ವಿಜಯಪುರ | ಕೃಷ್ಣೆಯ ತಟದಲ್ಲಿ ಅಕ್ರಮ ಎರೆಮಣ್ಣು ಸಾಗಾಟ; ಕ್ರಮಕ್ಕೆ ಒತ್ತಾಯ

Date:

ಸರ್ಕಾರದ ಅಧೀನದಲ್ಲಿರುವ ಕೃಷ್ಣಾ ನದಿ ದಂಡೆಯ ಮುಳುಗಡೆ ಪ್ರದೇಶದ ಜಮೀನುಗಳಲ್ಲಿನ ಫಲವತ್ತಾದ ಎರೆಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುದ್ದೇಬಿಹಾಳ ತಾಲೂಕು ಅಧ್ಯಕ್ಷ ಸಂಗಯ್ಯ ಸಾರಂಗಮಠ್ ಒತ್ತಾಯಿಸಿದರು.

ನದಿ ದಂಡೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದರಿಂದ ಪಾತ್ರದ ಹರಿವಿಗೆ ತೊಡಕಾಗಿ ಭವಿಷ್ಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆಗಳಿವೆ. ಕೂಡಲೇ ಇಂಥ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ತಡೆಗಟ್ಟಬೇಕು ಎಂದು ಡಿಸಿ, ಎಸ್‌ಪಿ, ತಹಶೀಲ್ದಾರ್, ಜಲ ಸಂಪನ್ಮೂಲ ಮತ್ತು ಬೃಹತ್ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತಂಗಡಗಿ ಭಾಗದಿಂದ ಕೊನೆಹಳ್ಳಿ ಅಯ್ಯನಗುಡಿವರೆಗೂ ಅಕ್ರಮವಾಗಿ ಎರೆಮಣ್ಣು ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಈ ಪ್ರದೇಶದಲ್ಲಿ ಹಿಟಾಚಿ, ಜೆಸಿಬಿ, ಟೌರಸ್ ಟಿಪ್ಪ‌ರ್, ಟ್ರ್ಯಾಕ್ಟರ್‌ಗಳು ಹಗಲು ರಾತ್ರಿ ಎನ್ನದೆ ಮಣ್ಣು ಸಾಗಿಸುವ ದಂಧೆಯಲ್ಲಿ ನಿರತವಾಗಿವೆ. ಈ ಬಗ್ಗೆ ತಹಶೀಲ್ದಾರ್, ಪಿಎಸ್‌ಐ ಅವರಿಗೆ ದೂರವಾಣಿ ಮೂಲಕ ತಡೆಗಟ್ಟುವಂತೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ಅವರು ಮನವಿಯಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ರೈತರು ಎಣ್ಣೆಕಾಳು ಬೆಳೆಗಳ ಉತ್ಪಾದನೆ ಮೂಲಕ ಆದಾಯ ಹೆಚ್ಚಿಸಿಕೊಳ್ಳಬೇಕು: ಜಂಟಿಕೃಷಿ ನಿರ್ದೇಶಕಿ ರೂಪಾ ಎಲ್

ನದಿ ಪಾತ್ರದಲ್ಲಿ ಈ ರೀತಿ ಮಣ್ಣು ಅಗೆದರೆ ನೀರಿನ ಹರಿಯುವಿಕೆಯಲ್ಲಿ ಏರುಪೇರಾಗುತ್ತದೆ. ದೊಡ್ಡ ಗುಂಡಿಗಳು ಬಿದ್ದು ಅವುಗಳಲ್ಲಿ ನೀರು ಸಂಗ್ರಹವಾಗಿ ಇದರ ಅರಿವಿಲ್ಲದೆ ಜನ, ಜಾನುವಾರುಗಳು ಪ್ರಾಣ ಕಳೆದುಕೊಳ್ಳುವ ಸಂಭವ ಹೆಚ್ಚಾಗಿದೆ. ಅಲ್ಲದೇ ಪಂಚಾಯತಿ ಅಥವಾ ಕಂದಾಯ ಇಲಾಖೆಗೆ ಬರಬೇಕಾದ ರಾಯಲ್ಟಿ ರೂಪದ ಶುಲ್ಕವೂ ಬರದೆ ವಂಚನೆ ಆಗತೊಡಗಿದೆ. ಅಧಿಕಾರಿಗಳು ಕೂಡಲೇ ಎಚ್ಚೆತ್ತು ಇಂಥ ಅಕ್ರಮ ದಂಧೆ ತಡೆಯಬೇಕು. ಇಲ್ಲದಿದ್ದರೆ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...