ವಿಜಯಪುರ | ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳಿಂದ ಹಣ ಸಹಾಯಕ್ಕೆ ಸರ್ಕಾರ ಆದೇಶ; ಎಐಡಿಎಸ್‌ಒ ಖಂಡನೆ

Date:

ಸರ್ಕಾರಿ ಶಾಲೆಗಳ ನಿರ್ವಹಣೆಗೆ ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಹಣ ಸಹಾಯವನ್ನು ಪಡೆಯಲು ಸರ್ಕಾರ ಆದೇಶ ನೀಡಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶದ ಕುರಿತು ಪತ್ರಿಕೆ ಹೇಳಿಕೆ ನೀಡಿದ್ದು, “ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ಸ್ಥಾಪಿಸಿ, ಶಾಲೆಯ ಪೀಠೋಪಕರಣ, ಶೌಚಾಲಯ ನಿರ್ಮಾಣ, ಪ್ರಯೋಗಾಲಯಗಳ ಅಭಿವೃದ್ಧಿ, ಗ್ರಂಥಾಲಯ ನಿರ್ಮಾಣ ಸೇರಿದಂತೆ ಶಾಲೆಗಳ ಮೂಲ ಸೌಕರ್ಯಗಳನ್ನು ನಿರ್ಮಿಸಲು ಹಾಗೂ ನಿರ್ವಹಿಸಲು ಹಳೆಯ ವಿದ್ಯಾರ್ಥಿಗಳ ಮೂಲಕ ದೇಣಿಗೆ ಪಡೆಯಲು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶವು, ಸರ್ಕಾರಿ ಶಾಲೆಗಳ ನಿರ್ವಹಣೆಯಿಂದ ಸಂಪೂರ್ಣವಾಗಿ ನುಣುಚಿಕೊಳ್ಳುವ ಯತ್ನವಾಗಿದೆ” ಎಂದು ಹೇಳಿದರು.

“ತೀವ್ರ ಸೌಕರ್ಯಗಳ ಕೊರತೆಯಿಂದ ಈಗಾಗಲೇ ನಲುಗುತ್ತಿರುವ ರಾಜ್ಯದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಬೇಕಿತ್ತು. ಆದರೆ, ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಈ ನಿರ್ವಹಣೆಯ ಜವಾಬ್ದಾರಿಯನ್ನು ವರ್ಗಾಯಿಸಲು ಸರ್ಕಾರ ನಿರ್ಧರಿಸಿರುವುದು ಅತ್ಯಂತ ಖಂಡನೀಯ. ಹೀಗಾದಲ್ಲಿ, ಶಾಲೆಗಳಲ್ಲಿನ ಮೂಲ ಸೌಕರ್ಯಗಳ ಕೊರತೆಗೆ, ಸರ್ಕಾರದ ಹೊಣೆಗಾರಿಕೆ ಇರುವುದಿಲ್ಲ. ಜೊತೆಗೆ, ಶಾಲಾ ಮಕ್ಕಳಿಗೆ ರಾಗಿಗಂಜಿ ನೀಡಲು, ಕಾರ್ಪೊರೇಟ್ ಕಂಪನಿಗಳ ದೇಣಿಗೆ (ಸಿಎಸ್‌ಆರ್‌) ಹಣವನ್ನು ಬಳಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ. ಅಲ್ಲಿಗೆ, ಸಂಪೂರ್ಣವಾಗಿ ಸರ್ಕಾರಿ ಶಾಲೆಗಳ ನಿರ್ವಹಣೆಯ ನೈತಿಕ ಜವಾಬ್ದಾರಿಯಿಂದ ಸರ್ಕಾರ ಕೈ ತೆಗೆಯುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕಾಂಗ್ರೆಸ್‌ ಕಚೇರಿಗೆ ನುಗ್ಗಿ ಬಿಜೆಪಿಗರ ದಾಂಧಲೆ

“ಕ್ರಮೇಣವಾಗಿ ಬಜೆಟ್‌ನಲ್ಲಿ ಹಣ ಬಿಡುಗಡೆ ಕಡಿತಗೊಳಿಸಿ, ಇದೀಗ ಅವಶ್ಯವಿರುವ ಮೊತ್ತವನ್ನು ಇತರೆ ಮೂಲಗಳಿಂದ ಪಡೆಯಲು ಆದೇಶ ನೀಡುತ್ತಿರುವುದು ಸರ್ಕಾರದ ಧೋರಣೆಯನ್ನು ತೋರುತ್ತಿದೆ. ಅದರಲ್ಲೂ ರಾಜ್ಯ ಬಜೆಟ್ ಸಮೀಪಿಸುತ್ತಿರುವ ಸಂದರ್ಭದಲ್ಲಿ ಇಂತಹ ಆದೇಶಗಳು, ಬಜೆಟ್‌ನಲ್ಲಿ ಏನನ್ನು ಅಪೇಕ್ಷೆ ಮಾಡಬಾರದು ಎಂಬುದನ್ನು ತೋರಿಸುತ್ತಿದೆ. ಹಳೆಯ ವಿದ್ಯಾರ್ಥಿ ಸಂಘಗಳು ಯಾವುದೇ ದೇಣಿಗೆಯನ್ನು ಸ್ವಯಂ ಪ್ರೇರಣೆಯಿಂದ ನೀಡಿದಲ್ಲಿ, ಅವುಗಳ ಶಾಲೆಗಳ ಮತ್ತಷ್ಟು ಅಭಿವೃದ್ಧಿಗೆ ಬಳಕೆಯಾಗಬೇಕೇ ಹೊರತು, ಆ ಹಣವನ್ನೇ ಶಾಲೆಯ ನಿರ್ವಹಣಾ ವೆಚ್ಚದ ಮೂಲವನ್ನಾಗಿ ಪರಿಗಣಿಸುವ ವಿದ್ಯಾರ್ಥಿ ವಿರೋಧಿ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...