ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

Date:

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ ಜಿಲ್ಲಾಧಿಕಾರಿ ಟಿ. ಬೂಬಾಲನ ಅವರಿಗೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಬೆಲೆ ನೀಡಿ ಖರೀದಿಸುವಂತೆ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಪ್ರತಿವರ್ಷ ಮುಂಗಾರಿನಲ್ಲಿ 13,000 ಹೆಕ್ಟರ್ ಹಾಗೂ ಹಿಂಗಾರಿನಲ್ಲಿ ಸುಮಾರು 3500 ಹೆಕ್ಟರ್ ಕೆಂಪು ಮೆಣಸಿನಕಾಯಿಯನ್ನು ಬೆಳೆಯುತ್ತಿದ್ದು, ಸಾಕಷ್ಟು ಹಣ ಹಾಗೂ ಸಮಯ ಕೊಟ್ಟು ಕೂಸಿನಂತೆ ಜೋಪನಮಾಡಿ ಬೆಳೆದ ಬೆಳೆಗೆ ಈಗ ಬೆಲೆ ಇಲ್ಲದೇ ರೈತರು ಸಂಕಷ್ಟ ಪಡುತ್ತಿದ್ದಾರೆ, ಇದಕ್ಕೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಾದ ಟಿ. ಬೂಬಾಲನ ಅವರಿಗೆ ಮನವಿ ಸಲ್ಲಿಸಿ ಸರಕಾರದಿಂದ ಬೆಂಬಲ ಬೆಲೆ ನೀಡಿ ಖರೀದಿ ಸಬೇಕೆಂದು ರೈತರು ಆಗ್ರಹಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡುತ್ತಾ ಕಳೆದ ಭಾರಿ ಕ್ವಿಂಟಾಲ ಮೆಣಸಿನಕಾಯಿಗೆ 30,000 ರೂ.ಗಳ ವರೆಗೆ ಖರೀದಿಸಲಾಗಿತ್ತು. ಆದರೆ, ಈಗ ಬೆಲೆ ಪಾತಾಳ ಸೇರಿದಂತಾಗಿದೆ. ಈಗ ಕ್ವಿಂಟಾಲಗೆ 9000ದ ಆಚೆ ಈಚೆ ಕೇಳುತ್ತಿದ್ದಾರೆ. ಇದರಲ್ಲಿ ದಲ್ಲಾಳಿಗಳ ಕೈವಾಡದಿಂದಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ರೈತರು ಖರ್ಚು ಮಾಡಿರುವಷ್ಟು ಸಹ ಅವರ ಕೈಗೆ ಸಿಗುತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ, ಕೂಡಲೇ ಸರ್ಕಾರ ಬೆಂಬಲ ಬೆಲೆ ನೀಡಿ. ರೈತರ ಪರವಾಗಿ ಸರ್ಕಾರ ಇರಬೇಕು. ಕೂಡಲೇ ಸಂಬಂಧಿಸಿದ ಎ.ಪಿ.ಎಂ.ಸಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಿ ಸರ್ಕಾರಕ್ಕೆ ಒಂದು ಸೂಕ್ತ ವರದಿ ಕಳುಹಿಸಿ ಒಳ್ಳೆಯ ಬೆಲೆಯೊಂದಿಗೆ ಮೆಣಸಿನಕಾಯಿ ಖರೀದಿಸಬೇಕೆಂದು ಆಗ್ರಹಿಸಿದರು.

ಈ ವರ್ಷ ಸರಿಯಾಗಿ ಮಳೆ ಬಾರದೇ ಸಾಲ ಸೋಲ ಮಾಡಿರುವ ರೈತನಿಗೆ ಮುಂಗಾರು ಹಾಗೂ ಹಿಂಗಾರು ಮಳೆ ಆಗದೇ, ಯಾವ ಬೆಳೆ ಕೂಡಾ ಸರಿಯಾಗಿ ಬೆಳೆಯದೇ ಆತ್ಮಹತ್ಯೆ ಅಂತಹ ಕೆಟ್ಟ ಘಟನೆಗಳು ನಡೆದಿರುವುದು ಕಂಡುಬರುತ್ತಿವೆ, ಈಗಾಗಲೇ ಹಿಂಗಾರು ಸಹ ಸಂಪೂರ್ಣ ಕೈಕೊಟ್ಟಿರುವುದರಿಂದ ರೈತರಿಗೆ ಪರಿಹಾರ ಹಾಗೂ ಫಸಲ ಭೀಮಾ ಯೋಜನೆಯಡಿ ವಿಮೆ ತುಂಬಿರುವ ರೈತರಿಗೂ ವಿಮಾ ಪರಿಹಾರ ಕೊಡಬೇಕು ಎಂದರು. ವಿಮೆಯಲ್ಲಿ ಅವ್ಯವಹಾರ ನಡೆಯುತ್ತಿರುವ ಕುರಿತು ಮಾನ್ಯ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ಮಾಡಿ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದರು.

ಈ ವೇಳೆ ಜಿಲ್ಲಾ ಸಂಚಾಲಕರಾದ ರಾಮನಗೌಡ ಪಾಟೀಲ(ಬ್ಯಾಲ್ಯಾಳ), ಸಹಸಂಚಾಲಕ ಮಹಾಂತೇಶವ ಮಮದಾಪುರ, ತಾಲೂಕಾ ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ತಾ.ಪ್ರಧಾನ ಕಾರ್ಯದರ್ಶಿ ಮಲ್ಲಿಕರ್ಜುನ ಗೋಡೆಕಾರ, ವಿಜಯಪುರ ನಗರ ಘಟಕದ ಅಧ್ಯಕ್ಷ ಸಂಗಪ್ಪ ಚಲವಾದಿ, ಮುಖಂಡರಾದ ತಪ್ಪಣ್ಣ ನಾಟಿಕಾರ, ಪ್ರಭು ಕಾರಜೋಳ, ಮಹಾಂತೇಶ ಮಹಾಂತಮಠ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...