ವಿಜಯಪುರ | ಸಹಕಾರ ಸೊಸೈಟಿಯಲ್ಲಿ ಹೆಚ್ಚು ಬಡ್ಡಿಯ ಆಮಿಷವೊಡ್ಡಿ ಕೋಟಿ-ಕೋಟಿ ವಂಚನೆ

Date:

ಹೆಚ್ಚು ಬಡ್ಡಿ ನೀಡುತ್ತೇವೆಂದು ಆಮಿಷವೊಡ್ಡಿ ಜನರಿಂದ ಹಣ ಠೇವಣಿ ಇರಿಸಿಕೊಂಡು, ಈಗ ಹಣ ನೀಡದೆ ವಂಚಿಸಲಾಗುತ್ತಿದೆ ಎಂದು ವಿಜಯಪುರದ ಅಮಾನತ್ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಆರೋಪ ಕೇಳಿಬಂದಿದೆ. ಹಣವನ್ನು ಠೇವಣಿ ಇಟ್ಟವರಿಗೆ ಹಣ ವಾಪಸ್‌ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಠೇವಣಿ ಇಟ್ಟಿದ್ದವರು ಸೊಸೈಟಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಣ ಠೇವಣಿ ಇರಿಸಿಕೊಂಡು ವಂಚಿಸುವ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ, ಐಎಂಎಫ್‌ ಬಹುಕೋಟಿ ಹಗರಣ ಬಯಲಾಗಿತ್ತು. ಇದೀಗ, ವಿಜಯಪುರದಲ್ಲಿ ಸಹಕಾರ ಸೊಸೈಟಿ ಅಂತದ್ದೇ ವಂಚನೆ ಮಾಡಿದೆ ಎಂದು ತಿಳಿದುಬಂದಿದೆ.

ಅಮಾನತ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಲವಾರು ಗ್ರಾಹಕರು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಠೇವಣಿ ಇರಿಸಿದ್ದರು. ಸುಮಾರು 25ರಿಂದ 30 ಕೋಟಿ ರೂ. ಹಣವನ್ನು ಜನರು ಠೇವಣಿ ಇಟ್ಟಿದ್ದಾರೆ. ಆದರೆ, ಸೊಸೈಟಿಯ ಚೇರ್ಮನ್ ಹಾರುನ್ ರಶೀದ್ ಮಾಶ್ಯಾಳಕರ ಮತ್ತು ಆಡಳಿತ ಮಂಡಳಿ ಹಣವನ್ನು ವಾಪಸ್‌ ಕೊಡುತ್ತಿಲ್ಲವೆಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಹೆಚ್ಚು ಬಡ್ಡಿ ನೀಡುತ್ತೇವೆಂದು ಬಡ ಜನರಿಂದ ಸೊಸೈಟಿ ಹಣ ಠೇವಣಿ ಇರಿಸಿಕೊಂಡಿತ್ತು. ಹಲವಾರು ಜನರು ಎರಡು ವರ್ಷಗಳಿಂದ ಪ್ರತಿ ತಿಂಗಳು ಹಣ ಠೇವಣಿ ಇಟ್ಟಿದ್ದರು. ಆದರೆ, ಈಗ ಹಣ ನೀಡುತ್ತಿಲ್ಲವೆಂದು ಗ್ರಾಹಕರು ಆರೋಪಿಸಿದ್ದಾರೆ.

ಸೊಸೈಟಿಯ ಬ್ಯಾಂಕ್‌ಗೆ ಹೋದರೆ ಸೊಸೈಟಿ ಚೇರ್ಮನ್‌ ಆಗಲೀ, ಮ್ಯಾನೇಜ್ ಆಗಲೀ ಸಿಗುತ್ತಿಲ್ಲ. ಚೇರ್ಮನ್‌ ಮನೆಗೆ ಹೋದರೆ, ಅಲ್ಲಿಯೂ ಅವರು ಇಲ್ಲ ಎನ್ನುತ್ತಾರೆ. ಮ್ಯಾನೇಜರ್ ಮತ್ತು ಸಿಬ್ಬಂದಿಗಳು ಬೇಜವಾಬ್ದಾರಿತನ ಉತ್ತರ ನೀಡುತ್ತಾರೆ ಎಂದು ಗ್ರಾಹಕರು ದೂರಿದ್ದಾರೆ.

“ಸೊಸೈಟಿಯಿಂದ ಯಾರ್ಯಾರಿಗೂ ಸಾಲ ನೀಡಿದ್ದಾರೆ. ಸಾಲ ಪಡೆದವರು ಸೊಸೈಟಿಗೆ ಸಾಲ ಮರುಪಾತಿಸಿಲ್ಲ. ಕಷ್ಟದ ಸಮಯಕ್ಕೆ ಉಪಯೋಗವಾಗುತ್ತದೆ ಎಂದು ಠೇವಣಿ ಇಟ್ಟಿದ್ದ ಹಣ, ನಮ್ಮ ಕಷ್ಟಕ್ಕೆ ದೊರೆಯುತ್ತಿಲ್ಲ” ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...