ವಿಜಯಪುರ | ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆಗೆ ರೈತರ ಆಗ್ರಹ; ಜೂ.30ರಂದು ಬೃಹತ್‌ ಹೋರಾಟ

Date:

ಆಲಮಟ್ಟಿ ಅಣೆಕಟ್ಟೆಯ ಗೇಟನ್ನು 524,256 ಮೀಟರ್‌ಗೆ ಎತ್ತರಿಸಿ, ಕೃಷ್ಣಾ ನೀರಿನ ಬಳಕೆಗೆ ಕ್ರಮ ವಹಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ಜೂನ್‌ 30ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ.

ವಿಜಯಪುರ ನಗರದ ಗಗನಮಹಲ್‌ನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುಖಂಡರು, ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ಮಹಾರಾಷ್ಟ್ರದವರು ಕ್ಯಾತೆ ತೆಗೆದಿರುವುದು ಖಂಡನೀಯ ಎಂದು ಆಕೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರವು ಮಹಾರಾಷ್ಟ್ರದ ಒತ್ತಡಕ್ಕೆ ಮಣಿಯದೆ ನ್ಯಾಯಾಧೀಕರಣದ ತೀರ್ಷಿನಂತೆ ಗೇಟ್ ಅಳವಡಿಸಲು ಕ್ರಮ ವಹಿಸಬೇಕು. ತೀರ್ಪಿನ ಕುರಿತು, ತಕ್ಷಣ ಅಂತಿಮ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು” ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೈತರ ಸಭೆ

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಅರವಿಂದ ಕುಲಕರ್ಣಿ ಮಾತನಾಡಿ, “ಕೃಷ್ಣಾ 2ನೇ ನ್ಯಾಯಾಧೀಕರಣ ಆಲಮಟ್ಟಿ ಜಲಾಶಯವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿ ನೀರು ಹಂಚಿ 2010ರಲ್ಲೇ ತೀರ್ಪು ನೀಡಿದೆ. ಆದರೀಗ ಮಹಾರಾಷ್ಟ್ರ ಕೆಲಸವಿಲ್ಲದೆ ಕ್ಯಾತೆ ತೆಗೆದಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರೈತರ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಧರಣಿ ಖಚಿತ: ಈಶಪ್ಪ ಸರಬದ

“ಅಂತಿಮ ಅಧಿಸೂಚನೆ ಹೊರಡಿಸುವಂತೆ ಪ್ರವಾಹಕ್ಕೆ ಆಲಮಟ್ಟಿ ಡ್ಯಾಂ ಹಿನ್ನೀರು ಕಾರಣವಲ್ಲವೆಂದು ಮಹಾರಾಷ್ಟ್ರ ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿ 2019ರಲ್ಲೇ ವರದಿ ಸಲ್ಲಿಸಿದೆ. ಆದರೂ ಆ ರಾಜ್ಯದವರು ತಕರಾರು ತೆಗೆಯುತ್ತಿರುವುದು ಸರಿಯಲ್ಲ”‌ ಎಂದರು.

ರೈತ ಸಂಘಟನೆಗಳ ಮುಖಂಡರಾದ ಪಾಂಡು ಹ್ಯಾಟಿ, ವಿಜಯ ಪೂಜಾರಿ, ಶಾರದಾ, ಗುರುಲಿಂಗಪ್ಪ ಪಡಸಲಗಿ, ಬಿರಾದಾರ, ಬಂಡಿವಡ್ಡರ, ಶಂಕರಗೌಡ ಹಿರೇಗೌಡರ, ಉಮೇಶ ವಾಲಿಕಾರ, ರಾಜೇಂದ್ರ ದೇಸಾಯಿ, ಮಡಿವಾಳಪ್ಪ ಕಲಗುರ್ಕಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...