ವಿಜಯಪುರ | ‌ಭಾರೀ ಮಳೆಯಿಂದ ಸೋಗಲಿ ಹಳ್ಳದಲ್ಲಿ ಪ್ರವಾಹ; ಹಲವು ಅಂತರ ಜಿಲ್ಲಾ ಮಾರ್ಗಗಳು ಬಂದ್

Date:

ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಮೂಕಿಹಾಳ ಬಳಿಯ ಸೋಗಲಿ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆಲಮಟ್ಟದ ಸೇತುವೆ ಮೇಲೆ ನೀರು ಹೆಚ್ಚಾಗಿ, ಕೆಲ ಗ್ರಾಮ, ಪಟ್ಟಣಗಳು ಸೇರಿ ಅಂತರ ಜಿಲ್ಲಾ ಮಾರ್ಗಗಳ ಸಂಪರ್ಕ ಕಡಿತವಾಗಿದೆ. ಮುದ್ದೇಬಿಹಾಳ, ಬಸವನಬಾಗೇವಾಡಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ, ಮಂಗಳೂರು ಬೆಂಗಳೂರು ರಸ್ತೆ ಸಂಪರ್ಕವು ಕಡಿತವಾಗಿದೆ. ಹುಣಸಗಿ, ಸುರಪುರ, ಕಲಬುರ್ಗಿ, ಲಿಂಗಸೂರು ರಾಯಚೂರು, ಬೀದರ್ ಮಾರ್ಗಗಳು ಬಂದ್ ಆಗಿವೆ.

ತಾಳಿಕೋಟೆಯಲ್ಲಿ ನಡೆಯುತ್ತಿರುವ ಇಸ್ತಮಾ ಕಾರ್ಯಕ್ರಮಕ್ಕೆಂದು ವಿವಿಧ ಭಾಗಗಳಿಂದ ಬಂದಿದ್ದ ಐವತ್ತಕ್ಕೂ ಅಧಿಕ ವಾಹನಗಳು ಮುಖ್ಯಹಾಳ ದರ್ಗಾದಲ್ಲಿ ಬೀಡು ಬಿಟ್ಟಿವೆ. ಪಟ್ಟಣದಿಂದ ವಿಜಯಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿನ ಸೇತುವೆ ಮೇಲು ದೋಣಿ ನದಿ ನೀರು ಮತ್ತಷ್ಟು ಆವರಿಸಿದ್ದರಿಂದ ಶನಿವಾರವು ಅಣಗಿನಾಳ ಮುಖ್ಯಹಾಳ ಮೆಣಜಿಗೆ ಮಾರ್ಗದಿಂದ ವಾಹನಗಳು ಸಂಚರಿಸಿವೆ.

ದೋಣಿ ನದಿ ದಡದ ಜಮೀನುಗಳಿಗೆ ನೀರು ನುಗ್ಗಿದ್ದು, ಬೆಳೆನಾಶದ ಭೀತಿ ಎದುರಾಗಿದೆ. ಗುತ್ತಿಹಾಳ ಬೋಳವಾಡ ತುಂಬಗಿ ಶಾಸನೂರ ಮೊದಲಾದ ಗ್ರಾಮಗಳ ಸುಮಾರು ರೂ.200ಕ್ಕೂ ಅಧಿಕ ಆಕ್ಟರ್ ಪ್ರದೇಶದ ಜಮೀನು ಜಲಾವೃತವಾಗಿದೆ. ಹತ್ತಿ ತೊಗರಿ ಸೂರ್ಯಕಾಂತಿ ಬೆಳೆಗಳು ನೀರಿನಲ್ಲಿ ಮುಳುಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ʼಸಾಮಾಜಿಕ ಜಾಲತಾಣದ ಪ್ರಭಾವದಲ್ಲಿ ಯುವಜನತೆ ಪತ್ರಕರ್ತರಾಗುತ್ತಿದ್ದಾರೆʼ

ದೋನಿ ನದಿ ಪ್ರವಾಹ ಪೀಡಿತ ಜಮೀನುಗಳಿಗೆ ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿಯೂ ಆದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್ ಮತ್ತು ತಾಳಿಕೋಟೆ ತಸಿಲ್ದಾರ ವಿನಯ ಹೂಗಾರ್ ಭೇಟಿ ನೀಡಿ ಪರಿಶೀಲಿಸಿದರು.

ತಾಳಿಕೋಟೆಯ ವಿಜಯಪುರ ರಸ್ತೆಯಲ್ಲಿ 110ಕೆ ಹೆಚ್ ಬಿ ಸಾವಿರದ ಬಳಿಯ ಜಮೀನಿನಲ್ಲಿ ವಾಸವಿರುವ ಚಂದ್ರಮ ಹಲಗಲ್ ಅವರ ಮನೆ ಸುತ್ತ ನೀರು ಆವರಿಸಿದೆ. ವಿಷ ಜಂತುಗಳು ಮನೆಯೊಳಗೆ ಬರುತ್ತಿದ್ದು ಎಲ್ಲಾ ಸಾಮಗ್ರಿಗಳು ಹಾಳಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...