ವಿಜಯಪುರ | ರೈತರಿಗೆ ಗುಣಮಟ್ಟ, ಸಮರ್ಪಕ ವಿದ್ಯುತ್ ಪೂರೈಸಬೇಕು: ರೈತ ಸಂಘ ಆಗ್ರಹ

Date:

ವಿಜಯಪುರ ಜಿಲ್ಲೆಯ ರೈತರಿಗೆ ಗುಣಮಟ್ಟ ಹಾಗೂ ಸಮರ್ಪಕ ವಿದ್ಯುತ್ ಪೂರೈಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ಸಿದ್ದಣ್ಣ ಬೆಂಜಿಗೇರಿ ಮೂಲಕ ಹುಬ್ಬಳ್ಳಿಯ ಹೆಸ್ಕಾಂ ಎಂಡಿ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಬಿರುಬಿಸಿಲಿನ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರಿಗೆ ಒಂದೆಡೆ ನೀರಿನ ಸಮಸ್ಯೆಯಾದರೆ, ಈಗ ವಿದ್ಯುತ್ ಇಲಾಖೆಯ ಕಣ್ಣಾಮುಚ್ಚಾಲೆ ಹಾಗೂ ಕಳಪೆಮಟ್ಟದ ವಿದ್ಯುತ್ ವಿತರಣೆಯಿಂದಾಗಿ ಅಡಚಣೆ ಉಂಟಾಗುತ್ತಿದೆ. ಅವಶ್ಯಕತೆ ಇರುವ ರೈತರು ಕೃಷಿ ಪಂಪ್‌ಸೆಟ್‌ಗಳನ್ನು ಪ್ರಾರಂಭಿಸುವಂತೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

“ರೈತರ ಐಪಿಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ, ಸ್ವಯಂ ವೆಚ್ಚ ಯೋಜನೆ‌ ಜಾರಿಮಾಡುತ್ತಿರುವುದು ತೀರಾ ಖಂಡನೀಯ. ಒಬ್ಬ ಸಣ್ಣ ರೈತ ಐಪಿಸೆಟ್‌ಗಾಗಿ ₹3 ಲಕ್ಷದಿಂದ ₹4 ಲಕ್ಷ ಹಣ ಖರ್ಚು ಮಾಡಬೇಕಾಗುತ್ತದೆ. ರಾಜ್ಯ ಸರ್ಕಾರದ ಇದರ ಹಿಂದಿನ ಉದ್ದೇಶವೇ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಿ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರವಾಗಿದೆ. ಇದನ್ನು ಕೂಡಲೇ ಕೈಬಿಡಬೇಕು. ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ರೈತರು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರಸ್ತೆ ತಡೆ ನಡೆಸಿ ರೈತರ ಜಮೀನಿಗೆ ರಾತ್ರಿ ಗೃಹಬಳಕೆ ವಿದ್ಯುತ್ ಪೂರೈಸಿ: ರೈತ ಸಂಘ

ಕೋಲಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ, ವಿಜಯಪುರ ತಾಲೂಕು ಅಧ್ಯಕ್ಷ ಮಹಾದೇವಪ್ಪ ತೇಲಿ, ಮುಖಂಡ ಹನಮೇಶ ಜಮಖಂಡಿ, ರಾಮಸಿಂಗ ರಜಪೂತ, ಸಿದ್ದನಗೌಡ ಪಾಟೀಲ, ರಾಜೇಶ್ ನದಾಫ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ತಾಳಿಕೋಟಿ ಅಧ್ಯಕ್ಷ ಶ್ರೀಶೈಲ ವಾಲಿಕಾರ, ಬಬಲೇಶ್ವರ ಅಧ್ಯಕ್ಷ ಮಕಬುಲ ಕೀಜಿ ಇಂಡಿ, ಅಧ್ಯಕ್ಷ ಎಂ‌ ಹೆಚ್ ಪೂಜಾರಿ, ರಾಮಚಂದ್ರ ಪಾಟೀಲ, ರಾಮಚಂದ್ರ ಬಡಿಗೇರ, ಸಂಗಪ್ಪಟಕ್ಕೆ, ಬಸವರಾಜ ನ್ಯಾಮಗೊಂಡ, ಸಂಪತ್ತ ಜಮಾದಾರ, ಶಾನೂರ ನಂದರಗಿ, ನಜೀರ ನಂದರಗಿ, ಚನ್ನು ಜಮಖಂಡಿ, ಬಸವರಾಜ ಮಸೂತಿ, ಕಲ್ಲಪ್ಪ ಪಾರಶೆಟ್ಟಿ, ಮಹಾಂತೇಶ ಮಮದಾಪುರ, ಘೋಡೆಕಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...