ವಿಜಯಪುರ | ಗಬಸಾವಳಗಿ, ಬಿಸನಾಳ ಅನಿರ್ದಿಷ್ಟಾವಧಿ ಉಪವಾಸ ಅಂತ್ಯ

Date:

ಗಬಸಾವಳಗಿ ಮತ್ತು ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿನಲ್ಲಿಯೇ ಉಳಿಸಿ ಎಂಬ ಬೇಡಿಕೆಯೊಂದಿಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮಂಗಳವಾರ (ಮಾ.26) ಅಂತ್ಯವಾಗಿದೆ. ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಶಾಸಕ ಅಶೋಕ್‌ ಮನಗೋಳಿ ಉಪವಾಸ ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಉಪವಾಸ ನಿರತ ನಾಯಕ ಶಾಂತಗೌಡ ಅ. ಬಿರಾದಾರ ಮಾತನಾಡಿ, ನಮ್ಮ ಸ್ಥಳೀಯ ಶಾಸಕರ ಮೇಲೆ ನಂಬಿಕೆ ಇದೆ. ಯಾಕಂದ್ರೆ ದಿ. ಮಾಜಿ ಸಚಿವ ಎಂ.ಸಿ. ಮನಗೂಳಿಯವರನ್ನು ನೆನೆದು ಯಾವ ರೀತಿ ಎಂ.ಸಿ ಮನಗೂಳಿಯವರು ನಮ್ಮ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಸಲುವಾಗಿ ಕಾಲಿಗೆ ಪಾದರಕ್ಷೆ ಇಲ್ದೆ ಹೋರಾಡಿ, ನೀರಾವರಿ ಮಾಡಿದರೋ ಅದೇ ರೀತಿ ಅವರ ಪುತ್ರ ಎ.ಎಂ. ಮನಗೂಳಿ ಶಾಸಕರು ಕೂಡ ಅಭಿವೃದ್ಧಿಯ ಹಾದಿಯಲ್ಲಿದ್ದಾರೆ ಎಂದರು.

ಅವರ ಮೇಲೆ ನಂಬಿಕೆ ಇಟ್ಟು, ಇಂದಿನಿಂದ ಅದೇ ಭರವಸೆಯಲ್ಲಿ ನಾನೂ ಕೂಡ ನ್ಯಾಯ ಸಿಗುವವರೆಗೆ ಕಾಲಿಗೆ ಪಾದರಕ್ಷೆ ಇಲ್ದೆ ಇರುತ್ತೇನೆ. ಯಾವ ರೀತಿ ದೇವೇಗೌಡರು ಗುತ್ತಿಬಸವೇಶ್ವರ ಏತನೀರಾವರಿಗೆ ಚಾಲನೆ ನೀಡಿ ಮನಗೂಳಿ ಮಾವನವರಿಗೆ ಪಾದರಕ್ಷೆ ಹಾಕಿಸಿದರೋ, ಅದೇ ರೀತಿ ನನಗೆ ಶಾಸಕರು ನ್ಯಾಯ ಕೊಡಿಸಿ ಪಾದರಕ್ಷೆ ಹಾಕಿಸಬೇಕು ಅಲ್ಲಿಯವರೆಗೆ ಪಾದರಕ್ಷೆ ತೊಡುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ ಬಂಗಾರೆಪ್ಪಗೌಡ ಬಾ ಬಿರಾದಾರ ಅವರು ಕೂಡ ಪಾದರಕ್ಷೆ ಬಿಡುವುದಾಗಿ ಹೇಳಿದರು. ಶಾಸಕರು ಭರವಸೆಯನ್ನು ಸ್ವೀಕರಿಸಿ ಉಪವಾಸ ನಿರತರಿಗೆ ಎಳನೀರು ಕುಡಿಸಿ ಸತ್ಯಾಗ್ರಹವನ್ನು ಅಂತ್ಯಗೊಳಿಸುವಲ್ಲಿ ಯಶ್ವಿಯಾದರು.

ಈ ಸಂದರ್ಭದಲ್ಲಿ ಗಂಗಪ್ಪಗೌಡ ದಾ. ಬಿರಾದಾರ, ಸಾಹೇಬಗೌಡ ಅ. ಬಿರಾದಾರ, ಅಪ್ಪಾಸಾಹೇಬಗೌಡ ಅ. ಬಿರಾದಾರ, ವೇದಿಕೆ ಅದ್ಯಕ್ಷ ಬಾಬಾಗೌಡ ಕಾ. ಬಿರಾದಾರ, ಪ್ರಭುಗೌಡ ಬಿರಾದಾರ, ಚಂದ್ರಶೇಖರ ಎಮ್. ದೇವರೆಡ್ಡಿ, ಬಸನಗೌಡ ಶಾಂ.ಬಿರಾದಾರ, ಮಲ್ಲಿಕಾರ್ಜುನ ಜಿ.ಹಿರೇಮಠ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...