ವಿಜಯಪುರ | ಭಾರೀ ಮಳೆ; ಅವಧಿಗೂ ಮುನ್ನವೇ ಅರ್ಧ ಭರ್ತಿಯಾದ ಆಲಮಟ್ಟಿ

Date:

ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್‌ನಿಂದ ಶುರುವಾದ ಒಳಹರಿವು ಈಗ 12,134 ಕ್ಯೂಸೆಕ್‌ಗೆ ಬಂದು ತಲುಪಿದೆ.

ಮುಂಗಾರು ಪೂರ್ವ ಮಳೆಯಿಂದ ಮೇ 24ರವರೆಗೆ ಡ್ಯಾಮ್‌ಗೆ ಸಾಧಾರಣ ಒಳಹರಿವು ಇತ್ತು. 25ರಿಂದ 29ರವರೆಗೆ 35 ಸಾವಿರದಿಂದ 60 ಸಾವಿರ ಕ್ಯೂಸೆಕ್‌ ಒಳಹರಿವು ಶುರುವಾಗಿದ್ದರಿಂದ ಮುಂಜಾಗೃತಾ ಕ್ರಮವಾಗಿ ಮೇ 29ರಂದು ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿಬಿಡುವ ಮೂಲಕ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಹೊರಹರಿವು ಆರಂಭಿಸಲಾಯಿತು. ಒಳಹರಿವಿನ ಪ್ರಮಾಣ ನಂತರ ದಿನಗಳಲ್ಲಿ ಇಳಿಮುಖವಾಗಿದ್ದರಿಂದ ಹೊರಹರಿವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾದ್ದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಬೆಳಿಗ್ಗೆಯಿಂದ ಮತ್ತೆ ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ ನೀರು ಹರಿ ಬಿಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭಾರೀ ಮಳೆಗೆ ಗೋಡೆ ಕುಸಿತ; ವೃದ್ಧೆ ಸಾವು, ನಾಲ್ವರಿಗೆ ಗಾಯ

ಜೂನ್ ತಿಂಗಳ ಎರಡನೇ ವಾರದಲ್ಲಿ ಆಲಮಟ್ಟಿ ಜಲಾಶಯ ಅರ್ಧದಷ್ಟು ಭರ್ತಿಯಾಗಿರುವುದು ದಾಖಲೆಯಾಗಿದೆ. ಕಳೆದ ಐದಾರು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿರುವುದರ ಜತೆಗೆ ಜಲಾಶಯ ಅರ್ಧ ಭರ್ತಿಯಾಗಿದ್ದರಿಂದ ವಿಜಯಪುರ, ಬಾಗಲಕೋಟೆ, ರಾಯಚೂರ, ಯಾದಗಿರಿ, ಕಲಬುರಗಿ ಜಿಲ್ಲೆಯ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಸಂತಸಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...