ವಿಜಯಪುರ | ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆ ಮೂಲಕ ಆದಾಯ ಹೆಚ್ಚಿಸಿಕೊಳ್ಳಬೇಕು: ಜಂಟಿಕೃಷಿ ನಿರ್ದೇಶಕಿ ರೂಪಾ ಎಲ್

Date:

ವಿಜಯಪುರ ಜಿಲ್ಲೆಯ ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆಯತ್ತ ಗಮನಹರಿಸಿ, ಈ ಮೂಲಕ ಆದಾಯ ವರದಿ ಹೆಚ್ಚಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ಎಲ್ ತಿಳಿಸಿದರು.

ವಿಜಯಪುರ ನಗರದ ಹೊರವಲಯದ ಹಿಟ್ನಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ 2024-2025ನೇ ಸಾಲಿನ ರಾಷ್ಟ್ರೀಯ ಕಾಯ್ದೆ ತೈಲ ಅಭಿಯಾನ ಎಣ್ಣೆಕಾಳು ಯೋಜನೆ ಅಡಿ ಎಣ್ಣೆಕಾಳು ಉತ್ಪಾದನೆಯಲ್ಲಿ ನವೀನ ತಾಂತ್ರಿಕತೆಗಳ ವಿಷಯದ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ತೈಲ ಅಭಿಯಾನ ಎಣ್ಣೆಕಾಳು ಯೋಜನೆ ಅಡಿ ಆಯ್ಕೆ ಮಾಡಿರುವ ಜಿಲ್ಲೆಗಳಲ್ಲಿ ಎಣ್ಣೆಕಾಳು ಬೆಳೆಗಳಲ್ಲಿ ಕ್ಷೇತ್ರ ವಿಸ್ತರಣೆ ಹಾಗೂ ಉತ್ಪಾದಕತೆ ಹೆಚ್ಚುಮಾಡುವ ಮುಖಾಂತರ ಹೆಚ್ಚು ಉತ್ಪಾದನೆ ಸಾಧಿಸಬೇಕಾಗಿದ್ದು, ಈ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆ ಆಯ್ಕೆಯಾಗಿದೆ. ರೈತರಿಗೆ ಪ್ರಮುಖ ಎಣ್ಣೆಕಾಳು ಬೆಳೆಗಳಾದ ಸೂರ್ಯಕಾಂತಿ, ಶೇಂಗಾ ಕುಸಿಬಿ ಬೆಳೆಗಳನ್ನು ಬೆಳೆಯಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಯಾಗಿದ್ದ ಸಹ ವಿಸ್ತರಣಾ ನಿರ್ದೇಶಕ ಡಾ. ರವಿಬೆಳ್ಳಿ ಮಾತನಾಡಿ, “ರೈತರು ಒಂದೇ ಬೆಳೆಯನ್ನು ಬೆಳೆಯದೆ ಇತರೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ಎಣ್ಣೆಕಾಳು ಬೆಳೆಯಲು ಮಣ್ಣಿನ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಸ್ಥಿರಗೊಳಿಸುವುದಲ್ಲದೆ ರೈತರು ಕೃಷಿ ಆದಾಯ ಹೆಚ್ಚಿಸುವುದರ ಮೂಲಕ ರೈತರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಮಾಲಾ ಡಿ ಬಡಿಗೇರ ಆಯ್ಕೆ

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎಸ್ ಎಂ ವಸ್ತ್ರದ, ಡಾಕ್ಟರ್ ಶಿವಶಂಕರಮೂರ್ತಿ ಎಂ, ವಿಜ್ಞಾನಿಗಳಾದ ಡಾ. ಪ್ರಸನ್ನ ಪಿ, ಡಾ. ಶಿಲ್ಪ ಚೋಗಟಾಪುರ, ಡಾ. ಕಿರಣ್ ಸಾಗರ, ಡಾ. ವಿವೇಕ್ ದೇವರನಾವಾದಾಗಿ ಎಣ್ಣೆಕಾಳು ಉತ್ಪಾದನೆ ಕುರಿತು ತಾಂತ್ರಿಕ ಸಲಹೆ ನೀಡಿದರು.

ತರಬೇತಿಯಲ್ಲಿ ಉಪ ಕೃಷಿ ನಿರ್ದೇಶಕ ಡಾ.ಪ್ರಕಾಶ್ ಚೌಹಾಣ್, ಚಂದ್ರಕಾಂತ ಪವಾರ, ಡಾ.ಬಾಲರಾಜ ಬಿರಾದಾರ, ಸಹಾಯಕ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಬಾವಿಕಟ್ಟಿ, ಡಾ. ಎಚ್ ವೈ ಸಿಂಗೇಗೋಳ, ಎಂ ಎಚ್ ಯರಜರಿ, ಡಾ. ಎಸ್ ಇನಾಮದಾರ, ಪ್ರಕಾಶ್ ಕಳಸಗೊಂಡ, ಎಸ್ ಕೆ ಬಿರಾದಾರ ಸೇರಿದಂತೆ ಇಲಾಖೆಯ ವಿವಿಧ ತಾಲೂಕು ಹೋಬಳಿಗಳಿಂದ ಬಂದ ಕೃಷಿ ಅಧಿಕಾರಿಗಳು, ಆತ್ಮ ಯೋಜನೆ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...