ವಿಜಯಪುರ | ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಿಸಲು ಸರ್ಕಾರ ಬದ್ಧ: ಸಚಿವ ಎಂಬಿ ಪಾಟೀಲ ಭರವಸೆ

Date:

ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಮುಖ್ಯಮಂತ್ರಿಗಳು, ಸಕ್ಕರೆ ಸಚಿವರು ಸೇರಿದಂತೆ ಅನೇಕ ಸಚಿವರ ಸಮಕ್ಷಮದಲ್ಲಿ ಈ ವಿಷಯವಾಗಿ ವಿಶೇಷ ಸಭೆ ನಡೆಸಲಾಗುವುದು. ಪ್ರಧಾನ ಮಂತ್ರಿಗಳನ್ನು ಸಹ ಭೇಟಿ ಮಾಡುವ ನಿಟ್ಟಿನಲ್ಲಿಯೂ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಂಬಿ ಪಾಟೀಲ ಭರವಸೆ ನೀಡಿದರು.

ವಿಜಯಪುರ ನಗರದ ಗಗನ್ ಮಹಲ್ ಉದ್ಯಾನವನದಲ್ಲಿ ರೈತರು ಹಾಗೂ ಕಬ್ಬು ಬೆಳೆಗರಾರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

“ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡುವ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3500 ದರ ನಿಗದಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ವಿವಿಧ ರೈತಪರ, ಕನ್ನಡ ಪರ ಸಂಘಟನೆಗಳು ಜಂಟಿಯಾಗಿ ಗಗನ್ ಮಹಲ್ ಉದ್ಯಾನವನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲ ಆಲಿಸಿದ ಅವರು, ಕಳೆದ 9 ವರ್ಷಗಳಿಂದ ಸಕ್ಕರೆ ಬೆಲೆ ಪರಿಷ್ಕರಣೆ ಮಾಡದಿರುವುದು, ಎಥನಾಲ್ ಖರೀದಿಸುವಲ್ಲಿ ಕೇಂದ್ರ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ. ಈ ಎಲ್ಲಾ ನಿಯಮಾವಳಿಗಳು ಬದಲಾವಣೆಯಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ನಿಯಮಾವಳಿಗಳನ್ನು ಪರಿಷ್ಕರಣೆ ಮಾಡಬೇಕಿದೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರನ್ನು ಶೀಘ್ರದಲ್ಲಿಯೇ ಭೇಟಿ ಮಾಡಲಿದ್ದಾರೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 06 at 12.47.07 PM

“ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೇಂದ್ರ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಲಿ. ನಿಯೋಗದೊಂದಿಗೆ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿ ಈ ನಿಯಮಾವಳಿಗಳನ್ನು ಪರಿಷ್ಕರಣೆ ಮಾಡಲಿ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಒಳ್ಳೆಯದು ಮಾಡಲು ಸಮನ್ವಯ ಸಾಧಿಸಬೇಕಾಗುತ್ತದೆ. ಕಬ್ಬು ಬೆಳೆಗೆ ಬೆಲೆ ನಿಗದಿ, ಎಥಿನಾಲ್ ಕರದಿ ಪ್ರಮಾಣ ಹೆಚ್ಚಳ ಮೊದಲಾದ ಮಹತ್ವದ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಬೇಕಿದೆ, ನಾನು ಕೇಂದ್ರ ಸರ್ಕಾರಕ್ಕೆ ದೂರುತ್ತಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಸದಾ ರೈತಪರ, ಬಡವರ ಪರವೇ ಇರುವವರು. ಯಾವ ಸರ್ಕಾರವೂ ಕಬ್ಬಿಗೆ ಬೆಂಬಲ ಬೆಲೆ ನೀಡಿರಲಿಲ್ಲ. ಈ ಹಿಂದೆ ನಮ್ಮ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿದ್ದ ಶಾಸಕ ಹುಕ್ಕೇರಿಯವರು ₹350 ಬೆಂಬಲ ಬೆಲೆ ನೀಡಿದ್ದರು. ಇಡೀ ಸರ್ಕಾರವೇ ಕಬ್ಬು ಬೆಳೆಗಾರರ ಪರವಾಗಿದೆ. ಇದರಲ್ಲಿ ಎಳ್ಳಷ್ಟು ಸಂಶಯ ಬೇಡ” ಎಂದರು.

