ವಿಜಯಪುರ | ನನ್ನ ಸೋಲಿಗೆ ಪಕ್ಷದ ಯಾರನ್ನೂ ಹೊಣೆ ಮಾಡಲು ಇಚ್ಛಿಸುವುದಿಲ್ಲ: ರಾಜು ಆಲಗೂರು

Date:

ಆಲಗೂರ ದಲಿತ ಸಂಘಟನೆಗಳಿಂದ ಬಂದವನು. ಅಯ್ಕೆಯಾಗಿ ಬಂದರೆ ಲಿಂಗಾಯತರು ಸೇರಿದಂತೆ ಮೇಲ್ವರ್ಗದವರಿಗೆ ತೊಂದರೆ ನೀಡುತ್ತಾನೆ ಎಂಬ ಸಂಸದ ರಮೇಶ ಜಿಗಜಿಣಗಿ ಅವರ ಸುಳ್ಳು ಆರೋಪವು ಲೋಕಸಭೆ ಚುನಾವಣೆಯಲ್ಲಿ ನಾನು ಸೋಲಲು ಮುಖ್ಯ ಕಾರಣಗಳಲ್ಲಿ ಒಂದಾಗಿದೆ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ಅಭ್ಯರ್ಥಿಯಾಗಿದ್ದ ಸಂಸದ ರಮೇಶ ಜಿಗಜಿಣಗಿ ಅವರು ಚುನಾವಣೆ ಸಂದರ್ಭದಲ್ಲಿ ನನ್ನ ವಿರುದ್ಧ ಇಷ್ಟೊಂದು ಕೀಳುಮಟ್ಟದ ಟೀಕೆ ಮಾಡುತ್ತಾರೆಂದು ನಿರೀಕ್ಷಿಸರಲಿಲ್ಲ. ಅವರಿಂದ ಇಂತಹ ಟೀಕೆ ಬಂದಿರುವುದು ಲಿಂಗಾಯತ ಸೇರಿದಂತೆ ಕೆಲ ಸಮಾಜಗಳ ಮತದಾರರ ಮೇಲೆ ಪರಿಣಾಮ ಬೀರಿರುವ ಸಾಧ್ಯತೆ ಇದೆ” ಎಂದು ಅಭಿಪ್ರಾಯಪಟ್ಟರು.

“ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಪಕ್ಷದ ಮುಖಂಡರು ಕಾರ್ಯಕರ್ತರು ಶಕ್ತಿ ಮೀರಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಯಾರೊಬ್ಬರೂ ಬಿಜೆಪಿ ಅಭ್ಯರ್ಥಿಯೊಂದಿಗೆ ಒಳ ಒಪ್ಪಂದ, ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲವೆಂಬ ವಿಶ್ವಾಸ ಇದೆ. ನನ್ನ ಸೋಲಿಗೆ ಪಕ್ಷದ ಯಾರನ್ನೂ ಹೊಣೆ ಮಾಡಲು ಇಚ್ಛಿಸುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭವಿಷ್ಯದಲ್ಲಿ ರಾಜಕೀಯವಾಗಿ ಯಾವುದೇ ಯೋಚನೆಗಳು ಸದ್ಯಕ್ಕೆ ಇಲ್ಲ. ಪಕ್ಷ ಯಾವುದೇ ಜವಾಬ್ದಾರಿ ವಹಿಸಿದರೂ ಅದನ್ನು ನಿರ್ವಹಿಸಿಕೊಂಡು ಇರುತ್ತೇನೆ” ಎಂದರು.

“ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಅವರು ನನಗೆ ಫೋನ್ ಮಾಡಿ, ಚುನಾವಣೆ ಫಲಿತಾಂಶದ
ಬಗ್ಗೆ ವಿವರವಾದ ಮಾಹಿತಿ ಪಡೆದು ಪಡೆದುಕೊಂಡಿದ್ದಾರೆ. ಅಲ್ಲದೆ, ಈ ಸಂಬಂಧ ವರದಿ ನೀಡುವಂತೆಯೂ ಕೇಳಿದ್ದಾರೆ. ಶೀಘ್ರದಲ್ಲೇ ಸೋಲಿಗೆ ಕಾರಣಗಳನ್ನು ಕುರಿತು ವಿವರವಾಗಿ ಅವರ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.

