ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ

Date:

ಸರ್ಕಾರಿ ಆಸ್ಪತ್ರೆಯ ಅಧೀನದಲ್ಲಿ ಓದುತ್ತಿರುವ ಸರ್ಕಾರಿ ಜಿಎನ್‌ಎಮ್, ಪ್ಯಾರಾ ಮೆಡಿಕಲ್, ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹಣ ವಸೂಲಿ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿಜಯಪುರ ಕರ್ನಾಟಕ ಸ್ಟೇಟ್ ನರ್ಸಿಂಗ್ ವೆಲ್ಫೇರ್ ಅಸೋಸಿಯೇಷನ್ ಒತ್ತಾಯಿಸಿತು.

ಮನವಿ ಸಲ್ಲಿಸಿ ಮಾತನಾಡಿದ ದಾವೂದ್ ನಾಯ್ಕೋಡಿ, “ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳೆಲ್ಲ ಬಡ ಕುಟುಂಬದಿಂದ ಬಂದವರು. ಅವರಿಂದ ಕಾಲೇಜಿಗೆ ಸಂಬಂಧಿಸಿದ ಅಧಿಕಾರಿ ವರ್ಗ ಮತ್ತು ಕಾಲೇಜಿನ ಮುಖ್ಯಸ್ಥರೇ ಹಣ ಪೀಕುತ್ತಿರುವುದು ಖಂಡನೀಯ. ಎಕ್ಸಾಮ್, ಸ್ಪೋರ್ಡ್ಸ್, ಕೋರ್ಸ್ ಮುಗುಸಿ ಇಂಟರ್ನ್ಶಿಪ್ ನಲ್ಲಿರುವ ವಿದ್ಯಾರ್ಥಿಗಳಿಗೆ ಗಿಫ್ಟ್ ನೀಡಲು 700 ರೂಪಾಯಿ ಕೊಡಬೇಕು ಇಲ್ಲವಾದರೆ ನಿಮ್ಮ ಡಾಕ್ಯುಮೆಂಟ್ಸ್ ಮತ್ತು ಇಂಟರ್ನ್ಶಿಪ್ ಪ್ರಮಾಣ ಪತ್ರ ನೀಡುವುದಿಲ್ಲವೆಂದು ವಿದ್ಯಾರ್ಥಿಗಳಿಗೆ ಅನಗತ್ಯ ಬೆದರಿಕೆ ಹಾಕಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟೋ ವಿದ್ಯಾರ್ಥಿಗಳು ಕೋರ್ಸ್ ಮುಗಿದ ಬಳಿಕ ಹಣ ಕೊಡಲು ಸಾಧ್ಯವಾಗದೇ ಸಂಬಂಧಪಟ್ಟ ದಾಖಲೆಗಲನ್ನು ತಮ್ಮ ಅಲ್ಲೇ ಬಿಟ್ಟಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕು ಎಂದು ಮನವಿ ಮಾಡಿರುವ ಅವರು, ಕ್ರಮಕ್ಕೆ ಮುಂದಾಗದಿದ್ದರೆ, ಮುಂದಿನ ದಿನಗಳಲ್ಲಿ ಸಂಸ್ಥೆಯು ಹೋರಾಟ ಮಾಡಲು ಮುಂದಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಈ ವೇಳೆ ಕರ್ನಾಟಕ ಸ್ಟೇಟ್ ನರ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಮಹಾಂತೇಶ್ ಎಚ್, ಮಾದೇಶ್ ಚಲವಾದಿ, ಶಂಕರ್ ಬಸರಗಿ, ಅಕ್ಷಯ್ ಹಾದಿಮನಿ, ಯಮನೂರಿ ಮಾದರ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...