ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

Date:

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ್. ಚ. ಪಾಟೀಲ್ ಸರ್ಕಾರವನ್ನು ಎಚ್ಚರಿಸಿದರು.

ವಿಜಯಪುರದಲ್ಲಿ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಇಂದು ರಾಜ್ಯ ವ್ಯಾಪ್ತಿಯಲ್ಲಿ ಗ್ರಾ. ಪಂ ಸದಸ್ಯರು ಗ್ರಾಮೀಣ ಪ್ರಾಂತ್ಯಗಳ ಸಮಸ್ಯೆಗಳು ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅಧಿಕಾರಿಗಳನ್ನು ಜೊತೆಗೂಡಿಸಿಕೊಂಡು ಶ್ರಮಿಸುತ್ತಿರುವದಾಗಿ ತಿಳಿಸಿದರು.

ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳ ಜೊತೆಗೆ ಹಳ್ಳಿಗಳಲ್ಲಿ ಕೆಲಸ ಮಾಡುತ್ತಿದ್ದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ಇವರನ್ನು ಕಡಿಗಣಿಸುವುದು ಮತ್ತು ಗ್ರಾಮ ಪಂಚಾಯಿತಿಯ ಸಾಮಾನ್ಯ  ಸಭೆಗಳಲ್ಲಿ  ಸದಸ್ಯರನ್ನು ನಿರ್ಲಕ್ಷಿಸಿರುವುದಲ್ಲದೆ ಸಾಮಾನ್ಯ ಸಭೆಗೆ ಗೈರಿ ಹಾಜರು ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ಸಂದರ್ಭದಲ್ಲಿ ಪಂಚಾಯಿತಿಯ ಮುಂದೆ ಧರಣಿ ಕೂತಿರುವ ಸದಸ್ಯರಿಗೆ ಸುಳ್ಳು ಭರವಸೆ ನೀಡುವುದರ ಮುಖಾಂತರ ಸಮಾಧಾನಪಡಿಸಿರುತ್ತಾರೆ ಹೊರತು ನ್ಯಾಯ ಕೊಡಿಸಿರುವುದಿಲ್ಲ ಎಂದು ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲಾ, ಶಿಡ್ಲಘಟ್ಟ ತಾಲೂಕ, ಜೆ. ವೆಂಕಟಪುರ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಶಶಿಕಲಾ ಅಂಬರೀಶ್ ಅಧಿಕಾರಿಗಳು ವರ್ತಿಸಿದ ವಿಧಾನ ಸರಿಯಲ್ಲ ಎಂದರು.

ಅಲ್ಲಿನ ಪಿಡಿಒ, ಅವರ ಪ್ರಶ್ನೆಗಳಿಗೆ ಸಾಮಾನ್ಯ ಸಭೆಯಲ್ಲಿ ಸರಿಯಾದ ಸಮಾಧಾನ ನೀಡದೆ, ನಿರ್ಲಕ್ಷ್ಯವಾಗಿ ಮತ್ತು ಚಿಟಿಕೆ ಹೊಡೆಯುವುದರ ಮುಖಾಂತರ ಗುಂಡಾವರ್ತನೆ ತೋರಿರುವುದು ಖಂಡನಿಯ ಎಂದರು. ಈಗಾಗಲೇ ಈ ವಿಷಯಕ್ಕೆ ಸಂಬಂಧಪಟ್ಟ  ತಮ್ಮ ಒಕ್ಕೂಟ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರವು ಕೂಡಲೇ ಈ ವಿಷಯದ ಮೇಲೆ ಗಮನಹರಿಸಿ, ಸಂಬಂಧಿತ ಪಿಡಿಒ ಅವರನ್ನು ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಹಿಸಿ, ಸದಸ್ಯರಿಗೆ ನ್ಯಾಯ ಕೊಡಿಸದಿದ್ದರೆ ರಾಜ್ಯಾದ್ಯಂತ ತಮ್ಮ ಒಕ್ಕೂಟ ನೇತೃತ್ವದಲ್ಲಿ ಉಗ್ರಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರ ನೀಡಿದರು.

ಸಮಾಜದಲ್ಲಿ ಗೌರವಕ್ಕಾಗಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಸದಸ್ಯರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ರೀತಿ ನಿರ್ಲಕ್ಷ ಭಾವದಿಂದ ನೋಡಿದರೆ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕೆಟ್ಟು ಹೆಸರು ಬರುವ ಅವಕಾಶ ಇರುವುದರಿಂದ ಮಾನ್ಯ ಪಂಚಾಯತ್ ರಾಜ್ ಸಚಿವರು ಹಾಗೂ ಸಂಬಂಧಿತ ಇಲಾಖೆ  ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರ ಹಕ್ಕುಗಳ ರಕ್ಷಣಾ ಮತ್ತು ಉತ್ತಮ ಆಡಳಿತಕ್ಕಾಗಿ ಕ್ರಮವಹಿಸಲು ಈ ಮೂಲಕ ಪ್ರದೀಪ್. ಚ. ಪಾಟೀಲ್ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...