ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

Date:

ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್‌ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಬಂದು ಬೊಮ್ಮನಹಳ್ಳಿ ಗ್ರಾಮದ ಮಹಿಳೆಯರು ಉಪ ತಹಶೀಲ್ದಾ‌ರ್ ಖಾದೀಮ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದ ಭೀಮಾಬಾಯಿ ಮಾತನಾಡಿ, “ಗ್ರಾಮದಲ್ಲಿ ಬಹಳ ದಿನಗಳಿಂದ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಹಲವಾರು ಗಂಭೀರ ಸಮಸ್ಯೆಗಳು ಉಲ್ಬಣಗೊಂಡಿವೆ. ಬೆಳಿಗ್ಗೆಯಿಂದಲೇ ಮದ್ಯ ಮಾರಾಟ ಆರಂಭವಾಗುತ್ತಿರುವುದರಿಂದ ಕೂಲಿ ಕಾರ್ಮಿಕರು, ಯುವಕರು ತಮ್ಮ ಕೆಲಸಗಳನ್ನು ಬಿಟ್ಟು ಮದ್ಯಪಾನ ಮಾಡಿ ಮದ್ಯದ ಅಮಲಿನಲ್ಲಿ ಜಗಳ, ರಾದ್ಧಾಂತಗಳನ್ನು ಮಾಡುತ್ತಿದ್ದಾರೆ. ಹಲವಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ನೂರಾರು ಮಹಿಳೆಯರು ಕಣ್ಣೀರಿನಲ್ಲಿಯೇ ಜೀವನ ನಡೆಸುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ; ತಿಳಿಯದೆ ಮಣ್ಣು ಸುರಿದ ಜೆಸಿಬಿ; ಮಹಿಳೆ ಸಾವು

“ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಯುವಂತೆ ಇಲಾಖೆಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಟಾಚಾರಕ್ಕೆ ಕೆಲವು ದಿನಗಳವರೆಗೆ ಮಾರಾಟ ನಿಲ್ಲುತ್ತದೆ. ಮತ್ತೆ ಆರಂಭವಾಗುತ್ತದೆ. ಹಾಗಾಗಿ ಆದಷ್ಟು ಬೇಗ ಇದನ್ನು ನಿಲ್ಲಿಸಿ, ಇಲ್ಲದೆ ಹೋದಲ್ಲಿ ನಾವೆಲ್ಲರೂ ಮಹಿಳೆಯರು ಸೇರಿ ತೀವ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.

ಗ್ರಾಮದ ಪದ್ಮಾವತಿ, ಲಕ್ಷ್ಮೀಬಾಯಿ, ಮಲ್ಲಮ್ಮ, ಜಯಶ್ರೀ, ಬಸಮ್ಮ, ಲಿಂಬಮ್ಮ, ಹಣಮವ್ವ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...