ವಿಜಯಪುರ | ಸಾರ್ವಜನಿಕ ಈಜುಕೊಳದಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ಆಗ್ರಹ

Date:

ಸಾರ್ವಜನಿಕ ಈಜುಕೊಳದಲ್ಲಿ ಅವ್ಯವಹಾರ ಕಂಡುಬರುತ್ತಿದ್ದು, ವ್ಯವಸ್ಥಾಪಕಿಯನ್ನು ಕೂಡಲೇ ಬದಲಾವಣೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆ ಕನಕದಾಸ ಬಡಾವಣೆಯ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

“ಜಿಲ್ಲೆಯ ಕನಕದಾಸ ಬಡಾವಣೆಯಲ್ಲಿ ಕಳೆದ ಒಂದು ವರ್ಷದಿಂದ ಈಜುಗೊಳ ಪ್ರಾರಂಭವಾಗಿದ್ದು, ಈ ಈಜುಕೊಳದಲ್ಲಿ ಪ್ರತಿನಿತ್ಯ ದೈನಂದಿನ ತರಬೇತಿಗಾಗಿ ಬಹುತೇಕರು ಆಗಮಿಸುತ್ತಿದ್ದಾರೆ. ಆದರೆ, ಈಗ ಚಳಿಗಾಲವಿರುವುದರಿಂದ ಈಜುಗೊಳಕ್ಕೆ ಕೆಲವು ಮಂದಿ ಬರುತ್ತಿದ್ದಾರೆ” ಎಂದು ತಿಳಿಸಿದರು.

“ಈಜುಕೊಳಕ್ಕೆ ನೇಮಕವಾಗಿರುವ ಮಹಿಳಾ ಮ್ಯಾನೇಜರ್ ಪತ್ರಿನಿತ್ಯ ಕೆಲಸಕ್ಕೆ ಸರಿಯಾಗಿ ಬರುವುದಿಲ್ಲ. ಇದರಿಂದ ಉಳಿದ ಸಿಬ್ಬಂದಿಯೂ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಜೊತೆಗೆ ಸಿಬ್ಬಂದಿ ನಡುವೆ ಹೊಂದಾಣಿಕೆಯೂ ಇಲ್ಲ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿದಿನ ಈಜುಗೊಳಕ್ಕೆ ಬರುವ ಜನರಿಗೆ ಟಿಕೆಟ್ ನೀಡುವುದು ಮಹಿಳಾ ಮ್ಯಾನೇಜರ್‌ ಕೆಲಸ. ಆದರೆ, ಇವರು ಟಿಕೆಟ್‌ ನೀಡಲು ಡಿ ಗ್ರೂಪ್‌ ಸಿಬ್ಬಂದಿಗೆ ವಹಿಸಿ ಹೊರಗಡೆ ಹೋಗುತ್ತಾರೆ. ಇವರು ಯಾವುದೇ ರೀತಿಯ ಕಂಪ್ಯೂಟರ್ ಜ್ಞಾನ ಹಾಗೂ ಅಕೌಂಟ್ ಬಗ್ಗೆ ಅನುಭವ ಹೊಂದಿಲ್ಲ” ಎಂದು ಆರೋಪಿಸಿದರು.

ಈಜುಕೊಳದ ಮಾಹಿತಿ
ಈಜುಕೊಳದ ಬಿಲ್‌ ಮತ್ತು ಅಕ್ರಮ ಬಿಲ್‌ ಪಟ್ಟಿ

“ಟಿಕೆಟ್‌ ನೀಡುವಿಕೆಯಲ್ಲಿ ಗೋಲಮಾಲ್ ನಡೆಯುತ್ತಿದ್ದು, ಒಬ್ಬರಿಗೆ ₹100 ಶುಲ್ಕ ನಿಗದಿಪಡಿಸಲಾಗಿದೆ. ಒಟ್ಟಿಗೆ ಐದು ಮಂದಿ ಬಂದರೆ, ಒಬ್ಬರ ಹೆಸರು ಬರೆದು + 4= ₹500 ಅಂತ ಟಿಕೇಟಿನ ಮೇಲೆ ಬರೆದು ಜನರಿಗೆ ಕೊಡುತ್ತಾರೆ. ಆದರೆ ರಿಜಿಸ್ಟರ್‌ನಲ್ಲಿ ₹100 ಅಂತ ಬರೆಯುತ್ತಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್‌ ದರ ಏರಿಕೆ; ಜೂ.22ರ ಕರ್ನಾಟಕ ಬಂದ್‌ ಕರೆ ವಾಪಸು

“ಅಕ್ರಮದ ಕುರಿತು ವಿಚಾರಿಸಿದರೆ ʼನಿಮಗೇನು ಮಾಡುವುದು ಮುಚ್ಚಿಕೊಂಡ ಸ್ವಿಮಿಂಗ್ ಮಾಡಿʼ ಅಂತ ನಮ್ಮ ಮೇಲೆಯೇ ಚಿರಾಡುತ್ತಾರೆ. ಅಂದರೆ ಇವರು ಸರ್ಕಾರಕ್ಕೆ ತೋರಿಸುವ ಮೊತ್ತ ₹100 ಮಾತ್ರ, ಮಿಕ್ಕ ₹400 ಇವರ ಪಾಕೆಟ್‌ಗೆ ಹೋಗುತ್ತದೆ. ಇದನ್ನು ಪರಿಶೀಲನೆ ಮಾಡಲು ಸಹಾಯಕ ನಿರ್ದೇಶಕರಿಗೆ ಹಲವು ಬಾರಿ ತಿಳಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

“ಎಲ್ಲ ದಾಖಲೆಗಳ ಮಾಹಿತಿಯನ್ನು ಪತ್ರದೊಂದಿಗೆ ಲಗತ್ತಿಸಿದ್ದೇವೆ. ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮೋಸ ಮಾಡಿರುವುದನ್ನು ಗಮನಿಸಿ ದಂಡದ ಸಮೇತ ಹಣವನ್ನು ವಸೂಲಿ ಮಾಡಬೇಕು. ಜೊತೆಗೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಕನಕದಾಸ ಬಡಾವಣೆಯ ನಿವಾಸಿಗಳು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...