ವಿಜಯಪುರ | ತೊಗರಿ ಬೆಲೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿಯ ಆವರಣದಲ್ಲಿ ರೈತ ಬಾಂಧವರು ತೊಗರಿ ಬೆಲೆ ದಿಢೀರನೆ ಕಡಿಮೆಯಾಗಿರುವದನ್ನು ಖಂಡಿಸಿ ತೊಗರಿಯನ್ನು ನೆಲಕ್ಕೆ ಚೆಲ್ಲಿ ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರಧಾನಮಂತ್ರಿ ಅವರಿಗೆ ಬರೆದ ಮನವಿಯನ್ನು ಉಪತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ಕಳೆದ ಐದಾರು ತಿಂಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ ರೂ. 12 ಸಾವಿರ ಇದ್ದ ದರವನ್ನು ಕೇಂದ್ರ ಸರ್ಕಾರ ದಿಢೀರನೆ ದರ ಕಡಿಮೆ ಮಾಡಿ ಪ್ರತಿ ಕ್ವಿಂಟಾಲ್‌ಗೆ ರೂ. 7,550 ನಿಗದಿ ಮಾಡುವ ಮೂಲಕ ರೈತರನ್ನು ಬೀದಿಗೆ ತಳ್ಳುವ ಕೆಲಸ ಕೇಂದ್ರ ಸರ್ಕಾರ ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರು ಬೆಳೆದ ಯಾವುದೇ ಬೆಳೆಯ ಫಸಲನ್ನು ಕೇಂದ್ರ ಸರ್ಕಾರ ಖರೀದಿಸಲು ಮುಂದಾದ ಸಂದರ್ಭದಲ್ಲಿ ಬೆಲೆ ನಿಗದಿಪಡಿಸುವಾಗ ರೈತರೊಂದಿಗೆ ಚರ್ಚಿಸಿ ರೈತರ ಸಲಹೆ ಮೇರೆಗೆ ದರ ನಿಗದಿಪಡಿಸಬೇಕು. ರೈತರು ಬೆಳೆ ಬೆಳೆಯಲು ಸಾಕಷ್ಟು ಶ್ರಮಿಸುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಖರ್ಚು ಮಾಡುತ್ತಾರೆ. ಇದನ್ನು ಪರಿಗಣಿಸಿ ಬೆಳೆಗಳಿಗೆ ಯೋಗ್ಯ ಮಾರುಕಟ್ಟೆ ದರ ನಿಗದಿಪಡಿಸುವಂತಾಗಬೇಕು. ಇದೀಗ ವಿದೇಶದಿಂದ ತೊಗರಿಯನ್ನು ಉದ್ದೇಶಪೂರ್ವಕವಾಗಿ ಆಮದು ಮಾಡಿಕೊಂಡು ತೊಗರಿ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದಾಗಿ ರೈತರಿಗೆ ಅನ್ಯಾಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಬದಲಾಗಿ ಉದ್ದಿಮೆದಾರರಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುವಂತಾಗಬೇಕು. ಕೂಡಲೇ ಕೇಂದ್ರ ಸರ್ಕಾರ ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ ಮೊದಲಿದ್ದ ರೂ. 12 ಸಾವಿರ ದರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಬೆಳ್ತಂಗಡಿ | ಅವ್ಯವಸ್ಥೆಯ ಆಗರವಾಗಿರುವ ‘ವೇಣೂರು ಸಂತೆ ಮಾರ್ಕೆಟ್’: ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯತ್!

ಪ್ರತಿಭಟನೆಯಲ್ಲಿ ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಚನ್ನಬಸಪ್ಪ ಸಿಂಧೂರ, ಹಣಮಂತರಾಯ ಗುಣಕಿ, ಮಲ್ಲನಗೌಡ ನಾಡಗೌಡ, ಗುರುಸಂಗಪ್ಪ ಶಿವಯೋಗಿ, ಮಹೇಶ ಯಡಳ್ಳಿ, ಭಾಗಪ್ಪ ನಾಟೀಕಾರ, ದಾವುಲಸಾಬ ನದಾಫ್, ಹಣಮಂತ ಮುರಾಳ, ಗಿರಿಮಲ್ಲಪ್ಪ ದೊಡಮನಿ, ಬಸವರಾಜ ಚೌಧರಿ, ಭೀಮನಗೌಡ ಪಾಟೀಲ, ಲಂಕೇಶ ತಳವಾರ, ಬಂಗೆಪ್ಪ ಸಾಸನೂರ, ನಿಂಗಣ್ಣ ನಾಡಗೌಡ, ಸಿದ್ದು ಮೇಟಿ, ರ್‍ಯಾಬಪ್ಪಗೌಡ ಪುಲೇಶಿ, ರಾಜೇಸಾಬ ವಾಲೀಕಾರ, ಬಂದಗೀಸಾ ಹಳ್ಳೂರ, ಲಕ್ಷ್ಮಣ ಚೌಧರಿ, ಶ್ರೀಶೈಲ ಮಾಳೂರ, ಈರಯ್ಯ ಹಿರೇಮಠ, ಶರಣಬಸಪ್ಪ ಹಾದಿಮನಿ, ಗುರುಲಿಂಗಪ್ಪ ಪಡಸಲಗಿ, ಈರಣ್ಣ ಬ್ಯಾಕೋಡ, ಪ್ರಕಾಶ ಶಂಕ್ರೆಪ್ಪಗೋಳ, ವೀರಭದ್ರಯ್ಯ ಜಂಗಿನಗಡ್ಡಿ, ಎಸ್.ಎಸ್.ಬೂದಿಹಾಳ, ಅರವಿಂದ ಬ್ಯಾಕೋಡ, ಮಹಾಂತೇಶ ಕೋರಿ, ಮಲ್ಲಪ್ಪ ಮಾದರ ಸೇರಿದಂತೆ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...