ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

Date:

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಿರುವಂತೆ ಮುಂಬರುವ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೊಳಿಸುವ ಅಗತ್ಯವಿದ್ದು, ಹಂತ ಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ ಜೆ ಸಾಗರ ಬಣ) ಸಹ ಸಂಚಾಲಕ ವೈ ಸಿ ಮಯೂರ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪರಿಶಿಷ್ಟ ಸಮುದಾಯಗಳ ಮೂರು ದಶಕಗಳ ಬೇಡಿಕೆ ಹಾಗೂ ಹೋರಾಟ ಕೊನೆಗೂ ಗೆಲುವು ಕಂಡಿದೆ. ಒಳ ಮೀಸಲಾತಿ ಹಂಚಿಕೆಯ ಐತಿಹಾಸಿಕ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವುದು ಸ್ವಾಗತಿಸುತ್ತೇವೆ” ಎಂದ ಅವರು, “ಪರಿಶಿಷ್ಟ ಜಾತಿಗಳನ್ನು ಮೂರು ವರ್ಗೀಕರಣ ಮಾಡಿ ಶೇ 17 ರಷ್ಟು ಮೀಸಲು ಪ್ರಮಾಣವನ್ನು ಬಲಗೈ ಹೊಲಯ/ ಛಲವಾದಿಗಳಿಗೆ ಶೇ. 6 ಹಾಗೂ ಎಡಗೈ ಮಾದಿಗ ಜನಾಂಗಕ್ಕೆಶೇ 6 ರಷ್ಟು ಹಾಗೂ ಸ್ಪೃಷ್ಯ ಜಾತಿಗಳಿಗೆ ಶೇ 5 ರಷ್ಟು ಒಳ ಮೀಸಲಾತಿಯನ್ನು ಹಂಚಿಕೆ ಮಾಡಿರುವುದು ಅತ್ಯಂತ ವೈಜ್ಞಾನಿಕ ನಿರ್ಧಾರ” ಎಂದರು.

“ಒಳ ಮೀಸಲಾತಿ ಹಂಚಿಕೆಯಿಂದ ಯಾವ ಸಮುದಾಯಗಳಿಗೂ ನೋವಾಗಿಲ್ಲ. ಎಲ್ಲಾ ಜಾತಿಗಳಿಗೂ ಪ್ರಧಾನ್ನತೆ ನೀಡಲಾಗಿದೆ. ಜೆಟಿಲವಾಗಿದ್ದ ಸಮಸ್ಯೆಗೆ ಪರಿಹಾರ ಲಭಿಸಿದೆ. ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬಂದಿದ್ದು, ರಾಜ್ಯ ಸರ್ಕಾರ ಸರಿಪಡಿಸುವುದಾಗಿ ಈಗಾಗಲೇ ಭರವಸೆ ನೀಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ‘ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ನಡೆ ಸ್ವಾಗತಾರ್ಹ’

ಈ ವೇಳೆ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, ಮುಖಂಡರಾದ ಶರಣು ಛಲವಾದಿ, ರಮೇಶ್ ದಾರಣಾಕಾರ, ವಿಜಯಕುಮಾರ ಕಾಂಬಳೆ, ರಮೇಶ್ ನಿಂಬಾಳ್ಕರ, ಮಹಾಂತೇಶ ಸಾಹಸಬಾಳ, ಸದಾಶಿವ ಜಿಗದೋಳ ಹಾಗೂ ಪರಮೇಶ್ವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...