ವಿಜಯಪುರ | ಶೆಡ್​ ತೆರವುಗೊಳಿಸದಂತೆ ಅಧಿಕಾರಿಯ ಕಾಲು ಹಿಡಿದು ಗೋಳಾಡಿದ ವಿಶೇಷ ಚೇತನ

Date:

  • ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದ ಘಟನೆ
  • ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿದ ಅಧಿಕಾರಿಗಳು

ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಮುಂದಾದ ವೇಳೆ ವಿಶೇಷ ಚೇತನ ವ್ಯಕ್ತಿಯೊಬ್ಬರು ಅಧಿಕಾರಿಯ ಕಾಲು ಹಿಡಿದು ಗೋಳಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕಾಲು ಹಿಡಿದು ಕಣ್ಣೀರಿಡುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಕೊಲ್ಹಾರ ಪಟ್ಟಣದಲ್ಲಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿ, ಅನಧಿಕೃತ ಶೆಡ್‌ ನಿರ್ಮಾಣ ಮಾಡಿದ್ದನ್ನು ಕೊಲ್ಹಾರ ಪಟ್ಟಣ ಪಂಚಾಯತ ಅಧಿಕಾರಿಗಳು ತೆರವು ಮಾಡಲು ಮುಂದಾಗಿದ್ದರು. ಈ ವೇಳೆ ಶೆಡ್‌ನಲ್ಲಿದ್ದ ಜನರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆಯೇ ಪ.ಪಂ.ಮುಖ್ಯಾಧಿಕಾರಿ ವೀರೇಶ್ ಹಟ್ಟಿ ಅವರ ಕಾಲಿಗೆ ಬಿದ್ದ ವಿಶೇಷ ಚೇತನ ವ್ಯಕ್ತಿಯೊಬ್ಬರು, ‘ಶೆಡ್ ತೆರವು ಮಾಡಿದರೆ ನಾವು ಎಲ್ಲಿಗೆ ಹೋಗೋದು. ದಯವಿಟ್ಟು ಶೆಡ್​ಗಳನ್ನ ತೆರವು ಮಾಡಬೇಡಿ’ ಎಂದು ಕಣ್ಣೀರಿಟ್ಟರು.

ಆ ಬಳಿಕ ಶೆಡ್‌ನಲ್ಲಿರುವವರೊಂದಿಗೆ ಮಾತುಕತೆ ನಡೆಸಿದ ಅಧಿಕಾರಿಗಳು, ಒತ್ತುವರಿ ಮಾಡಿಕೊಂಡ ಜಾಗ ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿ, ಸಮಯಾವಕಾಶ ನೀಡಿದ್ದಾರೆ.

ಕೊಲ್ಹಾರ ಪಟ್ಟಣ ಪಂಚಾಯತಿಯ ವಾರ್ಡ್ ನಂಬರ್ 13, 14 ರ ಈದ್ಗಾ ಮೈದಾನದ ಹತ್ತಿರವಿರುವ ಜಮೀನು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದರು. ವಿಶೇಷ ಚೇತನ ವ್ಯಕ್ತಿಯ ಗೋಳಾಟದ ಬಳಿಕ ಸ್ವಯಂ ತೆರವು ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದರು ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...