ವಿಜಯಪುರ | ಮಹಿಳೆಯ ಮಡಿಲಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು: ಶಿವಲೀಲಾ ಮಧುರಾ

Date:

ಮಹಿಳೆಯ ಉಡಿಯಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು, ಮಹಿಳೆ ತನ್ನ ಜೀವನದ ಅನುಭಾವವನ್ನು ತ್ರಿಪದಿಯ ಮೂಲಕ ಹಾಡಿ ಜಾನಪದ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸಿದ ಗರತಿಯ ಹಾಡುಗಳು ಜನಪ್ರಿಯತೆ ಉಳಿಸಿಕೊಂಡಿವೆ ಎಂದು ವಿಜಯಪುರದ ಶಿವಶರಣೆ ದಾನಮ್ಮ ದೇವಸ್ಥಾನದ 14ನೇ ಜಾತ್ರಾ ಮಹೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ಜಾನಪದ ಚಿಂತಕಿ ಶಿವಲೀಲಾ ಮುರಾಳ ಉಪನ್ಯಾಸ ನೀಡಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಆಶ್ರಯದಲ್ಲಿ ನಡೆದ ಜಾನಪದ ಗೋಷ್ಠಿಯಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಮಾತನಾಡಿ, ಜಾನಪದ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು ಗ್ರಾಮೀಣ ಭಾಗದ ಜನರೇ ಜಾನಪದ ಸಾಹಿತ್ಯದ ಮಾಲೀಕರು ಎಂದರು. ಜಾನಪದ ಸಾಹಿತ್ಯ ವಿದ್ವಾಂಸ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಬಿ.ಎನ್ ಪಾಟೀಲ ಮಾತನಾಡಿ, ರೈತರು ಹಾಗೂ ರೈತ ಮಹಿಳೆಯರು ದಿನನಿತ್ಯ ಜಾನಪದ ಹಾಡುಗಳನ್ನು ಹಾಡಿ ಪ್ರಸಾರ ಮಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ. ಅನೇಕ ರೈತಾಪಿ ಜನರು ರಚಿಸಿ ಜಾನಪದ ಹಾಡುಗಳನ್ನು ಹಾಡಿ ರಂಜಿಸಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಜಾನಪದ ಸಾಹಿತ್ಯ ಕನ್ನಡ ಸಾಹಿತ್ಯದ ಬುನಾದಿ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು: ಗಂಗಾಧರ ಸೋನಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಶಿವಾನಂದ ಮಂಗಾನವರ, ಮಹೆತಾಬ ಕಾಗವಾಡ ರೈತ ಗೀತೆ ಹಾಗು ತತ್ವಪದಗಳನ್ನು ಹಾಡಿದರು. ಸಾವಿತ್ರಿ ಮಠ ಯೋಗಾಭ್ಯಾಸದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಅಪ್ಪು ಇಟ್ಟಂಗಿ, ರಶ್ಮಿ ಕೋರಿ, ರುದ್ರಗೌಡ ಪಾಟೀಲ,ಆರ್.ಎಮ್.ತೊನಶ್ಯಾಳ ವೇದಿಕೆ ಮೇಲಿದ್ದರು. ಎಂ.ಬಿ. ಮೂಲಿಮನಿ, ಎಚ್.ಎಮ್. ಬೋರಾವತ, ಪಾಟೀಲ, ರವೀಂದ್ರ ಬಾವೂರ, ಎಮ್.ಎಸ್.ಮೇಟಿ, ಸುಜಾತಾ ಕತ್ತಿ, ಕಮಲಾ ಜುಮನಾಳ, ಗಂಗಾಬಾಯಿ ಸಜ್ಜನ, ಬಸವರಾಜ ಮರನೂರ, ಸಿ.ಎಸ್. ಚಟ್ಟೆರ, ಪ್ರೇಮಾ ನಂದಿ, ಡಾ. ಸವಿತಾ ಝಳಕಿ, ಕವಿತಾ ಕಲ್ಯಾಣಪ್ಪಗೋಳ, ಶೋಭಾ ಮೇಡೆಗಾರ, ಸಹದೇವ ನಾಡಗೌಡ, ಎಮ್.ಜಿ ಸಜ್ಜನ, ಸುಭಾಷ ಕರಿಕಬ್ಬಿ, ಎಸ್.ಎಸ್. ಶಿವರಾಯಗೋಳ, ಜಯಶ್ರೀ ಹಿರೇಮಠ, ಮಹಮ್ಮದ ಗೌಸ ಹವಾಲ್ದಾರ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...