ವಿಜಯಪುರ | ಕೃಷಿಕರ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಸೂಕ್ತ: ಡಾ ಪಾಟೀಲ

Date:

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರಗಳನ್ನು ಸ್ಥಳೀಯವಾಗಿ ನೀಡುವಂತೆ ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ ಎಲ್ ಪಾಟೀಲ ತಿಳಿಸಿದರು.

ನಗರದ ಹೊರವಲಯದ ಹಿಟ್ಟಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಜಯಪುರ ಮತ್ತು ಇಂಡಿ ಕೃಷಿ ವಿಜ್ಞಾನ ಕೇಂದ್ರಗಳ 26ನೇ ಮತ್ತು 6ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ರೈತರ ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜತೆಗೆ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ದಿನಗಳಲ್ಲಿ ಯುವಜನರು ಕೃಷಿಯಿಂದ ವಿಮುಖರಾಗುತ್ತಿದ್ದು, ʼಯುವಜನರರ ನಡಿಗೆ ಕೃಷಿಯ ಕಡೆಗೆʼ ಎಂಬ ತತ್ವವನ್ನು ಆಳವಡಿಸಿ ಹೆಸರಾಂತ ಸ್ವಾಮೀಜಿಗಳಿಂದ ಕೃಷಿ ದೀಕ್ಷೆ ನೀಡಿ ಅವರು ಕೃಷಿಯತ್ತ ಆಸಕ್ತಿ ವಹಿಸುವಂತೆ ಕ್ರಮ ಕೈಗೊಳ್ಳಬೇಕು” ಎಂದರು.

“ವಿಜಯಪುರದಲ್ಲಿ ಬೆಳೆಯುವ ವಿವಿಧ ಬೆಳೆಗಳಾದ ತೊಗರಿ, ಅಜ್ವಾನ, ಕಬ್ಬು, ದಾಳಿಂಬೆ ಇತ್ಯಾದಿ ಬೆಳೆಗಳಲ್ಲಿ ಬರುವ ಸಮಸ್ಯೆಗಳಾದ ಹೊಸ ತಳಿಗಳ ಬಗ್ಗೆ ಮಾಹಿತಿ ಕೊರತೆ, ಬೇಸಾಯಕ್ರಮ ಮತ್ತು ಕೀಟ ಸಮಸ್ಯೆ, ರೋಗ ಹತೋಟಿ ಕ್ರಮಗಳ ಬಗ್ಗೆ ತರಬೇತಿಗಳ ಮೂಲಕ ರೈತರಿಗೆ ಸಹಾಯ ಮಾಡಬೇಕು. ಸಮಸ್ಯೆಗಳ ಕುರಿತು ರೈತರು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲ ಬೆಳೆಗಳ ಮೌಲ್ಯವರ್ಧನೆ, ಮಾರುಕಟ್ಟೆ ಬಗ್ಗೆ ಹೆಚ್ಚಿನ ಗಮನಹರಿಸಿ” ಎಂದು ರೈತರಿಗೆ ಸಲಹೆ ನೀಡಿದರು.

ಸಂಶೋಧನಾ ನಿರ್ದೇಶಕ ಡಾ. ಬಿ ಡಿ ಬಿರಾದಾರ ಮಾತನಾಡಿ, “ರೈತರು ತಮ್ಮ ಜಮೀನಿನ ಬದುಗಳಲ್ಲಿ ಬಹುವಾರ್ಷಿಕ ಮೇವಿನ ಗಿಡಗಳನ್ನು ಬೆಳೆಯಬೇಕು. ರೈತರು ಹೆಚ್ಚಿನ ಪ್ರಮಾಣದಲ್ಲಿ ಕೀಟ/ರೋಗನಾಶಕಗಳ ಸಿಂಪಡಣೆಯಿಂದ ನೈಸರ್ಗಿಕ ಕೀಟಗಳು ಹಾಳಾಗಿದ್ದು, ಇವುಗಳ ತಡೆಗೆ ಪರತಂತ್ರ ಜೀವಿಗಳನ್ನು ಅಭಿವೃದ್ಧಿಪಡಿಸಿ ಹಾನಿಕಾರಕಗಳನ್ನು ಹತೋಟಿಯಲ್ಲಿಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕಿ ಡಾ. ರೂಪಾ ಎಲ್ ಮಾತನಾಡಿದರು ಹಾಗೂ ಧಾರವಾಡ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಆರ್ ಬಸದರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಕ್ತಿನಗರ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಬಳಿ ನಿರ್ಮಾಣವಾಗುವುದೇ ಇಂದಿರಾ ಕ್ಯಾಂಟಿನ್?

ವಿಜಯಪುರ, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ. ಎಸ್ ಎಮ್ ವಸ್ತ್ರದ ಹಾಗೂ ಇಂಡಿಯ ಹಿರಿಯ ವಿಜ್ಞಾನಿ ಡಾ. ಶಿವಶಂಕರಮೂರ್ತಿ, ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಪ್ರಗತಿಯ ಕುರಿತು ಸಂಕ್ಷಿಪ್ತ ವರದಿ ಮಂಡಿಸಿದರು.

ಸಭೆಯಲ್ಲಿ ಕೃಷಿ ಮಹಾವಿದ್ಯಾಲಯ ಡೀನ್ ಡಾ. ಎ ಎಸ್ ಸಜ್ಜನ, ಸಹ ವಿಸ್ತರಣಾ ನಿರ್ದೇಶಕ ಡಾ. ಆರ್ ಬಿ ಬೆಳ್ಳಿ, ಸಹ ಸಂಶೋಧನಾ ನಿರ್ದೇಶಕ ಡಾ. ಎಸ್ ಬಿ ಜಗ್ಗಿನವರ, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ ಹಾಗೂ ಇಂಡಿಯ ಎಲ್ಲ ವಿಜ್ಞಾನಿಗಳು, ಪ್ರಗತಿಪರ ರೈತರಾದ ಸಿದ್ದಪ್ಪ ಬಾಲಗೊಂಡ, ಚಂದ್ರಶೇಖರ ರೆಡ್ಡಿ, ನಿಂಗನಗೌಡ ಪಾಟೀಲ, ಸಿದ್ದು ಕವಡೆಕರ, ಭೀಮನಗೌಡ ಪಾಟೀಲ, ಅಂಕಿತ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು, ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕರು, ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...