ವಿಜಯಪುರ | ಸಮಾಜದಲ್ಲಿ ಸೌಹಾರ್ದ ಬದುಕು ಕಲಿಯುವುದೇ ಇಫ್ತಾರ್‌ ಕೂಟ: ಫಾದರ್ ಟಿಯೋಲ್ ಮಾಚಾದೊ

Date:

ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರ ಸಹೋದರಿಯರನ್ನು ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲ, ಎಲ್ಲ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ ಹೇಳಿದರು.

ವಿಜಯಪುರ ಅನೌಪಚಾರಿಕ ಶಿಕ್ಷಣ ಸಂಸ್ಥೆ, ನಗರ ಸ್ಲಮ್ ಅಭಿವೃದ್ಧಿ ಸಮಿತಿ, ವಿಜಯಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿತುಕೊಳ್ಳುವುದೇ ಇಫ್ತಾರ್‌ ಕೂಟದ ಉದ್ದೇಶಚಾಗಿದೆ. ಪ್ರೀತಿ, ಭಾಂದವ್ಯ, ಬ್ರಾತೃತ್ವ ಭಾವನೆಯನ್ನು ಮೂಡಿಸಲು ಈ ಇಫ್ತಾರ್ ಕೋಟವನ್ನು ಆಯೋಜನೆ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಾದರ್‌ ಟಿಯೋಲಾ ಮಾಚೋದಾ

ಪ್ರೊ. ಜೆ ಎಸ್ ಪಾಟೀಲ ಮಾತನಾಡಿ, “ದೇವರು ಮತ್ತು ಧರ್ಮದ ಹೆಸರಿನಲ್ಲಿ ನಡೆಯುವಂತಹ ಯುದ್ಧ ಇನ್ನಾವುದರಲ್ಲಿಯೂ ನಡೆಯುವುದಿಲ್ಲ. ಖಾಸಗಿ ಆಸ್ತಿ ಸಾಮಾಜೀಕರಣ ಮಾಡುವುದರಿಂದ ಇದು ಸಾಮಾಜಿಕ ವಾತಾವರಣ ಅದೆಗೆಡಿಸುವುದಾಗಿದೆ. ನಮ್ಮ ದೇಶವು ಬಹುತ್ವವನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವವನ್ನು ಹೊಂದಿರುವಂತಹ ಸಂವಿಧಾನಕ್ಕೆ ಬದ್ಧವಾದ ದೇಶವಾಗಿದೆ” ಎಂದರು.

ಫಾದರ್ ಫ್ರಾನ್ಸಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಒಬ್ಬ ವ್ಯಕ್ತಿಯನ್ನು ಅರಿಯಬೇಕೆಂದರೆ ಆ ವ್ಯಕ್ತಿಯ ಜೊತೆ ಬೆರೆತಾಗ ಮಾತ್ರ ಆ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ವ್ಯಕ್ತಿಯನ್ನು ಅರ್ಥ ಮಾಡಿಕೊಂಡರೆ ಸಮಾಜವನ್ನು ಅರ್ಥ ಮಾಡಿಕೊಂಡಂತೆ. ಸಮಾಜದಲ್ಲಿರುವ ಇತರ ಧರ್ಮೀಯರನ್ನು ಸೋದರತ್ವದಿಂದ ಕಾಣುವುದು ಮುಖ್ಯವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 32 ಚೆಕ್ ಪೋಸ್ಟ್, ದಾಖಲೆ ರಹಿತ ನಗದು, ಚಿನ್ನ, ಅಕ್ರಮ ಮದ್ಯದ ಮೇಲೆ ನಿಗಾ: ಡಿಸಿ

ಕಾರ್ಯಕ್ರಮಕ್ಕೂ ಮೊದಲು ಭಾರತ ಸಂವಿಧಾನ ಪೀಠಿಕೆ ಓದುವುದರ ಮೂಲಕ ಆರಂಭಿಸಿದರು.

ಈ ಸಂದರ್ಭದಲ್ಲಿ ಡಿವಿಪಿ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, ಮಹೇಜ ಬಿನ್ ಖಾಜಿ ಜಮಾತ್ ಮಹಿಳಾ ವಿಭಾಗದ ಜಿಲ್ಲಾ ಮುಖ್ಯಸ್ಥರು, ಅಕ್ರಮ ಮಾಶಾಳಕರ, ರಾಜೇಶ್ವರಿ ಮಠಪತಿ, ಮುತ್ತುಣ್ಣ ಭೂವಿ, ಎದ್ದೇಳು ಕರ್ನಾಟಕದ ಮಹಮ್ಮದ್ ಅಬ್ದುಲ್ ಖದೀರ್, ಜಮಾತ್ ಇಸ್ಲಾಮಿ ಸ್ಟಾನಿಕ ಅಧ್ಯಕ್ಷ ಹುಲಿಕಟ್ಟಿ ಸರ್, ದಸ್ತಗಿರಿ ಮುಲ್ಲಾ, ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಎಐಡಿಎಸ್‌ಒ ಜಿಲ್ಲಾ ಮುಂಖಂಡೆ ಕಾವೇರಿ ರಜಪೂತ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...