ವಿಜಯಪುರ | ಜಾತಿಗಣತಿ ವಿಚಾರ: ಮಾಜಿ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಅಹಿಂದ ಮುಖಂಡರ ಸಭೆ

Date:

ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಜಾತಿವಾರು ಜನಗಣತಿ ಜಾರಿಗಾಗಿ ಒತ್ತಾಯಿಸಲು ಮಾಜಿ ಶಾಸಕರಾದ ರಾಜು ಆಲಗೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಅಹಿಂದ ಮುಖಂಡರಾದ ಎಸ್ ಎಂ ಪಾಟೀಲ ಗಣಿಹಾರ ಮಾತನಾಡಿ, ರಾಜ್ಯದಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಲು ಈ ಜಾತಿವಾರು ಗಣತಿ ಯಥಾವಾತ್ತಾಗಿ ಜಾರಿಯಾದಾಗ ಮಾತ್ರ ತಳ ಸಮುದಾಯಗಳಿಗೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಿಸಿದರು.

ಇನ್ನೋರ್ವ ಅಹಿಂದ ಮುಖಂಡರಾದ ಸೋಮನಾಥ ಕಳ್ಳಿಮನಿ ಮಾತನಾಡಿ, ಈ ಅಹಿಂದ ಒಕ್ಕೂಟವು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಪ್ರತಿ ತಾಲೂಕಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲೆಯ ಪ್ರತಿ ಹಳ್ಳಿಗಳಿಗೂ ಈ ಜಾತಿವಾರು ಜನಗಣತಿಯ ಮಹತ್ವವನ್ನು ತಿಳಿಸಲು ಒಂದು ತಂಡವನ್ನು ರಚಿಸಲಾಗುವದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 09 at 7.16.20 PM 1 1

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಾಜು‌ ಆಲಗೂರ ಮಾತನಾಡಿ, ಈ ಅಹಿಂದ ಹೋರಾಟ ಪಕ್ಷಾತೀತವಾಗಿ ನಡೆಯಲಿದೆ ಮತ್ತು ಈ ಅಹಿಂದ ಚಳುವಳಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಅಹಿಂದ ಮುಖಂಡರು ತಮ್ಮ ಎಲ್ಲ ಭಿನ್ನಾಭಿಪ್ರಾಯ ಮರೆತು ಕಾಂತರಾಜು ವರದಿಯನ್ನು ಜಾರಿಗೊಳಿಸಲು ಭಾಗವಹಿಸಬೇಕು. ಜಿಲ್ಲೆಯ ಎಲ್ಲರೂ ತಮ್ಮ ಗ್ರಾಮಗಳಲ್ಲಿ ಜನತೆಗೆ ಕಾಂತರಾಜು ವರದಿಯು ಜಾರಿಗೆ ಬಂದರೆ ಏನೆಲ್ಲ ಅನುಕೂಲಗಳಾಗಲಿವೆ ಎಂದು ತಿಳಿಸಲು ಕೋರಿಕೊಂಡರು.

ಇದನ್ನು ಓದಿದ್ದಿರಾ? ಮಂಗಳೂರು | ಅಸಮರ್ಪಕ ರಸ್ತೆಯಿಂದಾಗಿ ಸ್ಕಿಡ್ ಆಗಿ ಬಿದ್ದ ಬೈಕ್: ಟ್ಯಾಂಕರ್ ಹರಿದು ಮಹಿಳೆ ಮೃತ್ಯು

ಸಭೆಯಲ್ಲಿ ದಲಿತ ಮುಖಂಡರಾದ ಅಡಿವೆಪ್ಪ ಸಾಲಗಲ್, ದಸಸಂ ಜಿಲ್ಲಾ ಸಂಚಾಲಕರಾದ ಸಂಜು ಕಂಬಾಗಿ, ದಸಸಂ ಜಿಲ್ಲಾ ಸಂಘಟನಾ ಸಂಚಾಲಕರಾದ ಚನ್ನು ಕಟ್ಟಿಮನಿ, ಅನಿಲ ಹೊಸಮನಿ, ಹಿಂದುಳಿದ ವರ್ಗಗಳ ಮುಖಂಡರಾದ ಜಕ್ಕಪ್ಪ ಎಡವೆ, ಎಂ.ಸಿ. ಮುಲ್ಲಾ, ಹಮೀದ್ ಮುಷರಿಫ್, ಫಯಾಜ ಕಲಾದಗಿ, ಬಿ.ಎಸ್. ಗಸ್ತಿ, ದೇವಾನಂದ ಲಚ್ಯಾಣ, ಪ್ರಭುಗೌಡ ಪಾಟೀಲ, ಎಂ.ಬಿ. ಯಂಕಂಚಿ, ಮಲ್ಲು ಬಿದರಿ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...