ವಿಜಯಪುರ | ʼಖರ್ಗೆ ಅವರನ್ನು ಕೆಣಕಿದ್ರೆ ನೀವೇ ನಾಶವಾಗುತ್ತೀರಿʼ : ಡಿಎಸ್ಎಸ್ ಮುಖಂಡ ಶರಣು ಸಿಂಧೆ

Date:

ಶೋಷಿತ ಸಮುದಾಯದಿಂದ ಬಂದ ಸಚಿವ ಪ್ರಿಯಾಂಕ ಖರ್ಗೆ ಮತ್ತು ಜಿ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡಿ ನಾಶ ಮಾಡಲು ಹೋದರೆ, ನೀವೇ ನಾಶವಾಗಿ ಹೋಗುತ್ತೀರಿ ಎಂದು ವಿಜಯಪುರ ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ಶರಣು ಸಿಂಧೆ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪದ ಕುರಿತಾಗಿ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, “ದಲಿತರನ್ನು ಸಿಎಂ ಆಗೋಕೆ ಬಿಡ್ತಾ ಇಲ್ಲ. ಪ್ರಿಯಾಂಕಾ ಖರ್ಗೆ ಮನೆ ಮುತ್ತಿಗೆ ಹಾಕ್ತೀರಿ. ಮುತ್ತಿಗೆ ಹಾಕಿದ್ರೆ ನಾವು ಸುಮ್ನೆ ಇರಬೇಕಾ? ಅಂಬೇಡ್ಕರ್ ಅನ್ನೋ ಹೆಸರು ನಿಮಗೆ ಫ್ಯಾಷನ್ ಇರಬಹುದು ಆದರೆ ನಮಗೆ ಅಂಬೇಡ್ಕರ್‌ ಅನ್ನೋದು ಉಸಿರು. ಪ್ರಿಯಾಂಕ್ ಖರ್ಗೆ ಅವರ ಮೇಲೆ ಸಲ್ಲದ ಆರೋಪ ಮಾಡುತ್ತಿರುವುದು ಮೂರ್ಖತನದ ಪರಮಾವಧಿ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಆಗಿರುವುದರಿಂದ ನಾವು ಸುಮ್ಮನಿದ್ದೇವೆ. ಬಿಜೆಪಿಗರ ಹಗರಣಗಳನ್ನು ಖರ್ಗೆ ಅವರು ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಅದಕ್ಕಾಗಿಯೇ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಕೂಡಲೇ ಅವರ ಮೇಲೆ ಮಾಡುತ್ತಿರುವ ಆರೋಪಗಳನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ನಮ್ಮ ಸಮುದಾಯ ಸೇರಿದಂತೆ ಸಚಿವರ ಅಭಿಮಾನಿಗಳು ದಂಗೆ ಏಳುವುದು ಖಂಡಿತ” ಎಂದು ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಗರದಲ್ಲಿ ಚಿರತೆ ಪ್ರತ್ಯಕ್ಷ : ಜನರಲ್ಲಿ ಮನೆ ಮಾಡಿದ ಆತಂಕ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...