ವಿಜಯಪುರ | ಜಂಬಗಿ ಕೆರೆಗೆ ನೀರು ಹರಿಸಲು ರೈತರ ಆಗ್ರಹ; ಧರಣಿ

Date:

ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ.

ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ ಆರಂಭಿಸಿದ್ದರು. ಅಧಿಕಾರಿಗಳು ಮಾತುಕತೆಗೆ ಕರೆದ ಹಿನ್ನೆಲೆ ಧರಣಿಯನ್ನು ಸ್ಥಗಿತಗೊಳಿಸಿ, ಶುಕ್ರವಾರ ಸಭೆಗೆ ಹಾಜರಾಗಿದ್ದರು. ಆದರೆ, ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಲು ಉಪ ವಿಭಾಗಾಧಿಕಾರಿ ಶ್ವೇತಾ ಬೀಡೆಕರ, ತಹಸೀಲ್ದಾ‌ರ್ ಕವಿತಾ ಒಪ್ಪದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮತ್ತೆ ಧರಣಿ ಮುಂದುವರೆಸಿದ್ದಾರೆ.

ಕಗ್ಗೋಡ ಕೆರೆಯಿಂದ 6-7 ಕಿ.ಮೀ ಅಂತರದಲ್ಲಿ ಜಂಬಗಿ ಕೆರೆ ಇದೆ. ಹೀಗಾಗಿ, ಹಳ್ಳದ ಮೂಲಕ ನೀರು ಹರಿಸಿದರೆ, ಶೀಘ್ರವೇ ಕರೆ ತುಂಬುತ್ತದೆ ಎಂಬುದು ರೈತರ ವಾದ. ಆದರೆ, ಸಭೆಯಲ್ಲಿ ಅಧಿಕಾರಿಗಳು ರಾಂಪೂರ ವಿಭಾಗದಿಂದ ಜಂಬಗಿ ಕೆರೆಗೆ ನೀರು ಹರಿಸುವುದಾಗಿ ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಗಳ ನಿಲುವಿಗೆ ವಿರೋಧ ವ್ಯಕ್ತಪಡಿಸಿರುವ ರೈತರು, ರಾಂಪೂರ ವಿಭಾಗದಿಂದ ನೀರು ಹರಿಸಿದರೆ ಜಂಬಗಿ ಕೆರೆಗೆ ಸಮರ್ಪಕವಾಗಿ ನೀರು ತಲುಪುವುದಿಲ್ಲ. ಹೀಗಾಗಿ,ಕಗ್ಗೋಡ ಕೆರೆಯಿಂದ ನೀರು ಹರಿಸಿದರೆ, ಮಾತ್ರವೇ ಶಾಶ್ವತ ಪರಿಹಾರ ದೊರೆಯುತ್ತದೆ ಎಂದಿದ್ದಾರೆ.

ಧರಣಿಯಲ್ಲಿ ಮಾತನಾಡಿದ ರೈತ ಮುಖಂಡ ಮಹಾದೇವಪ್ಪ ತೇಲಿ, “ರಾಂಪೂರ ವ್ಯಾಪ್ತಿಯ ಕಾಲುವೆಯಿಂದ ನೀರು ಹರಿಸಿ, ಈ ಬಾರಿ ಕೆರೆ ತುಂಬುವುದು ಅಸಾಧ್ಯ. ಆದರೆ, ಸಮೀಪದ ಕಗ್ಗೋಡ ಕೆರೆಯಿಂದ ಹಳ್ಳದ ಮೂಲಕ ನೀರು ಹರಿಸಿದರೆ, ಕೇವಲ 6-7 ಕಿ.ಮೀ. ಅಂತರದಲ್ಲಿರುವ ಜಂಬಗಿ ಕೆರೆಗೆ ಸರಾಗವಾಗಿ ನೀರು ಹರಿದು ಬರುತ್ತದೆ, ಕೆರೆ ತುಂಬುತ್ತದೆ. ಇಳಿಜಾರು ಮಾರ್ಗದಲ್ಲಿ ಹಳ್ಳ ಹರಿಯುವುದರಿಂದ ವಿಶೇಷವಾಗಿ ಯಾವುದೇ ಖರ್ಚಿಲ್ಲದೇ ಜಂಬಗಿ ಕೆರೆ ತುಂಬಿಸಬಹುದು” ಎಂದಿದ್ದಾರೆ.

ಧರಣಿಯಲ್ಲಿ ರೈತ ಮುಖಂಡ ಪ್ರಕಾಶ ತೇಲಿ, ಗ್ರಾಪಂ ಅಧ್ಯಕ್ಷ ಶ್ರೀಶೈಲ ಮಸೂತಿ, ಆಹೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗಾಣಗೇರ, ಪ್ರಭು ಕಾರಜೋಳ, ಜಯಸಿಂಗರಜಪೂತ, ಚಿನ್ನಪ್ಪವಾಡೇದ, ಅನಮೇಶ ಜಮಖಂಡಿ, ನಿಜಲಿಂಗಪ್ಪ ತೇಲಿ, ಬಸನಗೌಡ ಬಿರಾದಾರ, ಮಲ್ಲಿಕಾರ್ಜುನ ನಾಗರಾಣ, ಬಸವಂತ ತೇಲಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...