ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

Date:

ಗುಮ್ಮಟ ನಗರಿ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಡೀ ಜಿಲ್ಲೆ ನಲುಗಿಹೋಗಿದೆ. ಜನ-ಜೀವನ ಅಸ್ತವ್ಯಸ್ತವಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳು ಜಾಲಾವೃತವಾಗಿವೆ. ಹಳ್ಳಗಳು ತುಂಬಿ ಹರಿಯುತ್ತಿವೆ. ಜಮೀನಿನಲ್ಲೂ ನೀರು ತುಂಬಿದ್ದು, ಬೆಳೆ ನಷ್ಟವೂ ಸಂಭವಿಸಿದೆ.

ಜಿಲ್ಲೆಯಲ್ಲಿ ಸುಮಾರು ಐದು ಗಂಟೆಗಳ ಕಾಲ ನಿರಂತರವಾಗಿ ಮಳೆಯಾಗಿದೆ. ವಿಜಯಪುರ ನಗರದ ಶಾಲಿ ನಗರ, ಭಾಗವಾನ್ ಕಾಲೊನಿ, ರಹೀಂ ನಗರ, ಮುಜಾವರ್ ಪ್ಲಾಟ್, ಪ್ರೈಂ ನಗರ, ಕನ್ನಾನ್ ನಗರ, ನೆಹರೂ ನಗರ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿಕೋಟಾ ತಾಲೂಕಿನಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಾಲಯ ಬಳಿಯ ಹಳ್ಳ ಮೈದುಂಬಿ ಹರಿಯುತ್ತಿದ್ದು, ದೇವಾಲಯವೂ ಜಾಲಾವೃತಗೊಂಡಿದೆ. ಅಲ್ಲದೆ, ಹಳ್ಳಕ್ಕೆ ಕಟ್ಟಲಾಗಿರುವ ಸೇತುವೆಯೂ ಮುಳುಗಿದ್ದು, ವಿಜಯಪುರ ಮತ್ತು ಜಾಲಗೇರಿ, ಹುಬನೂರ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಇದೀಗ, ನೀರು ಹರಿಯುವಿಕೆ ಇಳಿಕೆಯಾಗಿದ್ದು, ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

ಜಿಲ್ಲೆಯ ಪ್ರಮುಖ ನದಿಗಳಲ್ಲಿ ಒಂದಾದ ಡೋಣಿ ನದಿಯು ಉಕ್ಕು ಹರಿಯುತ್ತಿದೆ. ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದ್ದು, ಬೆಳೆ ಹಾನಿ ಎದುರಾಗಿದೆ. ಜೊತೆಗೆ, ಗ್ರಾಮಸ್ಥರಲ್ಲಿ ಪ್ರವಾಹ ಭೀತಿಯೂ ಉಂಟಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...