ವಿಜಯಪುರ | ಲಿಂಗ ಸಮಾನತೆ ಮತ್ತು ಆರ್ಥಿಕ ಸಬಲೀಕರಣ ಮುಖ್ಯ: ಹಿಲರಿ ಪಿಂಟೋ

Date:

ಲಿಂಗ ಸಮಾನತೆ ಬಗ್ಗೆ ಮಕ್ಕಳಿಂದ ಕಿರುಚಿತ್ರವನ್ನು ತೋರಿಸುವುದರ ಮೂಲಕ ಮಹಿಳೆಯರಿಗೆ ಜಾಗೃತಿ ಮೂಡಿಸಲಾಯಿತು. ನಮ್ಮ ದೀಪಾಲಯ ಸಂಸ್ಥೆ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಸ್ವಸಹಾಯ ಗುಂಪುಗಳನ್ನು ಕಟ್ಟಿಕೊಂಡು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಮುಖ್ಯ ಕೆಲಸವಾಗಿದೆ ಎಂದು ಸಂಸ್ಥೆಯ ಹಿಲರಿ ಪಿಂಟೋ ಹೇಳಿದರು.

ವಿಜಯಪು ಜಿಲ್ಲೆಯ ಇಂಡಿ ನಗರದಲ್ಲಿ ದೀಪಾಲಯ ಸಂಸ್ಥೆ ಹಾಗೂ ಸ್ವಸಹಾಯ ಸಂಸ್ಥೆಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದರು.

ಮಹಾಂತೇಶ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಅಂತಾರಾಷ್ಟ್ರೀಯ ಮಹಿಳಾ ದಿನ, ಮಹಿಳೆಯರಿಗೆ ಅತ್ಯಂತ ಸ್ಪೂರ್ತಿದಾಯಕ ದಿನವಾಗಿದೆ. ಇತಿಹಾಸದ ಉದ್ದಕ್ಕೂ ಸಮಾಜಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದನ್ನು ಸ್ಮರಿಸಿಕೊಳ್ಳಲೇಬೇಕಾದ ಅವಶ್ಯಕತೆ ಇಂದಿನ ತುರ್ತು ಅಗತ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಡಲ ಮಹಿಳಾ ಧ್ವನಿ ಒಕ್ಕೂಟ ಜಿಲ್ಲಾ ಮುಖಂಡೆ ಡಾ. ಭುವನೇಶ್ವರಿ ಕಾಂಬಳೆ ಮಾತನಾಡಿ, “ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಿರದೆ, ಸಮಾಜದ ಪ್ರಗತಿಗೆ ಮಹಿಳೆ ತುಂಬಾ ಪ್ರಮುಖ ಪಾತ್ರವಹಿಸಿದ್ದಾಳೆ. ಹಿಂದಿನ ದಿನಮಾನಗಳಲ್ಲಿ ಮಹಿಳೆಯನ್ನು ತುಚ್ಛ ಭಾವನೆಯಿಂದ ನೋಡುತ್ತಿದ್ದರು. ಆದರೆ ಅದೀಗ ಬದಲಾಗಿದೆ. ಮಹಿಳೆಯೂ ಕೂಡ ಪುರಷನಿಗೆ ಸಮಾನಳು ಎಂಬುದನ್ನು ತೋರಿಸಿದ್ದಾಳೆ. ಪುರುಷರಂತೆ ಮಹಿಳೆಯೂ ಕೂಡ ಕೆಲಸ ಮಾಡಬಲ್ಲಳೆಂದು ತೋರಿಸಿಕೊಟ್ಟಿದ್ದಾಳೆ” ಎಂದರು.

“ಪುರುಷ ಪ್ರಧಾನ ವ್ಯವಸ್ಥೆಯನ್ನು ಮೆಟ್ಟಿನಿಂತು ಅದರ ವಿರುದ್ಧ ಧೈರ್ಯವಾಗಿ ಮುನ್ನಡೆಯುತ್ತಿರುವುದು ತುಂಬಾ ಆಶಾದಾಯಕ ಬೆಳವಣಿಗೆ” ಎಂದರು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭ ಮಾಡಿ, ಉದ್ಘಾಟನೆಯ ಮೊದಲು ಸಂವಿಧಾನ ಪೀಠಿಕೆ ಬೋಧನೆ ಮಾಡಿದರು.

ಈ ಸುದೆದಿ ಓದಿದ್ದೀರಾ? ತುಮಕೂರು | ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸಬಾರದು: ಡಾ. ನಾಗಲಕ್ಷ್ಮೀ ಚೌಧರಿ

ಸಭೆಯ ಅಧ್ಯಕ್ಷತೆಯನ್ನು ಸಹೋದರಿ ಜಾಸಿಂತ ಮಾಚಾದೊ ವಹಿಸಿದ್ದರು. ಶೈಲಜಾ ಜಾಧವ, ಸ್ವಸಹಾಯ ಮಹಿಳಾ ಒಕ್ಕೂಟದ ಅಧ್ಯಕ್ಷರು, ಶಕ್ತಿ, ಜ್ಞಾನ, ದೀಪಾ, ಶಾಂತಿ, ಸಾಧನೆ, ಸುರಕ್ಷಾ ಒಕ್ಕೂಟದಿಂದ ಅಧ್ಯಕ್ಷೆಯರಾದ ಯು ಮಾದೇವಿ ಚೆನ್ನಿರಪ್ಪಗೋಳ, ಜಯಶ್ರೀ, ಮಾತಾಬಾಯಿ ಮಾದರ, ಸವಿತಾ ಚವಾಣ್, ದೇವಿಕಾ, ರೇಣುಕಾ ನಾಟೆಕರ, ಶಾರದಾ ಮೊಸಲೆ,
ಸಿದ್ದಮ್ಮ ಗುಣಕಿ, ಶೀಲವಂತರ ಸರ್, ರಾಧಾ ನಿಂಬಳಕರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...