ಹೋರಾಟದ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಸಕ್ಕರೆ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ಸಹ ನಮ್ಮ ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲ. ಸಕ್ಕರೆ ಕಾಯ್ದೆ ಪ್ರಕಾರ 15 ದಿನದಲ್ಲಿ ಕಬ್ಬು ಬೆಳೆಗಾರರಿಗೆ ಬಿಲ್ ಪಾವತಿ ಆಗಬೇಕು. ಆದರೆ ಸಕ್ಕರೆ ಕಾರ್ಖಾನೆಗಳು ಈ ನಿಯಮ ಪಾಲಿಸಿಲ್ಲ. ವರ್ಷ ಕಳೆದರೂ ರೈತರಿಗೆ ಬಿಲ್ ಪಾವತಿ ಆಗಿಲ್ಲ. ಒಂದೇ ಒಂದು ಕಾರ್ಖಾನೆ 15 ದಿನದಲ್ಲಿ ಬಿಲ್ ಹಾಕಿದ್ದು ತೋರಿಸಿದರೆ ನಾನೇ ಎಲ್ಲರೂ ಹೇಳಿದಂತೆ ಕೇಳುವೆ. ಈ ಸಕ್ಕರೆ ಕಾರ್ಖಾನೆಗಳು ಸರ್ಕಾರಕ್ಕೇ ಮೋಸ ಮಾಡುತ್ತವೆ; ಇನ್ನು ರೈತರಿಗೆ ಬಿಡುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

ಪ್ರತಿ ಟನ್ ಕಬ್ಬಿಗೆ ₹3500 ದರ ನೀಡುವವರೆಗೂ ನಾವು ಧರಣಿ ಸ್ಥಳ ಬಿಟ್ಟು ಕದಲುವುದಿಲ್ಲ. ತಾವೇ ಮಧ್ಯಸ್ಥಿಕೆ ವಹಿಸಿ ಈ ದರ ಕೊಡಿ ಎಂದು ಸಚಿವರಿಗೆ ರೈತರ ಪರವಾಗಿ ಹಕ್ಕೊತ್ತಾಯ ಮಂಡಿಸಿದರು.

ಕಾರ್ಮಿಕ ಹೋರಾಟಗಾರ ಅಪ್ಪು ಸಾಹೇಬ ಯಾರನಾಳ ಮಾತನಾಡಿ, “ನಿಜವಾಗಿಯೂ ಹೊಲಗಳಲ್ಲಿ ದುಡಿಯುವವರು ಶಾಸನ ಸಭೆಗೆ ಆಯ್ಕೆಯಾಗುತ್ತಿಲ್ಲ. ಈ ಹಿಂದೆ 20 ರಿಂದ 25 ಜನರು ರೈತರಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದರು. ಆದರೆ ಇಂದು ಅವರ ಕೊರತೆ ಕಾಣುತ್ತಿದೆ. ಅನೇಕ ಹೋರಾಟಗಳ ಸಂದರ್ಭದಲ್ಲಿ ಅಧಿಕಾರಿಗಳು ರೈತರಿಗೆ ಏಕವಚನ ಪ್ರಯೋಗಿಸುತ್ತಾರೆ. ಈ ರೀತಿ ಆಗಬಾರದು. ಅಧಿಕಾರಿಗಳು ನಮ್ಮ ಸೇವಕರು. ರೈತರ ಈ ಬೇಡಿಕೆ ನ್ಯಾಯಯುತವಾಗಿದೆ. ಅನೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ರೈತರ ದುಡ್ಡಿನಲ್ಲಿಯೇ ಗೆದ್ದು ಶಾಸಕರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಮನಗೂಳಿ ಹಿರೇಮಠ ಅಭಿನವ ಸಂಗಮ ಬಸವ ಶಿವಚಾರ್ಯರು ಮಾತನಾಡಿದರು.ೀ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪ ಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಉಮೇಶ ಕಾರಜೋಳ, ಪಂಚಪ್ಪ ಕಲಬುರಗಿ, ಅರವಿಂದ ಕುಲಕರ್ಣಿ, ರಾಮನಗೌಡ ಪಾಟೀಲ, ಫಯಾಜ್ ಕಲಾದಗಿ, ರಾಹುಲ್ ಕುಬಕಡ್ಡಿ, ಸಂದೀಪ ಪಾಟೀಲ, ವಿಜಯ ಜೋಶಿ, ವಿವೇಕ ತಾವರಗೇರಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...