ವಿಜಯಪುರ | ಆಲಮಟ್ಟಿ ಜಲಾಶಯದ ಮಟ್ಟ ಹೆಚ್ಚಿಸುವಂತೆ ರೈತ ಮುಖಂಡರ ಆಗ್ರಹ

Date:

ಮಹಾರಾಷ್ಟ್ರ ಸರ್ಕಾರ ಹಾಗೂ ಆ ಭಾಗದ ಜನಸಾಮಾನ್ಯರ ಹೋರಾಟಕ್ಕೆ ಕರ್ನಾಟಕ ಸರ್ಕಾರ ಮಣಿಯದೆ ಆಲಮಟ್ಟಿ ಜಲಾಶಯದ ಮಟ್ಟವನ್ನು 524.256ಕ್ಕೆ ಹೆಚ್ಚಿಸಲು ಶೀಘ್ರ ಕ್ರಮ ಕೈಗೊಳ್ಳವಂತೆ ಆಗ್ರಹಿಸಿ ರೈತ ಸಂಘಟನೆ ಮುಖಂಡರು ವಿಜಯಪುರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, “ಆಲಮಟ್ಟಿ ಡ್ಯಾಂ ನೀರಿನ ಮಟ್ಟವನ್ನು 524.256ಕ್ಕೆ ಹೆಚ್ಚಿಸಿ ನೀರು ನಿಲ್ಲಿಸಲು ಗೇಟ್ ಅಳವಡಿಸದಂತೆ ಇತ್ತೀಚಿಗೆ ಮಹಾರಾಷ್ಟ್ರದ ರೈತರು ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. 524.256ಕ್ಕೆ ನೀರು ಎತ್ತರಿಸಿದರೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಹಿನ್ನೀರಿನಿಂದ ಪ್ರವಾಹ ಪರಿಸ್ಥಿತಿ ಎದುರಾಗುತ್ತದೆಂದಬ ತಪ್ಪು ತಿಳುವಳಿಕೆಯಿಂದ ಹೋರಾಟಮಾಡುತ್ತಿದ್ದಾರೆ” ಎಂದು ಹೇಳಿದರು.

“ಕಳೆದ 2019ರಲ್ಲಿಯೇ ಪ್ರವಾಹ ಬಂದಾಗ ಆಲಮಟ್ಟಿಯ ಡ್ಯಾಂ ಮೇಲೆ ಗೂಬೆ ಕೂರಿಸಿದ್ದರು. 519.60 ಮೀ.ಗೆ ನೀರು ನಿಲ್ಲಿಸಿದ್ದರಿಂದಲೇ ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆಯೆಂದು ಕ್ಯಾತೆ ತೆಗೆದಿದ್ದರು. ಆಗ ಮಹಾರಾಷ್ಟ್ರ ಸರ್ಕಾರ ಒಡ್ನರ ನೇತೃತ್ವದ ತಂಡವನ್ನು ಆಲಮಟ್ಟಿಗೆ ಕಳುಹಿಸಿತ್ತು. ಆ ತಂಡ ಪರಿಸ್ಥಿತಿ ಅವಲೋಕಿಸಿ ಆಲಮಟ್ಟಿ ನೀರಿನಿಂದ ಪ್ರವಾಹ ಉಂಟಾಗಿಲ್ಲವೆಂದು ಸ್ಪಷ್ಟ ವರದಿ ನೀಡಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ ಅಭಿವೃದ್ಧಿಯಲ್ಲಿ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ: ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ

ರೈತ ಮುಖಂಡ ವಿಜಯ ಪೂಜಾರ್ಹಿ ಮಾತನಾಡಿ, “ಕರ್ನಾಟಕ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಮಹಾರಾಷ್ಟ್ರ ಸರ್ಕಾರದ ಒತ್ತಡಕ್ಕೆ ಮಣಿಯದೆ ಆಲಮಟ್ಟಿ ಡ್ಯಾಂ ನೀರಿನ ಮಟ್ಟವನ್ನು 524.256ಕ್ಕೆ ನಿಲ್ಲಿಸಲು ಕೂಡಲೇ ಗೇಟ್ ಅಳವಡಿಸಬೇಕು. ನೀರು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ರೈತ ಮುಖಂಡರಾದ ವಿಠಲ ಬಿರಾದಾರ, ರಾಜೇಸಾಬ ವಾಲಿಕಾರ, ದಾವಲಸಾಬ ನದಾಫ, ಗುರುಲಿಂಗಪ್ಪ ಪಡಸಲಗಿ, ನಾಗಪ್ಪ ಬೂದಗೊಳಿ, ಶ್ರೀಶೈಲಕೂರಿನದ ಮಲ್ಲಪ್ಪಪಡಿಸಲಿಗೆ ಲಾಲಸಾಬ ಹಾಗರ, ಜವರೇಗೌಡ ಪೋಲೇಶಿ, ಮಲಿಗೆಪ್ಪ ಸಾಸನೂರ, ಸಿದ್ದಿಂಗಪ್ಪ ಬಿರಾದಾರ, ಶಾರದಾ- ಕಾಳನ್ನವರ, ಸುಜಾತಾ ವಡ್ಡರ, ಗುರುಬಸಮ್ಮ ಡವಳಗಿ, ರೇವತಿ ಬಡಿಗೇರ, ಈ ಚೇತನ ಗೌಡರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...