ವಿಜಯಪುರ | ಗಣಿಹಾರ ತಾಂಡಾದ ದೇವಿಬಾಯಿ ಕೊಲೆ ಪ್ರಕರಣ:‌ ಆರೋಪಿಗಳ ಜಾಮೀನು ವಿರೋಧಿಸಿ ಸ್ಥಳೀಯರ ಮನವಿ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ತಾಂಡದ ದೇವಿಬಾಯಿ ಲಾಲ್ ಸಿಂಗ್ ಜಾದವ(42) ಎನ್ನುವ ಮಹಿಳೆಯ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ಆಗ್ರಹಿಸಿ ಗಣಿಹಾರ ತಾಂಡದ ನಿವಾಸಿಗಳು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣದಲ್ಲಿರುವ ತಾಲೂಕು ಆಡಳಿತ ಕಚೇರಿಗೆ ಆಗಮಿಸಿದ ತಾಂಡಾದ ನಿವಾಸಿಗಳು ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ ಅವರ ಮೂಲಕ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

“ಆರೋಪಿಗಳಿಗೆ ಜಾಮೀನು ಸಿಕ್ಕರೆ ಆಕೆಯ ಮಕ್ಕಳಿಗೆ ತೊಂದರೆಯಾಗಲಿದೆ. ಆದಕಾರಣ ಕಲಬುರಗಿ ದರ್ಗಾ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ನೀಡಬಾರದು. ಅವರಿಗೆ ಜೀವಾವಧಿ ಶಿಕ್ಷೆ ನೀಡಬೇಕು” ಎಂದು ಗಣಿಹಾರ ತಾಂಡಾದ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಹಿನ್ನೆಲೆ : ಗಣಿಹಾರ ತಾಂಡಾದ ಮೃತ ದೇವಿಬಾಯಿ ಅದೇ ತಾಂಡಾದ ಸೋಮಲು(53) ಎಂಬಾತನ ಜತೆಗೆ ಸಹಜೀವನ ನಡೆಸುತ್ತಿದ್ದಳು. ಮೊದಲ ಪತಿ 10 ವರ್ಷದ ಹಿಂದೆ ಮತಪಟ್ಟಿದ್ದು, ಮಕ್ಕಳಿದ್ದಾರೆ. ಸುಮಾರು 2015ರಿಂದ ದೇವಿ ಬಾಯಿ ಹಾಗೂ ಸೋಮಲು ಸಹಜೀವನ ನಡೆಸುತ್ತಿದ್ದರು.

ಮೊದಲ ಪತಿಯ ಎರಡನೇ ಮಗಳ ಮದುವೆ ವಿಚಾರವಾಗಿ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಹಾಗಾಗಿ ಮಗಳು ಸುಮಾರು ಏಳೆಂಟು ತಿಂಗಳ ಹಿಂದೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಂಗೊಳ್ಳಿಗೆ ಹೋಗಿದ್ದರು.

