ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ

Date:

ಚಿತ್ರಕಲಾ ಶಿಕ್ಷಕರ ಹುದ್ದೆ ಭರ್ತಿ ಮಾಡುವಲ್ಲಿ ಸರ್ಕಾರ ತಾತ್ಸಾರ ಮನೋಭಾವನೆ ಅನುಸರಿಸುತ್ತಿದೆ ಎಂದು ಖ್ಯಾತ ಚಿತ್ರಕಲಾವಿದ ಪೊನ್ನಪ್ಪ ಕಡೇಮನಿ ಹೇಳಿದರು.

ವಿಜಯಪುರದ ವರ್ಣಮಹಲ್ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಿತ್ರಕಲಾ ಪ್ರದರ್ಶನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಮಕ್ಕಳಿಗೆ ಚಿತ್ರಕಲೆ ಬೋಧನೆ ಅಗತ್ಯವಾಗಿದೆ. ಚಿತ್ರಕಲೆ ಎಂಬುದು ಒಂದು ಅದ್ಭುತ ಕಲೆ. ಮಕ್ಕಳ ಮನಸ್ಸು ಅರಳಿಸುವ ಕಲೆ, ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಚಿತ್ರಕಲೆ ಬೋಧಿಸುವ ಶಿಕ್ಷಕರ ಕೊರತೆ ಇದೆ. ಕೂಡಲೇ ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಶೇಷ ಆಸಕ್ತಿ ವಹಿಸಬೇಕು” ಎಂದು ಕರೆ ನೀಡಿದ ಅವರು, ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರ ಇನ್ನು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಸಂಘ-ಸಂಸ್ಥೆಗಳು ಕಲಾವಿದರನ್ನು ಪೋಷಿಸುವ ಕಾರ್ಯಕ್ಕೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜ ಸೇವಕ ಸುಭಾಷ ಕೆಂಭಾವಿ ಮಾತನಾಡಿ, “ಕಲಾ ಪ್ರದರ್ಶನಗಳಲ್ಲಿ ಕಲಾವಿದರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕಾದರೆ ಹೆಚ್ಚು ಹೆಚ್ಚು ಪ್ರಚಾರದ ಅಗತ್ಯತೆ ಇದೆ. ಕಲಾ ಪ್ರದರ್ಶನ ಏರ್ಪಡಿಸುವುದರಿಂದ ಅನೇಕ ಕಲಾವಿದರು ತಮ್ಮ ಕಲಾ ವಿದ್ವತ್ತು ಪ್ರದರ್ಶಿಸುವುದು ದೊರಕುತ್ತದೆ” ಎಂದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕಾರ್ಯಕ್ರಮದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ಮೋಹನ್ ನಾಯಕ್, ವರ್ಣಮಹಲ್ ಸಂಸ್ಥೆಯ ಅಧ್ಯಕ್ಷ ವಿಜಯ್ ನಾಯಕ, ಮಹದೇವಪ್ಪ ಮೋಪಗಾರ ಸೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...