ವಿಜಯಪುರ | ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ವಿರುದ್ಧದ ಅನಿರ್ದಿಷ್ಟಾವಧಿ ಧರಣಿ ಅಂತ್ಯ

Date:

ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ ತಂಡ ರಚನೆ ಮಾಡಿದ್ದನ್ನು ಪರಿಗಣಿಸಿ, ಯುವಜನ ಸೇನೆ ಸಂಘಟನೆಯು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದಿದೆ.

ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ಅದೇಶಿಸಿರುವ ತಂಡ ರಚನೆಯ ಆದೇಶ ಪತ್ರವನ್ನು ಮುದ್ದೇಬಿಹಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್ ಎಸ್ ಮಸಳಿಯವವರು ಯುವಜನ ಸೇನೆ ಹೋರಾಟಗಾರರಿಗೆ ಹಸ್ತಾಂತರಿಸಿ, ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಸೇರಿದಂತೆ ಇತರರಿಗೆ ಕಬ್ಬಿನ ಹಾಲು ಕುಡಿಸುವ ಮೂಲಕ ಧರಣಿ ಅಂತ್ಯಗೊಳಿಸಿದರು.

“ತನಿಖೆಯಲ್ಲಿ ಲೋಪ ಕಂಡುಬಂದರೆ ಮತ್ತೇ ಹೋರಾಟ ಮುಂದುವರಿಸಬೇಕಾಗುತ್ತದೆ” ಎಂದು ಶಿವಾನಂದ ವಾಲಿ ಅಧಿಕಾರಿಗೆ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮ ಪಂಚಾಯಿತಿಗೆ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ಹಲವು ವರ್ಷಗಳಿಂದ ವಿದ್ಯುತ್ ಉತ್ಪಾದಿಸಿದ ತೆರಿಗೆ ತುಂಬದೆ ಕೊಟ್ಯಂತರ ರೂಪಾಯಿ ವಂಚಿಸಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾ.ಪಂ ಎದುರು ಯುವಜನ ಸೇನೆ ಕಾರ್ಯಕರ್ತರು ಕಳೆದ 5 ದಿನಗಳಿಂದ ಅನಿರ್ದಿಷ್ಟಾವಧಿಯ ಧರಣಿ ನಡೆಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಹೆಚ್ ಸಿ ಮಹದೇವಪ್ಪ ಭೇಟಿ

ಧರಣಿ ಸ್ಥಳಕ್ಕೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಭೇಟಿ ನೀಡಿ ಹೋರಾಟಗಾರರ ಬೇಡಿಕೆ ಆಲಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ, ಗಂಗು ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ಮಲ್ಲು ತಳವಾರ ಬಿಜ್ಜುರು ಇನ್ನಿತರರು ಇದ್ದರು.

ತನಿಖಾ ತಂಡ: ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ತನಿಖಾ ತಂಡದ ಮುಖ್ಯಸ್ಥರಾಗಿದ್ದಾರೆ. ಡಿ ಬಿ ಮೇಂದಳಿ, ಗ್ರಾಪಂ ಪಿಡಿಒ(ಆಡಳಿತ) ಉಮೇಶ ರಾಠೋಡ, ಜಿಪಂ ಎಸ್‌ಡಿಸಿ(ಆಡಳಿತ ಶಾಖೆ) ಮಹೇಶ ಮಠಪತಿ, ಜಿಪಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರವಿಂದ ಬಿರಾದಾರ ತಂಡದ ಸದಸ್ಯರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...