ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಆಡಳಿತ ಸುವ್ಯವಸ್ಥೆ ಕಾಪಾಡಲು ವಿಫಲವಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ವಿಜಯಪುರ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

“ಎಸ್‌ಸಿ/ಎಸ್‌ಟಿ ವಸತಿ ನಿಲಯಗಳು ಶೋಷಿತ ಜನಾಂಗದ ವಿದ್ಯಾರ್ಥಿಗಳ ಶೈಕ್ಷಣಿಕ ಸಬಲೀಕರಣದ ಹಿತದೃಷ್ಟಿಯಿಂದ ಸಂವಿಧಾನ ಬದ್ದವಾಗಿ ಸಾಗಿವೆ. ಅವುಗಳ ನಿರ್ವಹಣೆಗೆ ಮಂತ್ರಿಯಿಂದ ಹಿಡಿದು ಕಾವಲುಗಾರನವರೆಗೂ ಒಂದು ಇಲಾಖೆಯನ್ನೇ ಸಂವಿಧಾನಾತ್ಮಕವಾಗಿ ನೀಡಲಾಗಿದೆ” ಎಂದು ಹೇಳಿದರು.

“ವಿಪರ್ಯಾಸವೆಂದರೆ ವಿಜಯಪುರ ಜಿಲ್ಲೆಯಲ್ಲಿ ಅದನ್ನು ನೋಡಿಕೊಳ್ಳಲು ಇರುವ ಸರ್ಕಾರಿ ಅಧಿಕಾರಿ ವೃಂದದ ನಿರ್ಲಕ್ಷ್ಯದಿಂದ ವಸತಿನಿಲಯ ನಿರ್ವಹಣೆ ಹಾಳಾಗಿ ಹೋಗುತ್ತಿರುವುದು ಖೇದಕರ ಸಂಗತಿ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳಕು ನೀಡಬೇಕಾದ ಕೆಲ ವಸತಿನಿಲಯಗಳು ಆರೋಪಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಿರ್ಮಿಸಿರುವ ವಸತಿ ನಿಲಯದಲ್ಲಿ ಗಂಭೀರ ಆರೋಪಕ್ಕೆ ಒಳಗಾದ ಆರೋಪಿ ಒಬ್ಬನಿಗೆ ಆಶ್ರಯ ನೀಡಿದ ಘಟನೆ ನಗರದ ಭೂತನಾಳ ವಸತಿ ನಿಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯದ ಪೊಲೀಸರು ಆರೋಪಿಯನ್ನು ಸದರಿ ವಸತಿ ನಿಲಯದಿಂದ ಬಂಧಿಸಿರುವುದು ಅಂತಕಕಾರಿ ಸಂಗತಿಯಾಗಿದೆ. ಈ ಘಟನೆ ಇದೇ ತಿಂಗಳ 9, 1ರಂದು ಮಧ್ಯರಾತ್ರಿ 12ರಿಂದ 1 ಗಂಟೆಯ ನಡುವೆ ನಡೆದಿದೆ. ಇಲ್ಲಿ ಬಂಧಿಸಲ್ಪಟ ಆರೋಪಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವವನು ಎಂದು ಮಾಹಿತಿ ಇದ್ದು, ಈ ಆಡಳಿತ ವೈಫಲ್ಯದ ಸೂಕ್ತ ತನಿಖೆಗೆ ನಿಮ್ಮ ನೇತೃತ್ವದಲ್ಲಿ ನಡೆದರೆ ಮಾತ್ರ ಸತ್ಯಾಸತ್ಯತೆ ಹೊರಬರಲು ಸಾಧ್ಯವಾಗಲಿದೆ” ಎಂದು ಹೇಳಿದರು.

“ಇಂತಹ ಘಟನೆ ನಡೆಯಲು ಆಡಳಿತ ವೈಫಲ್ಯವೇ ಪ್ರಮುಖ ಕಾರಣವಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಆಡಳಿತ ವೈಫಲ್ಯ ಕುಸಿತಕ್ಕೆ ಇಲಾಖೆಯ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಅಲ್ಲದೇ ತಾಲೂಕಾಧಿಕಾರಿಗಳು, ವಸತಿ ನಿಲಯದ ನಿಲಯ ಪಾಲಕರು ನೇರ ಹೊಣೆಗಾರರಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

“ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಾವು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಡಳಿತ ವೈಫಲ್ಯಕ್ಕೆ ಕಾರಣವಾಗಿರುವ ಅಧಿಕಾರಿಗಳಿಗೆ ಬೇರೆಡೆ ವರ್ಗಾವಣೆ ಮಾಡಿ, ಇಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಇವರ ಹುದ್ದೆಗೆ ನಿಯೋಜಿಸುವ ಮೂಲಕ ಇಲಾಖೆ ಆಡಳಿತ ವ್ಯವಸ್ಥೆಯನ್ನು ಕಾಪಾಡಬೇಕು. ತಾವು ವಿಳಂಬ ನೀತಿ ಅನುಸರಿಸದೆ ಗಂಭೀರವಾಗಿ ಪರಿಗಣಿಸಿ ಕಾನೂನಾತ್ಮಕ ಶಿಕ್ಷೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ದವಳಗಿ, ಸಂತೋಷ್ ಪೂಜಾರಿ, ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...