ವಿಜಯಪುರ | ಅಳಿವಿನಂಚಿನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ; ದುರಸ್ತಿ ಕಾರ್ಯಕ್ಕೆ ಬೇಕಿದೆ ಸಹಾಯಹಸ್ತ

Date:

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಜೀವನ ಕಟ್ಟಿಕೊಂಡಿದ್ದು, ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ, ಈಗ ಅಳಿವಿನಂಚಿನಲ್ಲಿರುವ ಈ ಶಾಲೆಗೆ ಸಹಾಯದ ಹಸ್ತ ಬೇಕಿದೆ ಮತ್ತು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

1862ರ ಡಿಸೆಂಬರ್‌ 28ರಂದು ಮಾದರಿ ಶಾಲೆಯಾಗಿ ಪರಿವರ್ತನೆಯಾಗಿರುವ ಈ ಶಾಲೆಯ ಮೂರು ಕೊಠಡಿಗಳು ಕಟ್ಟಡ ಮೇಲ್ಛಾವಣಿ ಇಲ್ಲದೆ ಅವಸಾನದಂಚಿಗೆ ತಲುಪಿವೆ.

Government Model Primary School 1

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ತುಂಬಾ ವೇಗವಾಗಿ ಬೆಳೆಯುತ್ತಿದೆ. ಗ್ರಾಮದ ಹೊರವಲಯದಲ್ಲಿದ್ದ ಈ ಶಾಲೆ ಈಗ ಪಟ್ಟಣದ ಮದ್ಯಭಾಗವಾಗಿದೆ. ಇಲ್ಲಿ ಸೌಲಭ್ಯಗಳಿಗೇನೂ ಬರವಿಲ್ಲ. ಸದ್ಯ ಒಂದರಿಂದ ಏಳನೇ ತರಗತಿವರೆಗೆ ಒಟ್ಟು 134 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 6 ಮಂದಿ ಶಿಕ್ಷಕರು ಒಬ್ಬರು ಅತಿಥಿ ಶಿಕ್ಷಕರಿದ್ದಾರೆ. 15 ಕೊಠಡಿಗಳಿವೆ. 8 ಕೊಠಡಿಗಳಲ್ಲಿ ತರಗತಿಗಳು ನಡೆಯುತ್ತಿದ್ದರೆ ಉಳಿದ 3ರಲ್ಲಿ ತಾಪಂ ಕಚೇರಿ, ಒಂದು ಗ್ರಂಥಾಲಯ, ಒಂದು ತಾಲೂಕು ಆಡಳಿತ ಕಚೇರಿಗೆ ಕೊಠಡಿಗಳು ಬಳಕೆಯಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Government Model Primary School 2

ಸಾವಿರ ಕಥೆಗಳಿವೆ: ಕಮಿಷನ್ ನಗರಾಡಳಿತ, ಮೈಸೂರು ಮಹಾರಾಜರ ಆಡಳಿತ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯೋತ್ತರ ಘಟನೆಗಳಿಗೆ ಸಾಕ್ಷಿಯಾಗುತ್ತ ತನ್ನ ಮಡಿಲಲ್ಲಿ ಮಕ್ಕಳನ್ನು ಕೂರಿಸಿಕೊಂಡು ಅಕ್ಷರ ಸೇವೆ ನಡೆಸುತ್ತ ಬಂದಿದ್ದ ಈ ಶಾಲೆಯ ಕುರಿತು ಸಾವಿರ ಕಥೆಗಳಿವೆ. ಶಿಸ್ತು, ಕರ್ತವ್ಯ ನಿಷ್ಠೆ, ಶಿಕ್ಷಣ ಪ್ರೇಮ, ಮಾನವೀಯ ಮೌಲ್ಯಗಳಿಗೆ ಹೆಸರಾದ ಅತ್ಯುತ್ತಮ ಶಿಕ್ಷಕರು ಇಲ್ಲಿ ಚಿರಸ್ಥಾಯಿಯಾಗಿದ್ದಾರೆ. ಐದಾರು ತಲೆಮಾರುಗಳಿಗೆ ಪಾಠ ಕಲಿಸಿದ್ದ ಕೀರ್ತಿ ಈ ಶಾಲೆಯ ಕಟ್ಟಡದ್ದಾಗಿದೆ.

