ವಿಜಯಪುರ | ತೆಲಂಗಾಣ ರಾಜ್ಯಕ್ಕೆ ಕೃಷ್ಣಾ ನದಿ ನೀರು ಹರಿಸದಂತೆ ರೈತ ಸಂಘ ಮನವಿ

Date:

ತೆಲಂಗಾಣ ರಾಜ್ಯದ ರಂಗರೆಡ್ಡಿ ಜಿಲ್ಲೆಗೆ ಕೃಷ್ಣಾ ನದಿಯ ನೀರು ಹರಿಸಬಾರದು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರಿಗೆ ಇಂದು ಮನವಿ ಸಲ್ಲಿಸಲಾಯಿತು.

ಲಾಲ್‌ಬಹದ್ದೂರ್ ಶಾಸ್ತ್ರೀ ಜಲಾಶಯದಿಂದ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಜುರಾಲಾ ಅಣೆಕಟ್ಟಿಗೆ 5 ಟಿಎಂಸಿ ನೀರನ್ನು ಕುಡಿಯಲು ಹಾಗೂ ಕೃಷಿಗಾಗಿ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ತೆಲಂಗಾಣ ರಾಜ್ಯ ಸರ್ಕಾರ ಪತ್ರ ಬರೆದಿದೆ. ಈ ಹಿನ್ನೆಲೆ ನೀರು ಹರಿಸಬಾರದು ಎಂದು ರೈತ ಸಂಘ ಒತ್ತಾಯಿಸಿದೆ.

“ಸದ್ಯ ಆಲಮಟ್ಟಿ ಲಾಲ್‌ ಬಹದ್ದೂರ್ ಶಾಸ್ತ್ರೀ ಜಲಾಶಯ ಹಾಗೂ ನಾರಾಯಣಪುರ ಬಸವ ಸಾಗರ ಜಲಾಶಯಗಳಲ್ಲಿ ಕೇವಲ 60 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಜರುಗಿದ ಐಸಿಸಿ ಸಭೆಯ ನಿರ್ಣಯದಂತೆ ಮಾರ್ಚ್ 26ರವರೆಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸಲು ಇನ್ನೂ 26 ಟಿಎಂಸಿ ನೀರಿನ ಅಗತ್ಯವಿದೆ. ಏಪ್ರಿಲ್ ತಿಂಗಳಲ್ಲಿ ಒಂದು ವೇಳೆ ರೈತರಿಗೆ ನೀರು ಅಗತ್ಯಬಿದ್ದರೆ ಇನ್ನು 8 ಟಿಎಂಸಿ ನೀರು ಹರಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಜಿಲ್ಲೆಯ ಎಲ್ಲ ಕೆರೆಗಳನ್ನು ಭರ್ತಿ ಮಾಡಬೇಕಾಗುತ್ತದೆ. ವರ್ಷದ ಜೂನ್ ಅಂತ್ಯದವರೆಗೂ ಕುಡಿಯುವ ನೀರು ಹಾಗೂ ಜಲಚರಗಳಿಗೆ ಸುಮಾರು 35 ಟಿಎಂಸಿ ನೀರು ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯಗಳಲ್ಲಿ ಕಾಯ್ದಿರಿಸಬೇಕಾಗುತ್ತದೆ. ಸದ್ಯ ಸಂಗ್ರಹವಿರುವ ನೀರಿನಲ್ಲಿ ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಯಚೂರಿನ ಎರಮರಸ್‌ಗೆ ಬಳ್ಳಾರಿಯ ಜಿಂದಾಲ್ ಸೇರಿದಂತೆ ಮುಂತಾದವುಗಳಿಗೆ ನೀರು ಕೊಡಬೇಕಾಗುತ್ತದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಿರುವಾಗ ಬೇರೆ ರಾಜ್ಯಕ್ಕೆ ನೀರು ಹರಿಸಿ ನಮ್ಮ ರೈತರನ್ನು ಹಾಗೂ ಜನರನ್ನು ನೀರಲ್ಲದೆ ಪರದಾಡುವ ಸ್ಥಿತಿಗೆ ತಳ್ಳುವುದು ಸರಿಯಲ್ಲ” ಎಂದು ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ರಾಜ್ಯಗಳಲ್ಲಿ ಒಂದೇ ಸರ್ಕಾರವಿದ್ದು, ಇದನ್ನು ಆಧರಿಸಿ ರಾಜಕೀಯ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನೀರು ಹರಿಸಬಾರದು. ಕೃಷ್ಣಾ ನ್ಯಾಯಾಧೀಕರಣದ ನ್ಯಾಯಮೂರ್ತಿ ಬ್ರಿಜೇಷ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧೀಕರಣದ 2ನೇ ತೀರ್ಪಿನ ವಿರುದ್ಧ ತೆಲಂಗಾಣ ಸರ್ಕಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ಹೆಚ್ಚಿಸದಂತೆ ತಡೆಹಿಡಿದಿದೆ. ತೆಲಂಗಾಣ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ರಿಟ್ ಹಿಂಪಡೆದು ಆಲಮಟ್ಟಿ ಲಾಲ್‌ಬಹದ್ದೂರ್ ಶಾಸ್ತ್ರೀ ಜಲಾಶಯದ ನೀರಿನ ಸಂಗ್ರಹದ ಮಟ್ಟವನ್ನು ಹೆಚ್ಚಿಸಲು ಸಹಕಾರ ನೀಡಿದರೆ ಸಮುದ್ರಕ್ಕೆ ವ್ಯರ್ಥವಾಗಿ ಹೋಗುವ ನೀರನ್ನು ಆಲಮಟ್ಟಿಯಲ್ಲಿ ಸಂಗ್ರಹಿಸಿ ಹೆಚ್ಚುವರಿ ನೀರಿನ ಲಭ್ಯತೆಯನ್ನು ಆಧರಿಸಿ ಅಗತ್ಯದ ಅನುಗುಣವಾಗಿ ಬೇಕಾದರೆ ತೆಲಂಗಾಣಕ್ಕೆ ನೀರು ಕೊಡಬಹುದು” ಎಂದರು.

ಸಾರ್ವಜನಿಕ ಹಿತಾಸಕ್ತಿ ರಿಟ್‌ನ್ನು ತೆಲಂಗಾಣ ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಅವಳಿ ಜಿಲ್ಲೆಯ ರೈತರು ನೀರು ಹರಿಸುವುದಕ್ಕೆ ಅವಕಾಶ ಕೊಡುವದಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಪಕ್ಷದ ಮುಖ ನೋಡಿ ನೀರು ಬಿಟ್ಟರೆ ಅಖಂಡ ಕರ್ನಾಟಕದ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ: ಸಚಿವ ಶಿವಾನಂದ ಪಾಟೀಲ

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಹೊನಕೆಪ್ಪ ತೆಲಗಿ, ಪ್ರಹ್ಲಾದ್ ನಾಗರಾಳ, ಯಮನಪ್ಪ ಸರೊರ, ಉಮೇಶ ವಾಲಿಕಾರ, ವಿಠ್ಠಲ್ ಬಿರಾದಾರ, ಲಾಲ್‌ಸಾಬ್ ಹಳ್ಳೊರು,‌ ಸಾಹೇಬ ಗೌಡ ಹೊಸೂರು ಹಾಗೂ ಶಿವಪ್ಪ ಲಮಾಣಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...