ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

Date:

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ರೈತ ಮಂಜುನಾಥ ತಳವಾರ ಅವರ ಸ.ನಂ.163/3 ರ ಭೂಮಿ ಪಡೆದ ಅಧಿಕಾರಿಗಳು, ಇಲ್ಲಿವರೆಗೆ ಪರಿಹಾರವನ್ನೂ ನೀಡದೇ ನಿರ್ಲಕ್ಷ್ಯ ತೋರಿರುತ್ತಾರೆ. ಅಂತಹವರ ವಿರುದ್ಧ ಕ್ರಮ ಕೈಗೊಂಡು ವಜಾ ಮಾಡಬೇಕು ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು ಆಗ್ರಹಿಸಿದರು.

ಈ ಕುರಿತು ಕೆಬಿಜೆಎನ್ಎಲ್‌ನ ಮುಖ್ಯ ಅಭಿಯಂತರ ಡಾ. ಬಸವರಾಜ ಹಾಗೂ ಐ ಎಲ್ ಕಳಸದ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಸಲ್ಲಿಸಿ ಮಾತನಾಡಿ, “ತಮ್ಮ ಇಲಾಖೆಯ ವತಿಯಿಂದ ಮಾಡಿರುವ ಮುಳವಾಡ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಯನ್ನೂ ಸಂಪೂರ್ಣ ಮಾಡದೇ ಗುತ್ತಿಗೆದಾರರು ಬಿಲ್ ಸಂದಾಯ ಮಾಡಿಕೊಂಡಿರುತ್ತಾರೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಶಾಮಿಲಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ನಷ್ಟಗೊಂಡ ರೈತರಿಗೆ ಇಲ್ಲಿಯವರೆಗೆ ಯಾವುದೇ ಭೂ ಪರಿಹಾರ ನೀಡಿರುವುದಿಲ್ಲ, 1972 ರಿಂದ ಜಮೀನಿನಲ್ಲಿ ವಿದ್ಯುತ್ ಸಂಪರ್ಕವಿತ್ತು. 638 ದಾಳಿಂಬೆ ಗಿಡ, ಒಂದು ಬಾವಿ, ಒಂದು ಬೊರವೆಲ್‌ ಒಳಗೊಂಡ ತೋಟದಲ್ಲಿ ಸುಮಾರು 50 ವರ್ಷಗಳಿಂದ ಕೃಷಿ ಮಾಡಲಾಗುತ್ತಿತ್ತು. ಇದನ್ನು ಗಣನೆಗೆ ತೆಗೆದುಕೊಳ್ಳದೇ ಪ್ರಭಾವಿಗಳ ಕೈವಾಡದಿಂದ ರೈತರಿಗೆ ನಷ್ಟ ಉಂಟಾಗುವಂತೆ ಅಧಿಕಾರಿಗಳು ಮಾಡಿದ್ದಾರೆ. ಕೂಡಲೇ ಇದರಲ್ಲಿ ಭಾಗಿಯಾಗಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

“ಎಲ್ಲವೂ ಸರಿ ಇದೆ ಎಂದು ಬಿಂಬಿಸಿ ಕಾಮಗಾರಿಯ ಬಿಲ್ ಮಾಡಿರುವ ಇಲಾಖೆ ಅಧಿಕಾರಿಗಳನ್ನ ವಜಾ ಗೊಳಿಸಬೇಕು ಇಲ್ಲವಾದಲ್ಲಿ ಒಂದು ವಾರದ ನಂತರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಲಮಟ್ಟಿಯ ಕೆ.ಬಿ.ಜೆ.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಈ ವೇಳೆ ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಮನಗೌಡ ಪಾಟೀಲ, ನಿಡಗುಂದಿ ತಾಲೂಕು ಅಧ್ಯಕ್ಷ ಡಾ. ಕೆ ಎಂ ಗುಡ್ನಾಳ, ಮುಖಂಡರಾದ ತಿಪ್ಪಣ್ಣ ನಾಟಿಕಾರ, ಮೋತಿಲಾಲ ಉಣ್ಣಿಬಾಯಿ, ದಾನಪ್ಪ ಗದ್ಯಾಳ, ಮಂಜುನಾಥ ನಾಟಿಕಾರ, ಬುಡ್ಡೆಸಾಬ ಡವಳಗಿ, ಮೋದಿನಸಾಬ ಭಾಗವಾನ, ಕಲ್ಲಪ್ಪ ಅಫಜಲಪುರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...