ವಿಜಯಪುರ | ರೈತರಿಗೆ ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತ ಅರಿವು ಅಗತ್ಯ: ಅಶೋಕ ಎಸ್. ಸಜ್ಜನ

Date:

ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತು ಅರಿವಿನ ಅಗತ್ಯವಿದ್ದು, ಈ ಬಗ್ಗೆ ಕೀಟಶಾಸ್ತ್ರಜ್ಞರು ಸಂಶೋಧನೆಗೆ ಒತ್ತು ನೀಡಬೇಕಾಗಿದೆ ಎಂದು ಕೃಷಿ ಮಹಾವಿದ್ಯಾಲಯ ಡೀನ್ ಡಾ. ಅಶೋಕ ಎಸ್. ಸಜ್ಜನ ಹೇಳಿದರು.

ಅವರಿಂದು ನಗರ ಹೊರವಲಯದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಕೀಟಶಾಸ್ತ್ರ ವಿಭಾಗದ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

“ಕೃಷಿ ಕೀಟಶಾಸ್ತ್ರ ಕ್ಷೇತ್ರದಲ್ಲಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಲ್ಲಿ ಗುಣಮಟ್ಟವನ್ನು ನೀಡುವುದು ಮತ್ತು ನಿರ್ವಹಿಸುವುದು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೃಷಿ ಕೀಟಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನಾ ಕಾರ್ಯಕ್ರಮವನ್ನು ರೂಪಿಸಲು ಮತ್ತು ಸ್ವತಂತ್ರ ಸಂಶೋಧನೆ ನಡೆಸಲು ಸಜ್ಜುಗೊಳಿಸಬೇಕಾಗಿದೆ. ಇಂದು ಅನೇಕ ಕೀಟಗಳು ಬೆಳೆಗಳನ್ನು ಬಾದಿಸುತ್ತವೆ. ಅವುಗಳ ಹತೋಟಿಗಾಗಿ ವಿವಿಧ ಕೀಟನಾಶಕ ಬಳಕೆ ಅನಿವಾರ್ಯವಾದರೂ, ಪರಿಸರಸ್ನೇಹಿ ಕೀಟನಾಶಕ ಬಳಕೆಯ ಕುರಿತು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹ ವಿಸ್ತರಣಾ ನಿರ್ದೇಶಕ  ಡಾ. ರವೀಂದ್ರ ಬೆಳ್ಳಿ ಮಾತನಾಡಿ, “ಕೃಷಿ ಸಮುದಾಯಕ್ಕೆ ಸೇವೆ ಸಲ್ಲಿಸುವುದರ ಜೊತೆಗೆ ಕೃಷಿಯಲ್ಲಿ ಕೀಟ, ಕೀಟಗಳ ಸವಾಲುಗಳಿಗೆ ನವೀನ ಮತ್ತು ಪ್ರಾಯೋಗಿಕ ಪರಿಹಾರಗಳನ್ನು ಒದಗಿಸಲು, ನವೀನ ಸಂಶೋಧನಾ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಮತ್ತು ಸೃಜನಶೀಲ, ಹೆಚ್ಚು ಗೋಚರಿಸುವ, ಸಮಸ್ಯೆ-ಪರಿಹಾರ ವಿಸ್ತರಣಾ ಕಾರ್ಯಕ್ರಮಗಳನ್ನು ಒದಗಿಸಲು ವಿಭಾಗದ ಪ್ರಾಧ್ಯಾಪಕರು ಬದ್ಧರಾಗಿದ್ದಾರೆ. ಇಂದು ರೈತರು, ಬೆಳೆಗಳಲ್ಲಿನ ಕೀಟಗಳ ನಿಯಂತ್ರಣಕ್ಕೆ ಹಲವು ಬಗೆಯ ಕೀಟನಾಶಕಗಳ ಬಳಕೆ ಮಾಡುತ್ತಿದ್ದ ಸಮಗ್ರ ಕೀಟನಾಶಕ ಬಳಕೆಯತ್ತ ತಮ್ಮ ಗಮನ ಹರಿಸಬೇಕು” ಎಂದರು.

ಕೀಟಶಾಸ್ತ್ರ ವಿಭಾಗದ ವಿವಿ ಮುಖ್ಯಸ್ಥ ಡಾ. ಎಸ್. ಬಿ. ಜಗ್ಗಿನವರ ಮಾತನಾಡಿ, “ಒಟ್ಟು 31 ಕೀಟ ವಿಜ್ಞಾನಿಗಳಿದ್ದು, ಅವರೆಲ್ಲರು ಕೃಷಿ ಕೀಟಶಾಸ್ತ್ರದಲ್ಲಿ ಬೋಧನೆ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಣಕಾಸಿನ ಮಂಜೂರಾತಿಗಳೊಂದಿಗೆ ಕೆಲಸ ನಿರ್ವಹಿಸುತ್ತಿದ್ದಾರೆ. ರೈತರಿಗೆ ಅನುಕೂಲವಾಗುವ ತಂತ್ರಜ್ಞಾನ ಅಭಿವೃದ್ಧಿಪಡಿಸುವದರ ಮೂಲಕ ಸುಸ್ಥಿರ ಕೀಟ ನಿರ್ವಹಣೆ ಸ್ಥಾಪಿಸಲು ಅನುಕೂಲವಾಗಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ವಕ್ಫ್ ತಿದ್ದುಪಡಿ ಮಸೂದೆ 2024ರ ವಿರುದ್ಧ ಮೌನ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಉಪಕೃಷಿ ನಿರ್ದೇಶಕ ಡಾ. ಬಾಲರಾಜ ಬಿರಾದಾರ, ಡಾ. ಎಸ್ ಎಸ್ ಕರಭಂಟನಾಳ, ಡಾ. ಎ ಪಿ ಬಿರಾದಾರ ಡಾ. ಎನ್ ಡಿ ಸುನಿತಾ, ಡಾ. ಮಹಾಬಲ್ಲೇಶ್ವರ ಹೆಗಡೆ, ಡಾ. ಸಿ ಪಿ ಮಲ್ಲಾಪೂರ, ಡಾ. ಎ ಪಿ ಬಿರಾದಾರ, ಡಾ. ಸಿ ಎಮ್ ರಫೀ, ಡಾ. ಡಿ ಎನ್ ಕಾಂಬ್ರೇಕರ, ಡಾ. ರೂಪಾ ಪಾಟೀಲ, ಡಾ. ಎ ಹೆಚ್ ಬಿರಾದಾರ, ಡಾ. ರವಿಕುಮಾರ ಹೊಸಮನಿ, ಡಾ. ಸಿ ಎಮ್ ತಿಪ್ಪಣ್ಣವರ, ಡಾ. ಎಸ್ ಟಿ ಪ್ರಭು, ಡಾ. ರೋಹಿಣಿ ಸುಗಂದಿ ಸೇರಿದಂತೆ ಧಾರವಾಡ ಕೃಷಿ ವಿವಿ ವ್ಯಾಪ್ತಿಯ ಪ್ರಾಧ್ಯಾಪಕರು ಸಂಶೋಧನಾ ಹಾಗೂ ವಿಸ್ತರಣಾ ವಿಜ್ಞಾನಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...