲ್ಲ. ಆದ್ದರಿಂದ ಸರ್ಕಾರವು ವಿಶೇಷ ಮುತುವರ್ಜಿ‌ ವಹಿಸಿ ವಿಜಯಪುರ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಒತ್ತಾಯಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...