Government Model Primary School 3

“ಮೊದಲೆಲ್ಲ ಶಾಲೆಯನ್ನು ಉಳಿಸಿಕೊಳ್ಳಲು ಪಟ್ಟಣದ ಹಿರಿಯರು ಸಾಕಷ್ಟು ಶ್ರಮವಹಿಸಿದ್ದಾರೆ. ಪಟ್ಟಣವಲ್ಲದೆ ಸುತ್ತಮುತ್ತಲಿನ ಗ್ರಾಮದವರೂ ಕೂಡಾ ಇಲ್ಲಿಗೆ ವಿದ್ಯೆ ಹರಿಸಿ ಬರುತ್ತಿದ್ದರು. ಈ ಶಾಲೆಯ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದಲ್ಲದೆ ಪಟ್ಟಣದಲ್ಲಿ ಐಕ್ಯತೆ ಮೂಡಿಸಿದೆ” ಎನ್ನುತ್ತಾರೆ ಪಟ್ಟಣದ ಮುಖ್ಯಸ್ಥರು.

Government Model Primary School 4

ಋಣ ಸಂದಾಯವಾಗಬೇಕಿದೆ: ಗ್ರಾಮವನ್ನು ಸುಶಿಕ್ಷಿತ ಪಟ್ಟಣವಾಗಿಸುವಲ್ಲಿ ಮೌನ ಶಿಕ್ಷಣ ಸೇವೆ ನಡೆಸಿಕೊಂಡು ಬಂದಿರುವ ಶಾಲೆಯನ್ನು ಉಳಿಸಿ ಬೆಳೆಸಬೇಕಿದೆ. ಹಳೆಯ ವಿದ್ಯಾರ್ಥಿ ಸಂಘ ಈ ಕಟ್ಟಡದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ಎಂಪಿಎಸ್ ಶಾಲೆಯಲ್ಲಿ ಕಲಿತ ಒಂದಿಷ್ಟು ಹಳೆಯ ವಿದ್ಯಾರ್ಥಿಗಳು ಶಾಲಾ ಕಟ್ಟಡವನ್ನು ಉಳಿಸಿಕೊಳ್ಳುವ ಸಲುವಾಗಿ ಸಂಘ ರಚಿಸಲು ಮುಂದಾಗಿದ್ದಾರೆ. ಈ ಕುರಿತು ಈಗಾಗಲೇ ಎರಡು ಮೂರು ಸಾರಿ ಸಭೆ ಸೇರಿ ಚರ್ಚಿಸಿದ್ದಾರೆ. ಅಂದಿನ ಮುಖ್ಯ ಗುರುಗಳ ಶಿಕ್ಷಕರ ಕೊಠಡಿ, ಅದರ ಅಕ್ಕಪಕ್ಕದ ಇನ್ನೆರಡು ಕೊಠಡಿಗಳನ್ನು ಜೀವನೋದ್ಧಾರ ಮಾಡಲು ರೂಪರೇಷೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಾರ್ಜನಿಕರಿಗೆ ಲಭ್ಯವಾಗದ ಇ-ಶೌಚಾಲಯ, ಕ್ಯಾಬಿನ್ ಶೌಚಾಲಯ; ಸ್ಥಳೀಯರ ಆಕ್ರೋಶ

ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಥೋಡ ಮಾತನಾಡಿ, “ಇದು ನಮ್ಮ ಗಮನಕ್ಕೂ ಇದೆ. ಸಚಿವರಿಗೆ ಇದರ ಬಗ್ಗೆ ಮಾಹಿತಿ ನೀಡಿದ್ದೇವೆ. ನೆರವಿನ ಅಗತ್ಯವಿದೆ ಎಂದು ಮನವಿ ಸಲ್ಲಿಸಿದ್ದೇವೆ. ಸಚಿವರು ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ” ಎಂದರು.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...