ಮುಖ್ಯಮಂತ್ರಿಗಳ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರಿಗೆ 3250 ರೂ. ಹಾಗೂ 50 ರೂ. ಸರ್ಕಾರದ ಬೆಂಬಲ ಬೆಲೆ ನೀಡಲು ನಿರ್ಣಯ ಕೈಗೊಂಡಿದ್ದರೂ ಸಹ ಇಳುವರಿ ಆಧರಿಸಿ ಬೆಳೆ ನಿಗದಿ ಮಾಡುವುದರಿಂದ ವಿಜಯಪುರ ಕಬ್ಬು ಬೆಳೆಗಾರರಿಗರೆ ಹಿನ್ನಡೆಯಾಗುವ ಆತಂಕದಲ್ಲಿ ವಿಜಯಪುರ ಕಬ್ಬು ಬೆಳೆಗಾರರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹೋರಾಟ ಮುಂದುವರೆದು ನಾಲ್ಕನೇಯ ದಿನಕ್ಕೆ ಕಾಲಿರಿಸಿತ್ತು. ಆದರೆ ಶನಿವಾರ ಜಿಲ್ಲಾಧಿಕಾರಿ ಡಾ. ಕೆ. ಆನಂದ ಮಾತನಾಡಿ, ರೈತರ ಜೊತೆ ಸರ್ಕಾರವಿದೆ. ಯಾವ ಗೊಂದಲ ಬೇಡ. ಸರ್ಕಾರ ನಿಗದಿಗೊಳಿಸಿದ ಬೆಲೆಯನ್ನು ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಬದ್ದವಿದೆ. ಕಬ್ಬು ಬೆಳೆಗಾರರ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಧರಣಿ ಹಿಂದಕ್ಕೆ ಪಡೆಯಲು ಮನವಿ ಮಾಡಿಕೊಂಡರು.
ಇದನ್ನೂ ಓದಿ: ವಿಜಯಪುರ | ಕಬ್ಬು ದರ ನಿಗದಿ ಕೇಂದ್ರದ ಅಧಿಕಾರ; ರಾಜ್ಯದ್ದು ಜಾರಿಯ ಕೆಲಸ: ಸಚಿವ ಎಂ ಬಿ ಪಾಟೀಲ್
ಮನವಿ ಮನ್ನಿಸಿ ಕಬ್ಬು ಬೆಳೆಗಾರರು ಧರಣಿ ಹಿಂದಕ್ಕೆ ಪಡೆದುಕೊಂಡರು. ಆದರೆ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅನ್ಯಾಯವಾದರೆ ಮತ್ತೆ ಧರಣಿ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.





