ವಿಜಯಪುರ | ಅಂಗಡಿ ಮಾಲೀಕರು ಯೂರಿಯಾ ಗೊಬ್ಬರವನ್ನು ರೈತರಿಗೆ ಸಕಾಲದಲ್ಲಿ ನೀಡಬೇಕು: ಎಸಿ ಗುರುನಾಥ ದಡ್ಡೆ

Date:

ಗೊಬ್ಬರದ ಅಂಗಡಿ ಮಾಲೀಕರು ರೈತರಿಗೆ ಯೂರಿಯಾ ಗೊಬ್ಬರವನ್ನು ಸಕಾಲದಲ್ಲಿ ನೀಡಬೇಕು. ನೀಡದೆ ಸಂಗ್ರಹಿಸಿದ್ದರೆ ಅಂತಹ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಮತ್ತು ಈ ಭಾಗದ ರೈತರ ಬೆಳೆಗಳಿಗೆ ಬೆಳೆಹಾನಿ ಪರಿಹಾರ ಶೀಘ್ರದಲ್ಲೇ ವರದಿ ಪಡೆದು ಪರಿಹರಿಸುತ್ತೇವೆ ಎಂದು ವಿಜಯಪುರ ಎಸಿ ಗುರುನಾಥ ದಡ್ಡೆ ಹೇಳಿದರು.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಕರವೇ ಕಾರ್ಯಕರ್ತರು ರೈತರಿಗೆ ಯೂರಿಯಾ ಗೊಬ್ಬರ ಮತ್ತು ಬೆಳೆ ಪರಿಹಾರ ಬೇಡಿಕೆಗಳ ಈಡೇರಿಕೆಗೆ ಆಯೋಜಿಸಿದ್ದ ಹೋರಾಟದಲ್ಲಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

“ಬಳೂತಿ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ಮನೆ ನಿರ್ಮಾಣವಾದರೂ ಹಕ್ಕುಪತ್ರ ವಿತರಣೆ ಹಾಗೂ ಹಳ್ಳದ ಗೆಣ್ಣೂರ ಗ್ರಾಮದಲ್ಲಿನ ಸಾರ್ವಜನಿಕ ಸ್ಥಳಗಳ ಸಮಸ್ಯೆ ಎಲ್ಲವನ್ನೂ ಮಾಹಿತಿ ಪಡೆದು ತಮ್ಮ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೋರಾಟಗಾರರಿಗೆ ಆಶ್ವಾಸನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟ ಸ್ಥಳಕ್ಕೆ ಆಗಮಿಸಿದ ಕೊಲ್ದಾರ ದಿಗಂಬರೇಶ್ವರ ಮಠದ ಕಲ್ಲಿನಾಥರು ಮಾತನಾಡಿ, “ರೈತರಿಗೆ ಸರಿಯಾದ ಸಮಯಕ್ಕೆ ಗೊಬ್ಬರ ಹಾಗೂ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕರೆ ಸರ್ಕಾರಕ್ಕೇ ಸಾಲ ಕೊಡಬಲ್ಲ ರೈತ. ಆದರೆ ಇಂದು ರೈತ ತನ್ನ ಗೊಬ್ಬರ ಪಡೆಯಲು ಹೋರಾಟ ಮಾಡಿ ಪಡೆಯುವ ದುಃಸ್ಥಿತಿ ಬಂದಿದೆ” ಎಂದರು.

ಪಟ್ಟಣದ ಮುಖಂಡೆ ಟಿ ಟಿ ಹಗೇದಾಳ ಮಾತನಾಡಿ, “ರಾಜ್ಯದಲ್ಲಿ ಅತಿಹೆಚ್ಚು ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದು ನಮ್ಮ ತಾಲೂಕು. ಇನ್ನೂ ಮುಂದೆ ಯಾವುದೇ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಬಾರದು” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಮಂದಿನ ಎಲ್ಲ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ: ಲತೀಫ್ ಖಾನ್ ಅಮೀರ್ ಪಠಾಣ್

ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಂಗಮೇಶ ಸಗರ. ಕರವೇ ತಾಲೂಕಾಧ್ಯಕ್ಷ ಮಹಾಂತೇಶ ಗಿಡ್ಡಪ್ಪಗೋಳ ಮತ್ತು ರವಿ ಗೊಳಸಂಗಿ, ಗ್ರಾಪಂ ಸದಸ್ಯ ಪ್ರದೀಪಗೌಡ ಪಾಟೀಲ ಹಾಗೂ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ ಎಸ್.ಎಂ. ಮ್ಯಾಗೇರಿ. ಪಿಎಸ್‌ಐ ಎಂ.ಬಿ. ಬಿರಾದಾರ, ಉಪ ಕೃಷಿ ನಿರ್ದೇಶಕ ಶರಣಗೌಡ ಮಾತನಾಡಿದರು.

ಈ ಸಂದರ್ಭದಲ್ಲಿ ಶಶಿಕಾಂತ ಬಿರಾದಾರ, ಮುದಕಪ್ಪ ಚಲವಾದಿ, ಶ್ರೀಶೈಲ ಬೆಣ್ಣೂರ, ಸುರೇಶ ಗಿಡ್ಡಪ್ಪಗೋಳ, ಗೋಪಾಲ ಕಾಖಂಡಕಿ, ಕಲ್ಲಪ್ಪ ಗಿಡ್ಡಪ್ಪಗೋಳಿ, ಬಸವರಾಜ ನ್ಯಾಮಗೊಂಡ, ಗುಳಪ್ಪ ಗುಗ್ಗರಿ, ಸತ್ಯಪ್ಪ ಕುಳೊಳ್ಳಿ ನೂರಾರು ರೈತರು ಹಾಗೂ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...