ವಿಜಯಪುರ | ಕೆನರಾ ಬ್ಯಾಂಕ್‌ನಲ್ಲಿ 52 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

Date:

ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ ಈ ಪ್ರಕರಣವೂ ಒಂದಾಗಿದೆ ಎಂದು ಹೇಳಲಾಗಿದೆ.

ವಿಜಯಪುರದ ಮನಗುಳಿ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಮೇ 23ರಂದು ಕಳ್ಳತನ ನಡೆದಿದೆ. ಆದರೆ, ಕೃತ್ಯವು ಮೇ 26ರಂದು ಸಿಬ್ಬಂದಿ ಕೆಲಸಕ್ಕೆ ಮರಳಿದಾಗ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬಂದು ಒಂದು ವಾರ ಕಳೆದರೂ ಇನ್ನೂ ಯಾರನ್ನೂ ಪೊಲೀಸರು ಬಂಧಿಸಿಲ್ಲ ಎಂದು ವರದಿಯಾಗಿದೆ.

ಕಳ್ಳರು 51 ಕಿ.ಗ್ರಾಂ ಚಿನ್ನ ಕಳುವಾಗಿದ್ದರೂ, ಅವರು ಚಿನ್ನಾಭರಣಗಳನ್ನು ಯಾವ ರೀತಿ ಸಾಗಿಸಿದ್ದಾರೆ ಎಂಬ ಮಾಹಿತಿಯೂ ಇನ್ನೂ ಪೊಲೀಸರಿಗೆ ದೊರೆತಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಗಳನ್ನು ಬಂಧಿಸಲು ನಾವು ಎಂಟು ತಂಡಗಳನ್ನು ರಚಿಸಿದ್ದೇವೆ. ಕಳ್ಳತನದಲ್ಲಿ 6 ರಿಂದ 8 ಜನರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ” ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ.

ಇದು ಪೂರ್ವ ಯೋಜಿತ ಕಳ್ಳತನ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತೆಗೆ ಕಳ್ಳರು ಅಪರಾಧ ಮಾಡಲು ದೀರ್ಘ ವಾರಾಂತ್ಯಕ್ಕಾಗಿ, ಎರಡನೇ ಶನಿವಾರ ಮತ್ತು ಭಾನುವಾರ ಕಾಯುತ್ತಿದ್ದರು. ನಕಲಿ ಕೀಲಿಯನ್ನು ಬಳಸಿ ಕಳ್ಳರು ಬ್ಯಾಂಕ್‌ಗೆ ಪ್ರವೇಶಿಸಿದ್ದು, ಅಲಾರಂ ಅನ್ನು ಆಫ್ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಆಫ್ ಮಾಡಿದ್ದು, ನೆಟ್‌ವರ್ಕ್ ವೀಡಿಯೊ ರೆಕಾರ್ಡರ್ (ಎನ್‌ವಿಆರ್) ಅನ್ನು ಕದ್ದೊಯ್ದಿದ್ದಾರೆ ಎಮದು ಅವರು ಹೇಳಿದ್ದಾರೆ. ಕಳ್ಳರು ಬ್ಯಾಂಕ್ ಲಾಕರ್‌ಗಳನ್ನು ಮಾತ್ರ ತೆರೆದು ಚಿನ್ನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಕಳ್ಳತನದ ನಂತರ, ಆರೋಪಿಗಳು ಕಪ್ಪು ಬಣ್ಣದ ಗೊಂಬೆಯನ್ನು ಇಟ್ಟು ಹೋಗಿದ್ದು, ಇದು ಅಪರಾಧ ಸ್ಥಳದಲ್ಲಿ ಅವರು ಯಾವುದೋ ಆಚರಣೆಯನ್ನು ಮಾಡಿದ್ದಾರೆ ಎಂದು ತೋರುತ್ತದೆ ಎಂದು ವಿಜಯಪುರ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 28 ರಂದು, ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಒಂದು ಗ್ಯಾಂಗ್ 13 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕದ್ದಿದೆ. ನಂತರ ದಾವಣಗೆರೆ ಪೊಲೀಸರು ಅಪರಾಧದಲ್ಲಿ ಭಾಗಿಯಾಗಿದ್ದ ಆರು ಜನರನ್ನು ಬಂಧಿಸಿದ್ದಾರೆ.

ಈ ವರ್ಷದ ಜನವರಿ 17 ರಂದು ಮಂಗಳೂರಿನ ಕೋಟೆಕಾರ್‌ನಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್‌ನಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನವನ್ನು ದೋಚಿದ್ದ ತಂಡವೊಂದು ದರೋಡೆ ಮಾಡಿತ್ತು. ಈ ದರೋಡೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...