ಮಗಳು ಸಂಗೊಳ್ಳಿಗೆ ಹೋಗಿದ್ದಾಗಲೂ ಜಗಳವಾಗಿದೆ. ಆಗ ಮಗಳು ವಾಪಸ್ ವಿಜಯಪುರಕ್ಕೆ ಬಂದಿದ್ದಾಳೆ. ದೇವಿಬಾಯಿ ಅಲ್ಲೇ ಉಳಿದುಕೊಂಡಿದ್ದಾಳೆ. ಆಗ ಸೋಮಲು ವಿಜಯಪುರ ಬಸ್ ಹತ್ತಿಸುವುದಾಗಿ ಹೇಳಿ ಕಾರಿನಲ್ಲಿ ಆಕೆಯನ್ನು ಕರೆದುಕೊಂಡು ಬಂದಿದ್ದಾನೆ. ಆಗ ಹಾಮು ಪಪ್ಪು ಜೊತೆಗಿದ್ದ. ಆಳಂದ ಚೆಕ್ ಪೋಸ್ಟ್ ಬಳಿ ಕಾರು ನಿಲ್ಲಿಸಿ ಬಸ್ ಹತ್ತಿಸದೆ ಕಲಬುರಗಿ ದಾಟಿ ಕಾರು ತೆಗೆದುಕೊಂಡು ಹೋದಾಗ ದೇವಿ ಬಾಯಿಗೆ ಅನುಮಾನ ಬಂದಿದೆ. ಸಣ್ಣೂರು ಕ್ರಾಸ್ ಹತ್ತಿರ ಕಾರಿನಲ್ಲಿಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ನಂತರ ಶವ ತೆಗೆದುಕೊಂಡು ಸೇಡಂನತ್ತ ಬರುವಾಗ ಟೋಲ್ ಗೇಟ್ ನೋಡಿ ವಾಪಸ್ ಆಗಿದ್ದಾರೆ. ಶಹಾಬಾದ್ ರಾವೂರ ಮಾರ್ಗವಾಗಿ ಚಿತ್ತಾಪುರಕ್ಕೆ ಬಂದು ಒಂದು ಕ್ಯಾನ್ ಪೆಟ್ರೋಲ್ ಖರೀದಿಸಿದ್ದಾರೆ. ಯಾದಗಿರಿ ತೆಲಂಗಾಣ ಗಡಿಯಲ್ಲಿ ಶವ ಬಿಸಾಕುವಲ್ಲಿ ವಿಫಲರಾಗಿದ್ದಾರೆ. ನಂತರ ವಾಡಿಯಲ್ಲಿ ಸನಿಗೆ ಖರೀದಿಸಿದ್ದು, ಲಾಡ್ಲಾಪುರ ಹತ್ತಿರ ಶವ ಹೂಳಲು ನೋಡಿದ್ದಾರೆ. ನೆಲಗಟ್ಟಿ ಇರುವುದರಿಂದ ಪೆಟ್ರೋಲ್ ಸುರಿದು ಶವ ಸುಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಜೂನ್ 1ರಂದು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಊರಿಗೆ ಬಂದು ನಾನು ಅವಳನ್ನು ವಿಜಯಪುರ ಬಸ್ಸಿಗೆ ಹತ್ತಿಸಿದ್ದೇನೆ. ಎಲ್ಲಿ ಹೋದಳು ಗೊತ್ತಿಲ್ಲವೆಂದು ಹೇಳಿದ್ದಾನೆ. ಏನೋ ಗೊತ್ತಿಲ್ಲದಂತೆ ಮನೆಯವರೊಂದಿಗೆ ಹುಬ್ಬಳ್ಳಿ, ನಿಪ್ಪಾಣಿಯಲ್ಲಿ ಹುಡುಕಿದ್ದಾನೆ ಎಂದು ಕಲಬುರಗಿ ಎಸ್ ಪಿ ಅಡ್ಡರ ಶ್ರೀನಿವಾಸಲು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಪ್ರಕರಣ | SIT ರಚನೆಯಲ್ಲಿ ರಾಹುಲ್‌ ಗಾಂಧಿ ಮಧ್ಯಪ್ರವೇಶಿಸುವಂತೆ ಸಾಮಾಜಿಕ ಕಾರ್ಯಕರ್ತೆ ಒತ್ತಾಯ

ಈ ಬಗ್ಗೆ ತೀವ್ರ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ. ಆರೋಪಿಗಳಾದ ಸೋಮಲು ಹಾಗೂ ಹಾಮು ಪಪ್ಪು ಇಬ್ಬರನ್ನೂ ಬಂಧಿಸಲಾಗಿದೆ. ಸದ್ಯ ಕಲಬುರಗಿಯ ದರ್ಗಾ ಜೈಲಿನಲ್ಲಿದ್ದಾರೆ.

ಮನವಿ ಸಲ್ಲಿಸುವ ವೇಳೆ ಕಿಶನ್ ಬಿಮು ಚಹಾನ್, ಕಿರಣ್ ರಾಠೋಡ್, ಪೂಜಾ ರಾಠೋಡ್, ಕಾಶಿಬಾಯಿ ಚೌಹಾಣ್, ಜಯಶ್ರೀ ಪವಾರ್, ಪಾರುಬಾಯಿ ರಾಠೋಡ ಹಾಗೂ ಸುಮಿತ್ರ ರಾಠೋಡ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...