ವಿಜಯಪುರ | ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದೆ: ಸಚಿವ ಶಿವಾನಂದ ಪಾಟೀಲ

Date:

ಪ್ರಸ್ತುತ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದ್ದು, ಸರ್ಕಾರದ ಪ್ರಣಾಳಿಕೆಯಲ್ಲಿನ ಘೋಷಣೆಯಂತೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಜವಳಿ ಹಾಗೂ ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಎಂಪಿಎಸ್ ಶಾಲೆಯಲ್ಲಿ 15 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿ ದುರಸ್ತಿಗೆ ಭೂಮಿ ಪೂಜೆ, ಮುದ್ದೇಶ್ವರ ಮಂಗಲ ಭವನದ ಬಳಿ ಹತ್ತು ಲಕ್ಷ ವೆಚ್ಚದ ರಂಗಮಂದಿರ ಭೂಮಿ ಪೂಜೆ, ಸಿದ್ದರ ಕಾಲೋನಿಯಲ್ಲಿ 20 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ನಿಂತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

“ನಿಡಗುಂದಿ ಹೃದಯ ಭಾಗದಲ್ಲಿ ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದೆ. ನಿಡಗುಂದಿ ತಾಲೂಕು ಕೇಂದ್ರವಾಗಿದ್ದು, ಸಾಕಷ್ಟು ವಹಿವಾಟು ಚಟುವಟಿಕೆಗೆ ಗ್ರಾಮೀಣ ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ಇಂಗಿಸುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಲೋಕಾರ್ಪಣೆಯಾಗಿದೆ. ಇದನ್ನು ಉತ್ತಮ ನಿರ್ವಹಣೆ ಮಾಡುವ ಮೂಲಕ ಜನರಿಗೆ ನಿರಂತರ ಉಪಯೋಗವಾಗುವಂತೆ ಕಾರ್ಯ ಮಾಡಬೇಕು” ಎಂದರು.

“ಇಂದಿರಾ ಕ್ಯಾಂಟೀನಲ್ಲಿ ಟಿಫನ್‌ಗೆ 5 ರೂ., ಊಟಕ್ಕೆ 10 ರೂಪಾಯಿ ನಿಗದಿ ಮಾಡಿದ್ದು, ಇದು ಬಡವರಿಗೆ ಅನುಕೂಲವಾಗಲಿದೆ. ಎಂಪಿಎಸ್ ಶಾಲೆ ಕೊಠಡಿ ದುರಸ್ತಿಗೆ ಹೆಚ್ಚುವರಿಯಾಗಿ ಪಟ್ಟಣ ಪಂಚಾಯಿತಿಯಿಂದ 10 ಲಕ್ಷ ಹಾಗೂ ತಾಲೂಕು ಪಂಚಾಯಿತಿಯಿಂದ 10 ಲಕ್ಷ ರೂ. ಹಣ ಒದಗಿಸುವ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆ ಎಲ್ಲ ಕೊಠಡಿಗಳು ದುರಸ್ತಿಯಾಗಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು” ಎಂದರು.

ಈ ಸುದ್ದಿ ಒದಿದ್ದೀರಾ? ಹಾವೇರಿ | ಸರ್ಕಾರಿ ಶಾಲೆಗೆ 1 ಲಕ್ಷ 12 ಸಾವಿರ ಸಾಮಗ್ರಿಗಳು ವಿತರಣೆ

ಸಚಿವರು ಉಪ್ಪಿಟ್ಟು, ಕೇಸರಿ ಬಾತ್ ಸವಿದು, ಈ ವೇಳೆ ಕಮದಾಳ ಪುನರ್ವಸತಿ ಕೇಂದ್ರದಲ್ಲಿನ ಶಾಲೆ ಕಟ್ಟಡಕ್ಕೆ ಮಂಜೂರಾದ 61.59 ಲಕ್ಷ ರೂ. ಹಣದಲ್ಲಿ ಉಳಿಕೆ ಮೊತ್ತವನ್ನು ಶಾಲೆ ಕಾಂಪೌಂಡ್ ಎತ್ತರಗೊಳಿಸಲು ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಶಿಕ್ಷಕ ಸಂಘದ ಮುಖಂಡರು ಸಚಿವರಿಗೆ ಮನವಿ ಸಲ್ಲಿಸಿದರು.

ಜಿವಿವಿಎಸ್ ಶಿಕ್ಷಣ ಸಂಸ್ಥೆ ಚೇರ್ಮನ್ ಸಿದ್ದಣ್ಣ ನಾಗಠಾಣ, ಪಪಂ ಅಧ್ಯಕ್ಷ ದೇಸಾಯಿ ಜಂಬಕ್ಕ ವಿಭೂತಿ, ಉಪಾಧ್ಯಕ್ಷೆ ಗೌರಮ್ಮ ಹುಗ್ಗಿ, ತಶೀಲ್ದಾರ್‌ ಎ ಡಿ ಅಮರವಾಡಗಿ, ತಾಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಪಂ ಜೆಇ ಅಶ್ರಫ್ ಅಲಿ ಮಕನಾದಾರ, ಮುಖಂಡರಾದ ಪರಶುರಾಮ ಕಾರಿ, ಎಂ ಎಂ ಮುಲ್ಲಾ, ಶೇಖರ ರೊಡಗಿ, ಸಂಗಮೇಶ ಕೆಂಭಾವಿ, ಗಂಗಾಧರ ವಾರದ, ಪಪಂ ಸದಸ್ಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...