“ಸಚಿವರು, ಶಾಸಕರ ಕ್ಷೇತ್ರದಲ್ಲಿ ಬಿಜೆಪಿ ಲೀಡ್ ಆಗಿರುವ ಕುರಿತು ಪ್ರತಿಕ್ರಿಯಿಸಿದ ಆಲಗೂರ, ಸಚಿವರು, ಶಾಸಕರು ಪಕ್ಷದ ಗೆಲುವಿಗಾಗಿ ಶ್ರಮಿಸಿದ ಪರಿಣಾಮ ನನಗೆ 5,95,552 ಮತಗಳು ಬರಲು ಸಾಧ್ಯವಾಗಿದೆ. ಈ ಹಿಂದಿನ ಯಾವ ಚುನಾವಣೆಯಲ್ಲೂ ಪಕ್ಷಕ್ಕೆ ಇಷ್ಟೊಂದು ಮತಗಳು ಬಂದಿಲ್ಲ. ಆದರೆ, ನನ್ನ ಪ್ರಕಾರ 6.5 ಲಕ್ಷ ಮತಗಳ ನಿರೀಕ್ಷೆ ಇತ್ತು. ಜಿಲ್ಲೆಯಲ್ಲಿ ಇದ್ದ ಮೋದಿ ಪರವಾದ ಅಲೆ, ಹಿಂದುತ್ವದ ಪರಿಣಾಮ ಸೇರಿದಂತೆ ಇತರ ಕಾರಣಗಳಿಂದ ಸೋಲಬೇಕಾಯಿತು” ಎಂದರು.

“ಟಿಕೆಟ್ ನೀಡುವ ಸಂದರ್ಭದಲ್ಲಿ ಪಕ್ಷದಿಂದ ಒಗ್ಗಟ್ಟಿನಿಂದ ನನ್ನೊಬ್ಬನ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿ, ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ಯಾರೊಬ್ಬರೂ ನನ್ನ ವಿರುದ್ಧವಾಗಿ ಚುನಾವಣೆ ಮಾಡಿಲ್ಲ. ನಂಬಿಕೆ ದ್ರೋಹ ಆಗಿಲ್ಲ” ಎಂದರು.

“ಪಕ್ಷದ ಮುಖಂಡರೊಂದಿಗೆ ಆತ್ಮಾವಲೋಕನ ಮಾಡಿ ಕುರಿತು ಸಭೆಯನ್ನು ಚರ್ಚಿಸಲಾಗುವುದು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮತಗಳನ್ನು ಹಾಕಿ ಬೆಂಬಲಿಸಿದ ಜಿಲ್ಲೆಯ ಮತದಾರರಿಗೆ, ಪಕ್ಷದ ಶಾಸಕರು, ಸಚಿವರು, ಮುಖಂಡರು, ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಗೆದ್ದಿರುವ ರಮೇಶ ಜಿಗಜಿಣಗಿ ಅವರನ್ನು ಅಭಿನಂದಿಸುತ್ತಾ ಮುಂಬರುವ ದಿನಗಳಲ್ಲಿ ಅವರು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ ʼಸಂಘರ್ಷ ದಿನʼವಾಗಿ ಆಚರಿಸಲು ನಿರ್ಧಾರ: ಬಾಲರಾಜ ಅರಬರ‌

ಮುಖಂಡರುಗಳಾದ ಹಮೀದ್ ಮುಶ್ರೀಫ್, ಅಬ್ದುಲ್ ಎಂ ಪಾಟೀಲ ಗಣಿಹಾರ, ಸೋಮನಾಥ ಕಳ್ಳಿಮನಿ, ಗಂಗಾಧರ ಸಂಬ ವೈಜನಾಥ ಕರ್ಪೂರಮಠ, ಜಮೀರ್ ಅಹಮದ್ ರಫೀಕ್ ಟಪಾಲ್, ಸಾಹೇಬಗೌಡ ಬಿರಾದಾರ, ಗಡಗಲಾವ, ಸತೀಶ ಅಡವಿ, ಕೃಷ್ಣಾ ಕಾಮಟಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...